AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು

ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು
(ಸಂಗೀತ ನಿರ್ದೇಶಕ ಕಿರಣ್​ ತೋಟಂಬೈಲ್​)
ಮದನ್​ ಕುಮಾರ್​
|

Updated on: Apr 16, 2021 | 1:04 PM

Share

ಒಂದೆಡೆ ಕೊರೊನಾ ವೈರಸ್​ ಹರಡುವ ಭೀತಿ, ಇನ್ನೊಂದೆಡೆ ಲಾಕ್​ಡೌನ್ ಆದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕ. ಈ ಎಲ್ಲದರ ನಡುವೆ ಕಳ್ಳರ ಕಾಟ ! ಹೌದು, ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಕಿರಣ್​ ತೊಟಂಬೈಲು ಅವರ ಸ್ಟುಡಿಯೋದಲ್ಲಿ ಕಳ್ಳತನ ಆಗಿದೆ. ಅಂದಾಜು 35 ಲಕ್ಷ ರೂ. ಮೌಲ್ಯದ ಸಂಗೀತ ಉಪಕರಣಗಳನ್ನು ಖದೀಮರು ಹೊತ್ತುಕೊಂಡು ಹೋಗಿದ್ದಾರೆ.

ಉಪೇಂದ್ರ ನಟನೆಯ ‘ಐ ಲವ್​ ಯೂ’ ಸಿನಿಮಾ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಕಿರಣ್​ ತೊಟಂಬೈಲ್​ ಅವರು ಜನಪ್ರಿಯರಾದರು. ಮೂಲತಃ ಅವರು ವೈದ್ಯರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ತಲಘಟ್ಟಪುರ ಠಾಣಾ ವ್ಯಾಪ್ತಿ ಕರಿಯಣ್ಣನ ಪಾಳ್ಯದಲ್ಲಿ ಘಟನೆ ನಡೆದಿದೆ. ‘ಐ ಲವ್ ಯೂ’ ಸಿನಿಮಾದ ಯಶಸ್ಸಿನ ನಂತರ ಸ್ವಂತ ಸ್ಡುಡಿಯೋ ನಿರ್ಮಾಣಕ್ಕೆ ಕಿರಣ್​ ಕೈ ಹಾಕಿದ್ದರು. ಇನ್ನೇನು ಕೊನೇ ಹಂತದ ಕೆಲಸಗಳು ನಡೆಯುತ್ತಿದ್ದವು. ಸಿಸಿಟಿವಿ ಅಳವಡಿಸುವ ಕಾರ್ಯ ಬಾಕಿ ಇತ್ತು. ಅಷ್ಟರಲ್ಲಾಗಲೇ ಕಳ್ಳರು ಕರಾಮತ್ತು ತೋರಿಸಿದ್ದಾರೆ.

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ-ರಚಿತಾ ರಾಮ್​ ನಟನೆಯ ‘ಐ ಲವ್​ ಯೂ’ ಸಿನಿಮಾದಲ್ಲಿನ ‘ಮಾತನಾಡಿ ಮಾಯವಾದೆ…’ ಹಾಡು ಸಖತ್​ ವೈರಲ್​ ಆಗಿತ್ತು. ಆ ಸಿನಿಮಾದಲ್ಲಿ ಸಿಕ್ಕ ಜನಪ್ರಿಯತೆಯಿಂದಾಗಿ ಕಿರಣ್​ಗೆ ಇನ್ನಷ್ಟು ಅವಕಾಶಗಳು ಹರಿದುಬಂದವು. ‘ಒಲವೇ ಮಂದಾರ 2’, ‘ಮೊದಲ ಮಿಡಿತ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶಕರಾಗಿ ಕಿರಣ್​ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಸ್ಟುಡಿಯೋಗೆ ಕಳ್ಳರು ಕನ್ನ ಆಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಟ್ಟಡ ನಿರ್ಮಾಣ ವಸ್ತುಗಳ ಕಳವು: ನಾಲ್ವರ ಬಂಧನ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ