Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ನಾಡು-ನುಡಿಯ ಸಾರವ ಸಾರಿದ ಕನ್ನಡದ ಚಿತ್ರಗೀತೆಗಳಿವು..

ಕನ್ನಡ ರಾಜ್ಯೋತ್ಸವ 2023: ಕನ್ನಡ ನಾಡು, ನುಡಿಯ ಬಗ್ಗೆ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಸಿನಿಮಾದಲ್ಲಿ ಹಾಡುಗಳು ಕೂಡ ಹೇರಳವಾಗಿ ಬಳಕೆ ಆಗಿದೆ. ಕನ್ನಡದ ಮಣ್ಣಿನ ವಿಶೇಷತೆ, ಕನ್ನಡದ ನುಡಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸುವ ರೀತಿಯಲ್ಲಿ ಹಾಡುಗಳು ಮೂಡಿ ಬಂದಿವೆ. ಆ ರೀತಿಯ ಹಾಡುಗಳ ಬಗ್ಗೆ ಇಲ್ಲಿದೆ ವಿವರ.

ನಮ್ಮ ನಾಡು-ನುಡಿಯ ಸಾರವ ಸಾರಿದ ಕನ್ನಡದ ಚಿತ್ರಗೀತೆಗಳಿವು..
ನಮ್ಮ ನಾಡು-ನುಡಿಯ ಸಾರವ ಸಾರಿದ ಕನ್ನಡದ ಚಿತ್ರಗೀತೆಗಳಿವು..
Follow us
ರಾಜೇಶ್ ದುಗ್ಗುಮನೆ
|

Updated on: Oct 31, 2023 | 12:59 PM

ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆಗೆ ಎಲ್ಲ ಕಡೆಗಳಲ್ಲೂ ಸಿದ್ಧತೆ ನಡೆದಿದೆ. ನವೆಂಬರ್ ತಿಂಗಳಾದ್ಯಂತ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಕನ್ನಡ ನಾಡು, ನುಡಿಯ ಬಗ್ಗೆ ಈಗಾಗಲೇ ಸಾಕಷ್ಟು ಸಿನಿಮಾಗಳು ಬಂದು ಹೋಗಿವೆ. ಸಿನಿಮಾದಲ್ಲಿ ಹಾಡುಗಳು ಕೂಡ ಹೇರಳವಾಗಿ ಬಳಕೆ ಆಗಿದೆ. ಕನ್ನಡದ ಮಣ್ಣಿನ ವಿಶೇಷತೆ, ಕನ್ನಡದ ನುಡಿಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸುವ ರೀತಿಯಲ್ಲಿ ಹಾಡುಗಳು ಮೂಡಿ ಬಂದಿವೆ. ಆ ರೀತಿಯ ಹಾಡುಗಳ ಬಗ್ಗೆ ಇಲ್ಲಿದೆ ವಿವರ.

ಕನ್ನಡ ನಾಡಿನ ಜೀವ ನದಿ..

ವಿಷ್ಣುವರ್ಧನ್, ಖುಷ್ಬೂ  ನಟನೆಯ ‘ಜೀವನದಿ’ ಸಿನಿಮಾ 1996ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ಬರುವ ‘ಕನ್ನಡ ನಾಡಿನ ಜೀವ ನದಿ..’ ಹಾಡು ಎಲ್ಲರ ಗಮನ ಸೆಳೆಯಿತು. ಕೇಳುಗರ ಫೇವರಿಟ್ ಸಾಲಿನಲ್ಲಿ ಈ ಹಾಡಿಗೆ ಈಗಲೂ ಸ್ಥಾನ ಇದೆ. ಕಾವೇರಿ ಹಾಗೂ ಕರ್ನಾಟಕದ ಮಣ್ಣಿನ ವಿಶೇಷತೆಯನ್ನು ಇದು ವಿವರಿಸುತ್ತದೆ.

ಕಲ್ಲಾದರೆ ನಾನು

ಕನ್ನಡ ನಾಡಿನ ಮಣ್ಣಿನ ವಿಶೇಷತೆ ತುಂಬಾನೆ ದೊಡ್ಡದು. ‘ಸಿಂಹಾದ್ರಿಯ ಸಿಂಹ’ ಸಿನಿಮಾದಲ್ಲಿ ಬರುವ ‘ಕಲ್ಲಾದರೆ ನಾನು..’ ಹಾಡನ್ನು ಯಾರೂ ಮಿಸ್ ಮಾಡಿಕೊಳ್ಳುವಂತಿಲ್ಲ. ಈ ಹಾಡು ವಿಶೇಷ ಎನಿಸಿಕೊಂಡಿದೆ. ಹೇಗಾದರೂ ಸರಿ ಕನ್ನಡ ನಾಡಲ್ಲಿ ಮತ್ತೆ ಹುಟ್ಟಬೇಕು ಎಂಬ ಬಯಕೆಯನ್ನು ನಾಯಕ ವ್ಯಕ್ತಪಡಿಸುತ್ತಾನೆ.

ಕನ್ನಡ ನಾಡಿನ ವೀರ ರಮಣಿಯ..

‘ನಾಗರಹಾವು’ ಸಿನಿಮಾದಲ್ಲಿ ಬರುವ ‘ಕನ್ನಡ ನಾಡಿನ ವೀರ ರಮಣಿಯ..’ ಹಾಡನ್ನು ಕನ್ನಡ ರಾಜ್ಯೋತ್ಸವದಂದು ಮಿಸ್ ಮಾಡಿಕೊಳ್ಳಲೇ ಬಾರದು. ಚಿತ್ರದುರ್ಗದ ಕಲ್ಲಿನ ಕೋಟೆತ ವಿಶೇಷತೆ ವಿವರಿಸುವಾಗ ಈ ಹಾಡು ಬರುತ್ತದೆ.

ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು..

‘ಅಪಾರ ಕೀರ್ತಿ ಗಳಿಸಿ ಮೆರೆವ ಭವ್ಯ ನಾಡಿದು..’ ಹಾಡು ಗಮನ ಸೆಳೆಯುವಂತಿದೆ.   ‘ವಿಜಯನಗರ ವೀರಪುತ್ರ’ ಚಿತ್ರದ ಈ ಹಾಡಿಗೆ ಸಾಹಿತ್ಯ ನೀಡಿರುವವರು ಆರ್.ಎನ್ ಜಯಗೋಪಾಲ್ ಹಾಗೂ ಹಾಡಿದವರು ಪಿ.ಬಿ. ಶ್ರೀನಿವಾಸ್.

ಅವ್ವ ಕಣೋ ಕನ್ನಡ..

ಪ್ರೇಮ್ ನಟನೆಯ ‘ಪಲ್ಲಕ್ಕಿ’ ಚಿತ್ರದ ‘ಅವ್ವ ಕಣೋ ಕನ್ನಡ..’ ಸಾಂಗ್​ ಅನ್ನು ಎಸ್.ಪಿ ಬಾಲಸುಬ್ರಹ್ಮಣ್ಯಂ ಹಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿರುವ ಈ ಹಾಡಿಗೆ, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

ಕನ್ನಡದ ಮಾತು ಚೆನ್ನ..

‘ಸಮರ’ ಸಿನಿಮಾದ ‘ಕನ್ನಡದ ಮಾತು ಚೆನ್ನ..’ ಹಾಡು ರಾಜ್​ಕುಮಾರ್ ಕಂಠದಲ್ಲಿ ಮೂಡಿ ಬಂದಿದೆ. ಶಿವರಾಜ್​ಕುಮಾರ್ ಮೊದಲಾದವರು ‘ಸಮರ’ ಸಿನಿಮಾದಲ್ಲಿ ನಟಿಸಿದ್ದಾರೆ.

ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ..

ಅಂಬರೀಷ್​ ಅಭಿನಯದ ‘ತಿರುಗು ಬಾಣ’ ಚಿತ್ರದ ‘ಇದೇ ನಾಡು ಇದೇ ಭಾಷೆ ಎಂದೆಂದೂ ನನ್ನದಾಗಿರಲಿ.. ’ಹಾಡಿಗೆ ದನಿ ನೀಡಿದವರು ಎಸ್.ಪಿ.ಬಾಲಸುಬ್ರಮಣ್ಯಂ. ಆರ್.ಎನ್ ಜಯಗೋಪಾಲ್ ಬರೆದ ಸಾಹಿತ್ಯಕ್ಕೆ, ಸತ್ಯಂರವರು ಸಂಗೀತ ನೀಡಿದರು.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್​ಕುಮಾರ್ ಪ್ರತಿಮೆ ವಿವಾದ; ಆಕ್ರೋಶ ಹೊರಹಾಕಿದ ಅಣ್ಣಾವ್ರ ಫ್ಯಾನ್ಸ್

‘ಕರುನಾಡೇ..

ರವಿಚಂದ್ರನ್ ನಟನೆಯ ‘ಮಲ್ಲ’ ಸಿನಿಮಾದ ‘ಕರುನಾಡೇ..’ ಹಾಡನ್ನು ಬಹುತೇಕರು ಕೇಳಿರುತ್ತಾರೆ. ಈ ಸಿನಿಮಾ ಬಂದು 19 ವರ್ಷಗಳ ಮೇಲಾಗಿದೆ. ಆದಾಗ್ಯೂ ಈ ಹಾಡು ಫೇವರಿಟ್​ಲಿಸ್ಟ್​​ನಲ್ಲಿ ಇದೆ.

ಇದನ್ನೂ ಓದಿ: ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ಉದಯಿಸಲು ಕಾರಣ ಯಾರು? ಹಂಸಲೇಖ ಹೇಳಿದ್ದು ಹೀಗೆ

‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..’

‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ರಾಜ್​ಕುಮಾರ್ ಅವರ ಕಂಠದಲ್ಲಿ ಮೂಡಿ ಬಂದಿತ್ತು. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಈ ಹಾಡನ್ನು ಶೂಟ್ ಮಾಡಲಾಯಿತು. ಈ ಹಾಡಿನ ಪ್ರತಿ ಸಾಲುಗಳು ಅರ್ಥಪೂರ್ಣವಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ