AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 30, 2023 | 2:31 PM

Share

ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ಅವರಿಗೆ ಇಂದು (ಮೇ 30) ಬರ್ತ್​ಡೇ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಎಲ್ಲರೂ ಶುಭಕೋರುತ್ತಿದ್ದಾರೆ. ಇದರ ಜೊತೆಗೆ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿದ್ದಾರೆ. ರವಿಚಂದ್ರನ್ ಅವರನ್ನು ನೋಡಿಯೇ ಮನೆಗೆ ತೆರಳುವುದಾಗಿ ಅವರು ಹೇಳುತ್ತಿದ್ದಾರೆ. ಇದರ ಜೊತೆಗೆ ರವಿಚಂದ್ರನ್ ನಟನೆಯ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ. ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ ರವಿಚಂದ್ರನ್ ಅವರ ಲುಕ್ ರಿವೀಲ್ ಮಾಡಿದೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದಲ್ಲಿ ‘ದಿ ಜಡ್ಜ್​​ಮೆಂಟ್’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರತಂಡ ಈಗಾಗಲೇ ಎರಡು ಬಾರಿ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅವರ ಲುಕ್ ರಿವೀಲ್ ಆಗಿರಲಿಲ್ಲ. ಈಗ ಕ್ರೇಜಿಸ್ಟಾರ್ ಜನ್ಮದಿನಕ್ಕೆ ‘ದ ಜಡ್ಜ್​ಮೆಂಟ್’ ಸಿನಿಮಾದಲ್ಲಿನ ರವಿಚಂದ್ರನ್ ಲುಕ್ ರಿವೀಲ್ ಆಗಿದೆ.

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ. ರವಿಚಂದ್ರನ್ ಲುಕ್ ಸಾಕಷ್ಟು ಗಮನ ಸೆಳೆದಿದೆ. ‘ದ ಜಡ್ಜ್​​ಮೆಂಟ್​’ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು ಮೊದಲಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ದಿಗಂತ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್​​ಕುಮಾರ್​, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪಿ. ಕೆ. ಎಚ್ ದಾಸ್​ ಛಾಯಾಗ್ರಾಹಣ, ಅನೂಪ ಸೀಳಿನ್ ಸಂಗೀತ ಸಂಯೋಜನೆ, ಕೆಂಪರಾಜ ಬಿ.ಎಸ್. ಸಂಕಲನ, ಪ್ರಮೋದ್ ಮರವಂತೆ ಗೀತ ರಚನೆ, ಎಂ ಎಸ್ ರಮೇಶ್ ಸಂಭಾಷಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ