AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್​ ಸಾಗರ್​ ಪುತ್ರಿಯ ‘ಕೆಜಿಎಫ್​ 2’ ಸಾಂಗ್​ ಸೂಪರ್​ ಹಿಟ್​; ಒಂದು ದಿನದೊಳಗೆ 4.7 ಮಿಲಿಯನ್​ ವೀಕ್ಷಣೆ

The Monster Song | Aditi Sagar: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎಲ್ಲ ಹಾಡುಗಳು ಧೂಳೆಬ್ಬಿಸಿವೆ. ಈ ಸಾಲಿಗೆ ‘ದಿ ಮಾನ್​ಸ್ಟರ್​ ಸಾಂಗ್​..’ ಕೂಡ ಸೇರ್ಪಡೆ ಆಗಿದೆ.

ಅರುಣ್​ ಸಾಗರ್​ ಪುತ್ರಿಯ ‘ಕೆಜಿಎಫ್​ 2’ ಸಾಂಗ್​ ಸೂಪರ್​ ಹಿಟ್​; ಒಂದು ದಿನದೊಳಗೆ 4.7 ಮಿಲಿಯನ್​ ವೀಕ್ಷಣೆ
ಅದಿತಿ ಸಾಗರ್​, ಅರುಣ್​ ಸಾಗರ್​, ಯಶ್​
TV9 Web
| Edited By: |

Updated on: Apr 25, 2022 | 1:05 PM

Share

‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾಗೆ ಪ್ರೇಕ್ಷಕರಿಂದ ಫುಲ್​ ಮಾರ್ಕ್ಸ್​ ಸಿಕ್ಕಿದೆ. ಈ ಚಿತ್ರದ ಪ್ರತಿ ವಿಭಾಗದ ಕೆಲಸವನ್ನೂ ಜನರು ಕೊಂಡಾಡಿದ್ದಾರೆ. ಹಿನ್ನೆಲೆ ಸಂಗೀತ, ಸಾಹಸ, ಛಾಯಾಗ್ರಹಣ, ಸೆಟ್​ಗಳು, ಕಲಾವಿದರ ನಟನೆ ಹೀಗೆ ಎಲ್ಲರಿಗೂ ಭರ್ಜರಿ ಕ್ರೆಡಿಟ್​ ಸಿಕ್ಕಿದೆ. ಅದೇ ರೀತಿ ರವಿ ಬಸ್ರೂರು ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದ ಹಾಡುಗಳು ಕೂಡ ಸಖತ್​ ಫೇಮಸ್​ ಆಗಿವೆ. ಯೂಟ್ಯೂಬ್​ನಲ್ಲಿ ‘ಕೆಜಿಎಫ್​ 2’ ಚಿತ್ರದ ಹಾಡುಗಳು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿವೆ. ಈಗ ಪ್ರಮೋಷನಲ್​ ಹಾಡನ್ನು (The Monster Song) ಬಿಡುಗಡೆ ಮಾಡಲಾಗಿದೆ. ಇದು ಅಭಿಮಾನಿಗಳ ಪಾಲಿಗೆ ಒಂದು ರೀತಿಯ ಸರ್ಪ್ರೈಸ್​. ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಎಂಡ್​ ಕ್ರೆಡಿಟ್ಸ್​ ವೇಳೆ ಬರುವ ಈ ಹಾಡನ್ನು ಈಗ ಯೂಟ್ಯೂಬ್​ನಲ್ಲಿ ರಿಲೀಸ್​ ಮಾಡಲಾಗಿದೆ. ಈ ಹಾಡಿಗೆ ಅರುಣ್​ ಸಾಗರ್​ ಪುತ್ರಿ ಅದಿತಿ ಸಾಗರ್​ (Aditi Sagar) ಅವರು ಸಾಹಿತ್ಯ ಬರೆದು, ಧ್ವನಿ ನೀಡಿದ್ದಾರೆ. ಒಂದೇ ದಿನದಲ್ಲಿ 4.7 ಮಿಲಿಯನ್​, ಅಂದರೆ 46 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಈ ಹಾಡಿನ ಹೆಚ್ಚುಗಾರಿಕೆ.

‘ಕೆಜಿಎಫ್​’ ಸಿನಿಮಾದಲ್ಲಿ ಯಶ್​ ನಿಭಾಯಿಸಿರುವ ರಾಕಿ ಭಾಯ್​ ಪಾತ್ರವನ್ನು ‘ಮಾನ್​ಸ್ಟರ್​’ ಎಂದು ಬಣ್ಣಿಸಲಾಗುತ್ತದೆ. ಈಗ ರಿಲೀಸ್​ ಆಗಿರುವ ‘The Monster Song..’ ಕೂಡ ಅದ್ದೂರಿ ಆಗಿದೆ. ಇದಕ್ಕೆ ಸಾಹಿತ್ಯ ಬರೆಯಲು ಮತ್ತು ಧ್ವನಿ ನೀಡಲು ಅವಕಾಶ ಕೊಟ್ಟಿದ್ದಕ್ಕಾಗಿ ಯಶ್​, ಪ್ರಶಾಂತ್​ ನೀಲ್​ ಮತ್ತು ಇಡೀ ‘ಕೆಜಿಎಫ್​ 2’ ತಂಡಕ್ಕೆ ಅದಿತಿ ಸಾಗರ್​ ಅವರು ಧನ್ಯವಾದ ಅರ್ಪಿಸಿದ್ದಾರೆ.

‘ಈ ಹಾಡನ್ನು ಬರೆಯಲು ನನಗೆ ಪ್ರೋತ್ಸಾಹ ನೀಡಿದ ಯಶ್​ ಅಣ್ಣನಿಗೆ ಧನ್ಯವಾದಗಳು. ಇಂಥ ಕಲಾಕೃತಿಯ ಭಾಗ ಆಗುವ ಅವಕಾಶ ನೀಡಿದ ವಿಜಯ್​ ಕಿರಗಂದೂರು, ಪ್ರಶಾಂತ್​ ನೀಲ್​, ರವಿ ಬಸ್ರೂರು ಅವರಿಗೆ ಧನ್ಯವಾದಗಳು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಅದಿತಿ ಸಾಗರ್​ ಬರೆದುಕೊಂಡಿದ್ದಾರೆ. ಈ ಹಿಂದೆ ಕೂಡ ಗಾಯನದ ಮೂಲಕ ಅದಿತಿ ಗುರುತಿಸಿಕೊಂಡಿದ್ದರು. ಅವರ ಕಂಠದಲ್ಲಿ ಮೂಡಿಬಂದಿದ್ದ ‘ಫ್ರೆಂಚ್​ ಬಿರಿಯಾನಿ’ ಸಿನಿಮಾದ ‘ಹೋಲ್ಡ್​ ಆನ್​ ಬೆಂಗಳೂರು..’ ಹಾಡು ಸಖತ್​ ಫೇಮಸ್​ ಆಗಿತ್ತು.

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿವೆ. ‘ಸುಲ್ತಾನ..’, ‘ಗಗನ ನೀ..’, ‘ಮೆಹಬೂಬ..’ ಗೀತೆಗಳು ಜನಮನ ಗೆದ್ದಿವೆ. ಈಗ ‘The Monster Song..’ ಕೂಡ ಅತ್ಯುತ್ತಮ ಸ್ಪಂದನೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾದ ಗೆಲುವಿನಲ್ಲಿ ಹಾಡುಗಳ ಪಾತ್ರಗಳ ಕೂಡ ಮಹತ್ವದ್ದಾಗಿದೆ. ‘ಕೆಜಿಎಫ್​ 2’ ಗೆಲುವಿನಿಂದ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಬೇಡಿಕೆ ಹೆಚ್ಚಿದೆ.

ಗಲ್ಲಾ ಪೆಟ್ಟಿಗೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಅಬ್ಬರಿಸುತ್ತಿದೆ. ಬಿಡುಗಡೆಯಾಗಿ 12 ದಿನ ಕಳೆದಿದ್ದರೂ ಕೂಡ ಈ ಚಿತ್ರದ ಹವಾ ಕಮ್ಮಿ ಆಗಿಲ್ಲ. ಎಲ್ಲ ಭಾಷೆಯಲ್ಲೂ ಈ ಚಿತ್ರಕ್ಕೆ ಭರ್ಜರಿ ಕಮಾಯಿ ಆಗಿದೆ. ಹಿಂದಿ ವರ್ಷನ್​ನಿಂದಲೇ ಬರೋಬ್ಬರಿ 300 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗಿದೆ. ಇನ್ನೂ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಇದನ್ನೂ ಓದಿ:

‘ಕೆಜಿಎಫ್​: ಚಾಪ್ಟರ್​ 2’ ಬಗ್ಗೆ ಉಪೇಂದ್ರ ಮೆಚ್ಚುಗೆ; ಇನ್ನುಳಿದವರ ಮೌನಕ್ಕೆ ಯಶ್​ ಫ್ಯಾನ್ಸ್​ ತಕರಾರು​

ರಾಕಿ ಭಾಯ್​ ತಾಯಿ ಪಾತ್ರ ಮಾಡಿದ ‘ಕೆಜಿಎಫ್​ 2’ ನಟಿ ಅರ್ಚನಾ ಜೋಯಿಸ್​ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್