AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಶೂಟಿಂಗ್​ ಮುಗಿಸಿದ ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ

ಸರಿಯಾಗಿ ಒಂದು ವರ್ಷದ ಹಿಂದೆ ಡಾ. ರಾಜ್​ಕುಮಾರ್​ ಹುಟ್ಟುಹಬ್ಬದ ದಿನ ‘ದ ಜಡ್ಜ್​ಮೆಂಟ್’ ಸಿನಿಮಾದ ಚಿತ್ರೀಕರಣ ಆರಂಭ ಆಗಿತ್ತು. ಈ ವರ್ಷ ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೂಟಿಂಗ್​ ಮುಕ್ತಾಯವಾಗಿದೆ. ಅಂದುಕೊಂಡ ಸಮಯದಲ್ಲಿ ಚಿತ್ರೀಕರಣ ಪೂರ್ಣಗೊಂಡಿದ್ದಕ್ಕೆ ಚಿತ್ರತಂಡದವರಿಗೆ ಖುಷಿ ಆಗಿದೆ. ಆ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಿದ್ದಾರೆ.

ಅಣ್ಣಾವ್ರ ಹುಟ್ಟುಹಬ್ಬದ ದಿನವೇ ಶೂಟಿಂಗ್​ ಮುಗಿಸಿದ ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ
‘ದ ಜಡ್ಜ್​ಮೆಂಟ್​’ ಸಿನಿಮಾ ತಂಡ
Follow us
ಮದನ್​ ಕುಮಾರ್​
|

Updated on: Apr 24, 2024 | 10:51 PM

ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಅವರು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ‘ದ ಜಡ್ಜ್​ಮೆಂಟ್’ (The Judgement) ಸಿನಿಮಾದ ಶೂಟಿಂಗ್​ ಇಂದು (ಏಪ್ರಿಲ್​ 24) ಪೂರ್ಣಗೊಂಡಿದೆ. ‘ಜಿ9 ಕಮ್ಯುನಿಕೇಷನ್​ ಮೀಡಿಯಾ ಆ್ಯಂಡ್​ ಎಂಟರ್​ಟೇನ್ಮೆಂಟ್​’ ಸಂಸ್ಥೆಯ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ರವಿಚಂದ್ರನ್ ಜೊತೆ ಧನ್ಯ ರಾಮ್​ಕುಮಾರ್, ದಿಗಂತ್, ಮೇಘನಾ ಗಾಂವ್ಕರ್, ನಾಗಾಭರಣ, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ರವಿಶಂಕರ್ ಗೌಡ, ರಂಗಾಯಣ ರಘು, ಸುಜಯ್ ಶಾಸ್ತ್ರಿ ರೇಖಾ ಕೂಡ್ಲಿಗಿ, ಕೃಷ್ಣ ಹೆಬ್ಬಾಳೆ ಮುಂತಾದ ಕಲಾವಿದರು ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಡಾ. ರಾಜ್​ಕುಮಾರ್​ ಅವರ ಜನ್ಮದಿನದಂದು (Dr Rajkumar Birthday) ಶೂಟಿಂಗ್​ ಪೂರ್ಣಗೊಂಡಿರುವುದು ವಿಶೇಷ. ಯಾಕೆಂದರೆ, ಕಳೆದ ವರ್ಷ ಇದೇ ದಿನ ಈ ಸಿನಿಮಾದ ಚಿತ್ರೀಕರಣ ಆರಂಭ ಆಗಿತ್ತು.

ಅನೂಪ್ ಸೀಳಿನ್ ಅವರು ‘ದ ಜಡ್ಜ್​ಮೆಂಟ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಇಂದು ಶೂಟಿಂಗ್​ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರತಂಡದವರು ಸುದ್ದಿಗೋಷ್ಠಿ ನಡೆಸಿ ಕೆಲವು ವಿಚಾರಗಳನ್ನು ಹಂಚಿಕೊಂಡರು. ಈ ಸಿನಿಮಾಗೆ ಗುರುರಾಜ ಕುಲಕರ್ಣಿ ನಿರ್ದೇಶನ ಮಾಡುತ್ತಿದ್ದಾರೆ. ‘ನಮ್ಮ ಸಿನಿಮಾದ ಶೂಟಿಂಗ್​ ಇಂದು ಪೂರ್ಣಗೊಂಡಿದೆ. ಕಾಕತಾಳೀಯ ಎಂದರೆ ನಮ್ಮ ಸಿನಿಮಾ ಚಿತ್ರೀಕರಣ ಕಳೆದ ವರ್ಷ ಡಾ. ರಾಜ್​ಕುಮಾರ್ ಹುಟ್ಟುಹಬ್ಬದ ದಿನವೇ ಶುರುವಾಗಿತ್ತು. ಈ ವರ್ಷ ಅವರ ಹುಟ್ಟುಹಬ್ಬದ ದಿನವೇ ಮುಕ್ತಾಯ ಆಗಿದೆ’ ಎಂದು ಗುರುರಾಜ ಕುಲಕರ್ಣಿ ಹೇಳಿದರು.

‘ನಮ್ಮ ಸಿನಿಮಾ ಇಷ್ಟು ಸರಾಗವಾಗಿ ಶೂಟಿಂಗ್​ ಮುಕ್ತಾಯಗೊಳಿಸಲು ರವಿಚಂದ್ರನ್ ಹಾಗೂ ಎಲ್ಲ ಕಲಾವಿದರು, ತಂತ್ರಜ್ಞರ ಸಹಕಾರವೇ ಕಾರಣ. ಅವರಿಗೆಲ್ಲ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ. ಈ ಸಿನಿಮಾ ನನ್ನನ್ನೂ ಸೇರಿದಂತೆ ಐವರು ನಿರ್ಮಾಪಕರು ನಿರ್ಮಾಣ ಮಾಡಿದ್ದೇನೆ. ಕೋರ್ಟ್ ರೂಮ್ ಥ್ರಿಲ್ಲರ್ ಕಥಾಹಂದರ ಇರುವ ಈ ಸಿನಿಮಾವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ನಿರ್ದೇಶಕರು ಹೇಳಿದ್ದಾರೆ. ‘ದೊಡ್ಡ ಪಾತ್ರವರ್ಗ ಹಾಗೂ ತಂತ್ರಜ್ಞರ ತಂಡವನ್ನು ಹೊಂದಿರುವ ನಮ್ಮ ಸಿನಿಮಾ ಯಾವುದೇ ತೊಂದರೆ ಇಲ್ಲದೆ ಶೂಟಿಂಗ್​ ಪೂರ್ಣಗೊಳಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಧನ್ಯವಾದ’ ಎಂದು ನಿರ್ಮಾಪಕರಾದ ರಾಮು ರಾಯಚೂರು ಹಾಗೂ ಶರದ್ ನಾಡಗೌಡ ಹೇಳಿದರು. ನಿರ್ಮಾಪಕರಾದ ವಿಶ್ವನಾಥ್ ಗುಪ್ತ ಮತ್ತು ರಾಜಶೇಖರ ಪಾಟೀಲ್ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಇದನ್ನೂ ಓದಿ: ರಾಜ್​ಕುಮಾರ್ ಜನ್ಮದಿನ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

‘ಈ ಸಿನಿಮಾದಲ್ಲಿ ಅಭಿನಯಿಸಿರುವುದಕ್ಕೆ ಖುಷಿ ಆಗಿದೆ‌. ಈ ಚಿತ್ರತಂಡದವರು ಕಲಾವಿದರನ್ನು ನೋಡಿಕೊಂಡ ರೀತಿ ಶ್ಲಾಘನೀಯ’ ಎಂದಿದ್ದಾರೆ ಧನ್ಯಾ ರಾಮ್​ಕುಮಾರ್. ‘ಈ ಚಿತ್ರತಂಡಕ್ಕೆ ತಡವಾಗಿ ಬಂದು ಸೇರಿಕೊಂಡವಳು ನಾನೇ. ರವಿಚಂದ್ರನ್ ಅವರ ಜತೆ ನಟಿಸಿದ್ದು ಸಂತೋಷ ತಂದಿದೆ. ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬದ ದಿನ ಶುರುವಾಗಿ, ಈ ವರ್ಷ ಅವರ ಹುಟ್ಟುಹಬ್ಬದ ದಿನವೇ ಶೂಟಿಂಗ್​ ಮುಕ್ತಾಯ ಆಗಿರುವುದು ನಿಜಕ್ಕೂ ಅಚ್ಚರಿ ಆಗಿದೆ. ಅಣ್ಣಾವ್ರ ಆಶೀರ್ವಾದ ನಮ್ಮ ತಂಡದ ಮೇಲಿದೆ’ ಎಂದು ಮೇಘನಾ ಗಾಂವ್ಕರ್ ಹೇಳಿದರು. ಪೂರ್ಣಿಮಾ ರಾಮ್​ಕುಮಾರ್ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ಗೀತರಚನಕಾರ ಪ್ರಮೋದ್ ಮರವಂತೆ, ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಂಕಲನಕಾರ ಕೆಂಪರಾಜ್ ಕೂಡ ಸುದ್ದಿಗೋಷ್ಠಿಯಲ್ಲಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ