AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ

ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿಗಳಿಂದ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ರಾಜ್ಯದ 650 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್​ ರಾಜ್​ಕುಮಾರ್​ಗೆ ಶ್ರದ್ಧಾಂಜಲಿ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Nov 07, 2021 | 7:36 PM

Share

ಪುನೀತ್​ ರಾಜ್​ಕುಮಾರ್​​ ಸಿನಿಮಾಗಳು ಸ್ಯಾಂಡಲ್​ವುಡ್​ನಲ್ಲಿ ಒಳ್ಳೆಯ ಬಿಸ್​ನೆಸ್​ ಮಾಡುತ್ತಿತ್ತು. ಪುನೀತ್​ ಸಿನಿಮಾ ರಿಲೀಸ್​ ಆಗುತ್ತಿದೆ ಎಂದರೆ ಚಿತ್ರಮಂದಿರಗಳಿಗೆ ಹೊಸ ಕಳೆ ಬರುತ್ತಿತ್ತು. ಅಭಿಮಾನಿಗಳು ಅದ್ಭುತವಾಗಿ ಥಿಯೇಟರ್​ಗಳನ್ನು ಸಿಂಗರಿಸುತ್ತುದ್ದರು. ಆದರೆ, ಈಗ ಪುನೀತ್​ ನಿಧನ ಹೊಂದಿದ್ದಾರೆ. ಇದು ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಈ ಕಾರಣಕ್ಕೆ ರಾಜ್ಯದ ಎಲ್ಲಾ 650 ಚಿತ್ರಮಂದಿರಗಳಲ್ಲಿ ಇಂದು (ನವೆಂಬರ್ 7) ಸಂಜೆ 6 ಗಂಟೆಗೆ ಪುನೀತ್ ರಾಜ್​​ಕುಮಾರ್​​ಗೆ ವಿಶೇಷ ಹಾಡನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗಿದೆ.

ಪ್ರದರ್ಶಕರ ವಲಯ ಮತ್ತು ಥಿಯೇಟರ್ ಸಿಬ್ಬಂದಿಗಳಿಂದ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಸಿದ್ದತೆ ಮಾಡಿಕೊಂಡಿದ್ದರು. ಪುನೀತ್ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಬೆಳಗಿ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಚಿತ್ರ ರಿಲೀಸ್ ಆಗುವ ಮೊದಲ ದಿನ ಮೊದಲ ಶೋಗೆ ಪುನೀತ್​ ಥಿಯೇಟರ್​​ಗೆ ಬರುತ್ತಿದ್ದರು. ಥಿಯೇಟರ್ ಸಿಬ್ಬಂದಿಯನ್ನು ಆತ್ಮೀಯವಾಗಿ ಮಾತನಾಡಿಸುತ್ತಿದ್ದರು. ಆದರೆ, ಅಂತಹ ಪುನೀತ್​ ಈಗ ನಮ್ಮ ಜತೆ ಇಲ್ಲ. ಈ ಕಾರಣಕ್ಕೆ ಪುನೀತ್​ ರಾಜ್​ಕುಮಾರ್ ಅವರ ಜತೆಗಿನ ನೆನಪನ್ನು ಥಿಯೇಟರ್ ಸಿಬ್ಬಂದಿ ಮೆಲುಕು ಹಾಕುತ್ತಿದ್ದಾರೆ. ಗೀತ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಗಿದೆ. ಪುನೀತ್​ ಅವರನ್ನು ನೆನೆದು ಎಲ್ಲರೂ ಕಣ್ಣೀರು ಹಾಕಿದ್ದಾರೆ.  ಇನ್ನು, ಈ ವೇಳೆ ನೂರಾರು ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೇಣದಬತ್ತಿ ಹಚ್ಚಿ, ದೀಪ ಬೆಳಗಲಾಗಿದೆ.

ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದವರು ಪುನೀತ್​ ರಾಜ್​ಕುಮಾರ್​. ಹೃದಯಾಘಾತದಿಂದ ಸಡನ್​ ಆಗಿ ಅವರು ಇಹಲೋಕ ತ್ಯಜಿಸಿದ ಬಳಿಕ ಅಪಾರ ಸಂಖ್ಯೆಯ ಅಭಿಮಾನಿ ಬಳಗಕ್ಕೆ ತೀವ್ರ ನೋವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಚಿಕ್ಕ ಮಕ್ಕಳು ಸಂಕಟಪಡುತ್ತಿದ್ದಾರೆ. ಪುನೀತ್​ ಅವರ ಸಿನಿಮಾಗಳನ್ನು ಎಲ್ಲ ವರ್ಗದ ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಮಕ್ಕಳು ಕೂಡ ಅಪ್ಪು ಅಭಿನಯವನ್ನು ಮನಸಾರೆ ಮೆಚ್ಚಿಕೊಂಡಿದ್ದರು. ಆದರೆ ಈಗ ಪುನೀತ್​ ಇಲ್ಲ ಎಂಬ ಕಹಿ ಸತ್ಯದಿಂದ ಪುಟಾಣಿಗಳಿಗೆ ನೋವಾಗಿದೆ.

ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪ್ರತಿ ದಿನ ಭಾರಿ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪೋಷಕರ ಜೊತೆ ಮಕ್ಕಳು ಕೂಡ ಸರದಿ ಸಾಲಿನಲ್ಲಿ ಬಂದು ಅಪ್ಪು ಸಮಾಧಿಗೆ ನಮಿಸುತ್ತಿದ್ದಾರೆ. ಸಮಾಧಿ ಎದುರು ಪುನೀತ್​ ಸಿನಿಮಾಗಳ ಹಾಡುಗಳನ್ನು ಹೇಳಿ ನಮನ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ: Puneeth Rajkumar: ಪುನೀತ್ ಸಮಾಧಿ ದರ್ಶನದ ಅವಧಿ ಇಂದು 7 ಗಂಟೆವರೆಗೆ ವಿಸ್ತರಣೆ; ನಾಳೆ ಕಾರ್ಯ ಮುಗಿಸಿದ ನಂತರ ದರ್ಶನಕ್ಕೆ ಅವಕಾಶ

ಪುನೀತ್​ ಸಮಾಧಿ ಬಳಿ ಬಂದು ಹಾಡು ಹೇಳಿದ ಮಕ್ಕಳು; ಪುಟ್ಟ ಹೃದಯಗಳಿಗೆ ಅಪ್ಪು ಎಂದರೆ ಪಂಚಪ್ರಾಣ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ