AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 30, 2023 | 2:31 PM

Share

ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ಅವರಿಗೆ ಇಂದು (ಮೇ 30) ಬರ್ತ್​ಡೇ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಎಲ್ಲರೂ ಶುಭಕೋರುತ್ತಿದ್ದಾರೆ. ಇದರ ಜೊತೆಗೆ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿದ್ದಾರೆ. ರವಿಚಂದ್ರನ್ ಅವರನ್ನು ನೋಡಿಯೇ ಮನೆಗೆ ತೆರಳುವುದಾಗಿ ಅವರು ಹೇಳುತ್ತಿದ್ದಾರೆ. ಇದರ ಜೊತೆಗೆ ರವಿಚಂದ್ರನ್ ನಟನೆಯ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ. ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ ರವಿಚಂದ್ರನ್ ಅವರ ಲುಕ್ ರಿವೀಲ್ ಮಾಡಿದೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದಲ್ಲಿ ‘ದಿ ಜಡ್ಜ್​​ಮೆಂಟ್’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರತಂಡ ಈಗಾಗಲೇ ಎರಡು ಬಾರಿ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅವರ ಲುಕ್ ರಿವೀಲ್ ಆಗಿರಲಿಲ್ಲ. ಈಗ ಕ್ರೇಜಿಸ್ಟಾರ್ ಜನ್ಮದಿನಕ್ಕೆ ‘ದ ಜಡ್ಜ್​ಮೆಂಟ್’ ಸಿನಿಮಾದಲ್ಲಿನ ರವಿಚಂದ್ರನ್ ಲುಕ್ ರಿವೀಲ್ ಆಗಿದೆ.

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ. ರವಿಚಂದ್ರನ್ ಲುಕ್ ಸಾಕಷ್ಟು ಗಮನ ಸೆಳೆದಿದೆ. ‘ದ ಜಡ್ಜ್​​ಮೆಂಟ್​’ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು ಮೊದಲಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ದಿಗಂತ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್​​ಕುಮಾರ್​, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪಿ. ಕೆ. ಎಚ್ ದಾಸ್​ ಛಾಯಾಗ್ರಾಹಣ, ಅನೂಪ ಸೀಳಿನ್ ಸಂಗೀತ ಸಂಯೋಜನೆ, ಕೆಂಪರಾಜ ಬಿ.ಎಸ್. ಸಂಕಲನ, ಪ್ರಮೋದ್ ಮರವಂತೆ ಗೀತ ರಚನೆ, ಎಂ ಎಸ್ ರಮೇಶ್ ಸಂಭಾಷಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ