AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು

ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು
(ಸಂಗೀತ ನಿರ್ದೇಶಕ ಕಿರಣ್​ ತೋಟಂಬೈಲ್​)
ಮದನ್​ ಕುಮಾರ್​
|

Updated on: Apr 16, 2021 | 1:04 PM

Share

ಒಂದೆಡೆ ಕೊರೊನಾ ವೈರಸ್​ ಹರಡುವ ಭೀತಿ, ಇನ್ನೊಂದೆಡೆ ಲಾಕ್​ಡೌನ್ ಆದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕ. ಈ ಎಲ್ಲದರ ನಡುವೆ ಕಳ್ಳರ ಕಾಟ ! ಹೌದು, ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಕಿರಣ್​ ತೊಟಂಬೈಲು ಅವರ ಸ್ಟುಡಿಯೋದಲ್ಲಿ ಕಳ್ಳತನ ಆಗಿದೆ. ಅಂದಾಜು 35 ಲಕ್ಷ ರೂ. ಮೌಲ್ಯದ ಸಂಗೀತ ಉಪಕರಣಗಳನ್ನು ಖದೀಮರು ಹೊತ್ತುಕೊಂಡು ಹೋಗಿದ್ದಾರೆ.

ಉಪೇಂದ್ರ ನಟನೆಯ ‘ಐ ಲವ್​ ಯೂ’ ಸಿನಿಮಾ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಕಿರಣ್​ ತೊಟಂಬೈಲ್​ ಅವರು ಜನಪ್ರಿಯರಾದರು. ಮೂಲತಃ ಅವರು ವೈದ್ಯರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ತಲಘಟ್ಟಪುರ ಠಾಣಾ ವ್ಯಾಪ್ತಿ ಕರಿಯಣ್ಣನ ಪಾಳ್ಯದಲ್ಲಿ ಘಟನೆ ನಡೆದಿದೆ. ‘ಐ ಲವ್ ಯೂ’ ಸಿನಿಮಾದ ಯಶಸ್ಸಿನ ನಂತರ ಸ್ವಂತ ಸ್ಡುಡಿಯೋ ನಿರ್ಮಾಣಕ್ಕೆ ಕಿರಣ್​ ಕೈ ಹಾಕಿದ್ದರು. ಇನ್ನೇನು ಕೊನೇ ಹಂತದ ಕೆಲಸಗಳು ನಡೆಯುತ್ತಿದ್ದವು. ಸಿಸಿಟಿವಿ ಅಳವಡಿಸುವ ಕಾರ್ಯ ಬಾಕಿ ಇತ್ತು. ಅಷ್ಟರಲ್ಲಾಗಲೇ ಕಳ್ಳರು ಕರಾಮತ್ತು ತೋರಿಸಿದ್ದಾರೆ.

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ-ರಚಿತಾ ರಾಮ್​ ನಟನೆಯ ‘ಐ ಲವ್​ ಯೂ’ ಸಿನಿಮಾದಲ್ಲಿನ ‘ಮಾತನಾಡಿ ಮಾಯವಾದೆ…’ ಹಾಡು ಸಖತ್​ ವೈರಲ್​ ಆಗಿತ್ತು. ಆ ಸಿನಿಮಾದಲ್ಲಿ ಸಿಕ್ಕ ಜನಪ್ರಿಯತೆಯಿಂದಾಗಿ ಕಿರಣ್​ಗೆ ಇನ್ನಷ್ಟು ಅವಕಾಶಗಳು ಹರಿದುಬಂದವು. ‘ಒಲವೇ ಮಂದಾರ 2’, ‘ಮೊದಲ ಮಿಡಿತ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶಕರಾಗಿ ಕಿರಣ್​ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಸ್ಟುಡಿಯೋಗೆ ಕಳ್ಳರು ಕನ್ನ ಆಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಟ್ಟಡ ನಿರ್ಮಾಣ ವಸ್ತುಗಳ ಕಳವು: ನಾಲ್ವರ ಬಂಧನ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ