AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು

ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ಕೊರೊನಾ ವಾರಿಯರ್​ ಆಗಿದ್ದ ಸಂಗೀತ ನಿರ್ದೇಶಕ, ವೈದ್ಯ ಕಿರಣ್​ ಸ್ಟುಡಿಯೋಗೆ ಕನ್ನ! 35 ಲಕ್ಷ ರೂ. ಮೌಲ್ಯದ ವಸ್ತು ಕಳವು
(ಸಂಗೀತ ನಿರ್ದೇಶಕ ಕಿರಣ್​ ತೋಟಂಬೈಲ್​)
ಮದನ್​ ಕುಮಾರ್​
|

Updated on: Apr 16, 2021 | 1:04 PM

Share

ಒಂದೆಡೆ ಕೊರೊನಾ ವೈರಸ್​ ಹರಡುವ ಭೀತಿ, ಇನ್ನೊಂದೆಡೆ ಲಾಕ್​ಡೌನ್ ಆದರೆ ಕೆಲಸ ಕಳೆದುಕೊಳ್ಳಬೇಕಾಗುತ್ತದೆ ಎಂಬ ಆತಂಕ. ಈ ಎಲ್ಲದರ ನಡುವೆ ಕಳ್ಳರ ಕಾಟ ! ಹೌದು, ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಕಿರಣ್​ ತೊಟಂಬೈಲು ಅವರ ಸ್ಟುಡಿಯೋದಲ್ಲಿ ಕಳ್ಳತನ ಆಗಿದೆ. ಅಂದಾಜು 35 ಲಕ್ಷ ರೂ. ಮೌಲ್ಯದ ಸಂಗೀತ ಉಪಕರಣಗಳನ್ನು ಖದೀಮರು ಹೊತ್ತುಕೊಂಡು ಹೋಗಿದ್ದಾರೆ.

ಉಪೇಂದ್ರ ನಟನೆಯ ‘ಐ ಲವ್​ ಯೂ’ ಸಿನಿಮಾ ಹಾಡುಗಳಿಗೆ ಸಂಗೀತ ನಿರ್ದೇಶನ ಮಾಡುವ ಮೂಲಕ ಕಿರಣ್​ ತೊಟಂಬೈಲ್​ ಅವರು ಜನಪ್ರಿಯರಾದರು. ಮೂಲತಃ ಅವರು ವೈದ್ಯರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಕೊರೊನಾ ವೈರಸ್​ ಹಾವಳಿ ಮಿತಿ ಮೀರಿದಾಗ ಕಿರಣ್​ ಅವರು ಕೊರೊನಾ ವಾರಿಯರ್​ ಆಗಿ ಕೆಲಸ ಮಾಡಿದ್ದರು. ಆದರೆ ಈಗ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಳ್ಳುವಂತಾಗಿರುವುದು ವಿಪರ್ಯಾಸ.

ತಲಘಟ್ಟಪುರ ಠಾಣಾ ವ್ಯಾಪ್ತಿ ಕರಿಯಣ್ಣನ ಪಾಳ್ಯದಲ್ಲಿ ಘಟನೆ ನಡೆದಿದೆ. ‘ಐ ಲವ್ ಯೂ’ ಸಿನಿಮಾದ ಯಶಸ್ಸಿನ ನಂತರ ಸ್ವಂತ ಸ್ಡುಡಿಯೋ ನಿರ್ಮಾಣಕ್ಕೆ ಕಿರಣ್​ ಕೈ ಹಾಕಿದ್ದರು. ಇನ್ನೇನು ಕೊನೇ ಹಂತದ ಕೆಲಸಗಳು ನಡೆಯುತ್ತಿದ್ದವು. ಸಿಸಿಟಿವಿ ಅಳವಡಿಸುವ ಕಾರ್ಯ ಬಾಕಿ ಇತ್ತು. ಅಷ್ಟರಲ್ಲಾಗಲೇ ಕಳ್ಳರು ಕರಾಮತ್ತು ತೋರಿಸಿದ್ದಾರೆ.

ಆರ್​. ಚಂದ್ರು ನಿರ್ದೇಶನದ, ಉಪೇಂದ್ರ-ರಚಿತಾ ರಾಮ್​ ನಟನೆಯ ‘ಐ ಲವ್​ ಯೂ’ ಸಿನಿಮಾದಲ್ಲಿನ ‘ಮಾತನಾಡಿ ಮಾಯವಾದೆ…’ ಹಾಡು ಸಖತ್​ ವೈರಲ್​ ಆಗಿತ್ತು. ಆ ಸಿನಿಮಾದಲ್ಲಿ ಸಿಕ್ಕ ಜನಪ್ರಿಯತೆಯಿಂದಾಗಿ ಕಿರಣ್​ಗೆ ಇನ್ನಷ್ಟು ಅವಕಾಶಗಳು ಹರಿದುಬಂದವು. ‘ಒಲವೇ ಮಂದಾರ 2’, ‘ಮೊದಲ ಮಿಡಿತ’ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನಿರ್ದೇಶಕರಾಗಿ ಕಿರಣ್​ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಸ್ಟುಡಿಯೋಗೆ ಕಳ್ಳರು ಕನ್ನ ಆಗಿರುವುದು ಬೇಸರದ ಸಂಗತಿ.

ಇದನ್ನೂ ಓದಿ: ಮಂಡ್ಯ: ಕಾಶಿವಿಶ್ವನಾಥ ದೇವಾಲಯದ ಬೀಗ ಮುರಿದು ಶಿವಲಿಂಗ ಕಳ್ಳತನ

ಕಟ್ಟಡ ನಿರ್ಮಾಣ ವಸ್ತುಗಳ ಕಳವು: ನಾಲ್ವರ ಬಂಧನ

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್