AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಯಾವಾಗ ಆರಂಭಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಇಂದಿನಿಂದ (ಆಗಸ್ಟ್ 8) ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಆರಂಭಿಸುತ್ತಿದ್ದಾರೆ.

‘ಪಯಣ ಶುರುವಾಗಿದೆ’; ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಅಪ್​ಡೇಟ್ ಕೊಟ್ಟ ಯಶ್
ಯಶ್-ವೆಂಕಟ್
ರಾಜೇಶ್ ದುಗ್ಗುಮನೆ
| Edited By: |

Updated on:Aug 08, 2024 | 11:30 AM

Share

‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಬಗ್ಗೆ ಯಶ್ ಅವರು ಇಂದು (ಆಗಸ್ಟ್ 8) ಬೆಳ್ಳಂಬೆಳಿಗ್ಗೆಯೇ ಅಪ್​ಡೇಟ್ ಕೊಟ್ಟಿದ್ದಾರೆ. ‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ. ಅಂದುಕೊಂಡ ದಿನಾಂಕದಂದು ಸಿನಿಮಾ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ವೆಂಕಟ್ ಜೊತೆ ಇರೋ ಫೋಟೋನ ಯಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​ಗೆ ಅರ್ಧಗಂಟೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು. ಈ ವೇಳೆ ಅವರ ಪತ್ನಿ ರಾಧಿಕಾ ಪಂಡಿತ್ ಹಾಗೂ ನಿರ್ಮಾಪಕ ವೆಂಕಟ್ ಕೂಡ ಇದ್ದರು. ಈ ಬೆನ್ನಲ್ಲೆ ಇಂದಿನಿಂದ (ಆಗಸ್ಟ್ 8) ಬೆಂಗಳೂರಿನ ಹೊರವಲಯದಲ್ಲಿ ಶೂಟಿಂಗ್ ಆರಂಭ ಆಗಿದೆ.

View this post on Instagram

A post shared by Yash (@thenameisyash)

ಆಗಸ್ಟ್ 8ರಂದು ಶೂಟಿಂಗ್ ಆರಂಭಿಸುವುದಕ್ಕೂ ಒಂದು ಕರಣ ಇದೆ. ಎಂಟನ್ನು ಯಶ್ ಅವರು ಲಕ್ಕಿ ಎಂದು ಪರಿಗಣಿಸುತ್ತಾರೆ. ಅವರ ಹುಟ್ಟಿದ್ದು ಕೂಡ ಎಂಟಕ್ಕೆ (ಜನವರಿ 8). ಇಂದಿನ ದಿನಾಂಕದಲ್ಲಿ ಎಲ್ಲವೂ ಎಂಟೇ ಇದೆ. 8-8-2024 (2+0+2+4=8). ಈ ಕಾರಣಕ್ಕೆ ಆಗಸ್ಟ್ 8ರಿಂದ ಶೂಟಿಂಗ್ ಆರಂಭಿಸಲಾಗಿದೆ ಎಂದು ವರಯಲಾಗಿದೆ.

ಇದನ್ನೂ ಓದಿ: ಲಕ್ಕಿ ನಂಬರ್ ಡೇಟ್​ನಿಂದ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ ಯಶ್

ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್​ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ರಿವೀಲ್ ಆಗಬೇಕಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ದೊಡ್ಡ ಬಜೆಟ್​ನಲ್ಲಿ ಮೂಡಿ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:02 am, Thu, 8 August 24

Follow Us
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ