AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ.

ರವಿಚಂದ್ರನ್ ಬರ್ತ್​​ಡೇಗೆ ‘ದ ಜಡ್ಜ್​ಮೆಂಟ್​’ ಸಿನಿಮಾದ ಫಸ್ಟ್​ ಲುಕ್ ರಿವೀಲ್ ಮಾಡಿದ ತಂಡ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on: May 30, 2023 | 2:31 PM

Share

ಕ್ರೇಜಿಸ್ಟಾರ್ ರವಿಚಂದ್ರನ್ (V Ravichandran) ಅವರಿಗೆ ಇಂದು (ಮೇ 30) ಬರ್ತ್​ಡೇ ಸಂಭ್ರಮ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಎಲ್ಲರೂ ಶುಭಕೋರುತ್ತಿದ್ದಾರೆ. ಇದರ ಜೊತೆಗೆ ಅವರ ಮನೆಯ ಎದುರು ಅಭಿಮಾನಿಗಳು ನೆರೆದಿದ್ದಾರೆ. ರವಿಚಂದ್ರನ್ ಅವರನ್ನು ನೋಡಿಯೇ ಮನೆಗೆ ತೆರಳುವುದಾಗಿ ಅವರು ಹೇಳುತ್ತಿದ್ದಾರೆ. ಇದರ ಜೊತೆಗೆ ರವಿಚಂದ್ರನ್ ನಟನೆಯ ಸಿನಿಮಾ ತಂಡದಿಂದ ಹೊಸ ಪೋಸ್ಟರ್ ರಿಲೀಸ್ ಮಾಡುವ ಕೆಲಸ ಆಗುತ್ತಿದೆ. ‘ದ ಜಡ್ಜ್​ಮೆಂಟ್’ ಸಿನಿಮಾ ತಂಡ ರವಿಚಂದ್ರನ್ ಅವರ ಲುಕ್ ರಿವೀಲ್ ಮಾಡಿದೆ.

ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದಲ್ಲಿ ‘ದಿ ಜಡ್ಜ್​​ಮೆಂಟ್’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರತಂಡ ಈಗಾಗಲೇ ಎರಡು ಬಾರಿ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಅವರ ಲುಕ್ ರಿವೀಲ್ ಆಗಿರಲಿಲ್ಲ. ಈಗ ಕ್ರೇಜಿಸ್ಟಾರ್ ಜನ್ಮದಿನಕ್ಕೆ ‘ದ ಜಡ್ಜ್​ಮೆಂಟ್’ ಸಿನಿಮಾದಲ್ಲಿನ ರವಿಚಂದ್ರನ್ ಲುಕ್ ರಿವೀಲ್ ಆಗಿದೆ.

ರವಿಚಂದ್ರನ್ ಅವರು ಈ ಚಿತ್ರದಲ್ಲಿ ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಖುಷಿಯನ್ನು ಹೆಚ್ಚಿಸಲಾಗಿದೆ. ರವಿಚಂದ್ರನ್ ಲುಕ್ ಸಾಕಷ್ಟು ಗಮನ ಸೆಳೆದಿದೆ. ‘ದ ಜಡ್ಜ್​​ಮೆಂಟ್​’ ಸಿನಿಮಾಗೆ ಭರದಿಂದ ಶೂಟಿಂಗ್ ನಡೆಯುತ್ತಿದೆ. ಬೆಂಗಳೂರು ಮೊದಲಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿದೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Ravichandran: ರವಿಚಂದ್ರನ್​ ಹುಟ್ಟುಹಬ್ಬದ ಪ್ರಯುಕ್ತ ರಿಲೀಸ್​ ಆಯ್ತು ‘ಕೆಡಿ’ ಚಿತ್ರದ ಹೊಸ ಪೋಸ್ಟರ್​; ಹೆಚ್ಚಿತು ನಿರೀಕ್ಷೆ

ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ದಿಗಂತ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮ್​​ಕುಮಾರ್​, ಲಕ್ಷ್ಮೀ ಗೋಪಾಲಸ್ವಾಮಿ, ಪ್ರಕಾಶ್ ಬೆಳವಾಡಿ, ಕೃಷ್ಣಾ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪಿ. ಕೆ. ಎಚ್ ದಾಸ್​ ಛಾಯಾಗ್ರಾಹಣ, ಅನೂಪ ಸೀಳಿನ್ ಸಂಗೀತ ಸಂಯೋಜನೆ, ಕೆಂಪರಾಜ ಬಿ.ಎಸ್. ಸಂಕಲನ, ಪ್ರಮೋದ್ ಮರವಂತೆ ಗೀತ ರಚನೆ, ಎಂ ಎಸ್ ರಮೇಶ್ ಸಂಭಾಷಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ