AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿರಂಗದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು

ಸ್ಯಾಂಡಲ್​ವುಡ್​ ಮೂಲಕ ಬಣ್ಣದ ಬದುಕು ಆರಂಭಿಸಿದ ಸಾಕಷ್ಟು ನಟಿಮಣಿಯರು ನಂತರ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ತಮ್ಮ ಅದೃಷ್ಟಪರೀಕ್ಷೆ ಮಾಡಿದ್ದಾರೆ. ಇವರಲ್ಲಿ, ಕೆಲವರು ಯಶಸ್ವಿಯಾದರೆ, ಇನ್ನೂ ಕೆಲವರು ಹೇಳ ಹೆಸರಿಲ್ಲದಂತೆ ಕಾಣೆಯಾಗಿದ್ದಾರೆ.

ಕನ್ನಡ ಸಿನಿರಂಗದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು
ಕನ್ನಡದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರಿವರು
ರಾಜೇಶ್ ದುಗ್ಗುಮನೆ
| Edited By: |

Updated on:May 26, 2021 | 6:41 PM

Share

ಸ್ಯಾಂಡಲ್​ವುಡ್​ ಮೂಲಕ ಬಣ್ಣದ ಬದುಕು ಆರಂಭಿಸಿದ ಸಾಕಷ್ಟು ನಟಿಮಣಿಯರು ನಂತರ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ತಮ್ಮ ಅದೃಷ್ಟಪರೀಕ್ಷೆ ಮಾಡಿದ್ದಾರೆ. ಇವರಲ್ಲಿ, ಕೆಲವರು ಯಶಸ್ವಿಯಾದರೆ, ಇನ್ನೂ ಕೆಲವರು ಹೇಳ ಹೆಸರಿಲ್ಲದಂತೆ ಕಾಣೆಯಾಗಿದ್ದಾರೆ. ಹಾಗಾದರೆ, ಕನ್ನಡದಿಂದ ಬಣ್ಣದ ಬದುಕು ಆರಂಭಿಸಿ ಪರಭಾಷೆಯಲ್ಲಿ ಮಿಂಚಿದ ನಟಿಯರು ಯರ್ಯಾರು ಎಂಬುದಕ್ಕೆ ಇಲ್ಲಿದೆ ಮಾಹಿತಿ.

ರೇಖಾ: ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟಿಯರ ಪೈಕಿ ರೇಖಾ ಮುಂಚೂಣಿಯಲ್ಲಿದ್ದಾರೆ. ಆರಂಭದ ದಿನಗಳಲ್ಲಿ ಭಾನುರೇಖಾ ಗಣೇಶನ್​ ಆಗಿದ್ದ ಅವರು, ನಂತರ ರೇಖಾ ಆಗಿ ಬಾಲಿವುಡ್​ನಲ್ಲಿ ಗುರುತಿಸಿಕೊಂಡರು. ಇವರಿಗೆ ಸಾಕಷ್ಟು ನ್ಯಾಷನಲ್​ ಅವಾರ್ಡ್​ಗಳು ಬಂದಿವೆ. ಇವರು 180ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೇಖಾ ಸಿನಿಮಾ ಬದುಕು ಆರಂಭಿಸಿದ್ದು ಕನ್ನಡ ಸಿನಿಮಾ ಮೂಲಕ. 1969ರಲ್ಲಿ ತೆರೆಕಂಡ ‘ಆಪರೇನ್​ ಜಾಕ್​ಪಾಟ್​ನಲ್ಲಿ ಸಿ.ಐ.ಡಿ 999’ ಚಿತ್ರದಲ್ಲಿ ರಾಜ್​​ಕುಮಾರ್​ಗೆ ಜತೆಯಾಗಿ ರೇಖಾ ಕಾಣಿಸಿಕೊಂಡಿದ್ದರು.

 ದೀಪಿಕಾ ಪಡುಕೋಣೆ: ದೀಪಿಕಾ ಪಡುಕೋಣೆ ಬಾಲಿವುಡ್​ನ ಬಹುಬೇಡಿಕೆಯ ನಟಿ. ಅವರ ನಟನೆಯ ಸಾಕಷ್ಟು ಚಿತ್ರಗಳು ಬಾಲಿವುಡ್​ ಬಾಕ್ಸ್​ ಆಫೀಸ್​ನಲ್ಲಿ ಕಮಾಲ್​ ಮಾಡಿವೆ. ಇವರು ಕನ್ನಡದ ‘ಐಶ್ವರ್ಯ‘ ಸಿನಿಮಾದಲ್ಲಿ ಉಪೇಂದ್ರಗೆ ಜತೆಯಾಗಿ ನಟಿಸಿದ್ದರು. ಇದು ಅವರ ಸಿನಿಬದುಕಿನ ಮೊದಲ ಸಿನಿಮಾ. 2006ರಲ್ಲಿ ತೆರೆಗೆ ಬಂದ ಈ ಚಿತ್ರಕ್ಕೆ ಇಂದ್ರಜಿತ್​ ಲಂಕೇಶ್​​​ ಆ್ಯಕ್ಷನ್​ ಕಟ್​ ಹೇಳಿದ್ದರು.

ರಶ್ಮಿಕಾ ಮಂದಣ್ಣ: 2016ರಲ್ಲಿ ತೆರೆಕಂಡ ಕಿರಿಕ್​ ಪಾರ್ಟಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ರಶ್ಮಿಕಾ ಮಂದಣ್ಣ. ನಂತರ ಅವರು ಟಾಲಿವುಡ್​ಗೆ ಕಾಲಿಟ್ಟರು. ಅಲ್ಲಿ ಸ್ಟಾರ್​ ನಟರ ಜತೆ ತೆರೆ ಹಂಚಿಕೊಂಡ ನಂತರ ಕಾಲಿವುಡ್​ಗೆ ಪಯಣ ಬೆಳೆಸಿದರು. ನಂತರ ನೇರವಾಗಿ ಅವರು ಕಾಲಿಟ್ಟಿದ್ದು ಬಾಲಿವುಡ್​ಗೆ. ಸದ್ಯ ಹಿಂದಿಯಲ್ಲಿ ಎರಡು ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಜೆ. ಜಯಲಲಿತಾ: ಸಿನಿಮಾ ಹಾಗೂ ರಾಜಕೀಯ ಎರಡಲ್ಲೂ ಮಿಂಚಿದವರು ಜೆ.ಜಯಲಲಿತಾ. ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಂತರ ಅವರು ರಾಜಕೀಯದತ್ತ ಹೊರಳಿದರು. ಅವರ ಕುರಿತು ತಲೈವಿ ಹೆಸರಿನಲ್ಲಿ ಬಯೋಪಿಕ್ ಕೂಡ ಸಿದ್ಧಗೊಂಡಿದ್ದು, ರಿಲೀಸ್​ಗೆ ರೆಡಿ ಇದೆ. ಕನ್ನಡದ ‘ಶ್ರೀ ಶೈಲ ಮಹಾತ್ಮೆ’ ಸಿನಿಮಾದಲ್ಲಿ ಜಯಲಲಿತಾ ಬಾಲ ಕಲಾವಿದೆಯಾಗಿ ನಟಿಸಿದ್ದರು. ರಾಜ್​ಕುಮಾರ್​ ನಟನೆಯ ಈ ಸಿನಿಮಾ 1961ರಲ್ಲಿ ರಿಲೀಸ್​ ಆಗಿತ್ತು.

ಸೌಂದರ್ಯಾ:  ಸೌಂದರ್ಯಾ ದಕ್ಷಿಣ ಭಾರತದ ಖ್ಯಾತ ನಟಿ ಎನಿಸಿಕೊಂಡಿದ್ದರು. 1992ರಲ್ಲಿ ತೆರೆಗೆ ಬಂದ ‘ಗಂಧರ್ವ’ ಸಿನಿಮಾದಲ್ಲಿ ಲೀಡ್​ ರೋಲ್​ ಮಾಡುವ ಮೂಲಕ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ನಂತರ ಅವರು ಟಾಲಿವುಡ್​​​ನಲ್ಲಿ ಸಾಕಷ್ಟು ಹೆಸರು ಮಾಡಿದರು.

 ರಾಕುಲ್​ ಪ್ರೀತ್ ಸಿಂಗ್​: ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಹೆಸರು ಮಾಡಿರುವ ರಾಕುಲ್​ ಪ್ರೀತ್​ ಸಿಂಗ್​ ಬಣ್ಣದ ಬದುಕು ಆರಂಭಿಸಿದ್ದು ಸ್ಯಾಂಡಲ್​ವುಡ್​ನಿಂದ. 2009ರಲ್ಲಿ ರಿಲೀಸ್​ ಆದ ‘ಗಿಲ್ಲಿ’ ಚಿತ್ರದಲ್ಲಿ ರಾಕುಲ್​ ಹೀರೋಯಿನ್​ ಆಗಿದ್ದರು. ಇದು ಅವರ ಮೊದಲ ಸಿನಿಮಾ.

ನಿತ್ಯಾ ಮೆನನ್: ದಕ್ಷಿಣ ಭಾರತದಲ್ಲಿ ನಿತ್ಯಾ ಮೆನನ್​ ಬಹುಬೇಡಿಕೆ ಹೊಂದಿದ್ದರು. ಇವರು ಹೆಚ್ಚಾಗಿ ನಟಿಸಿದ್ದು ಮಲಯಾಳಂ ಚಿತ್ರರಂಗದಲ್ಲಿ ಆದರೆ, ಇವರ ಮೊದಲ ಸಿನಿಮಾ ಕನ್ನಡದ್ದು. 17ನೇ ವಯಸ್ಸಿಗೆ ಸಿನಿ ಬದುಕು ಆರಂಭಿಸಿದ್ದು 7ಓ’ಕ್ಲಾಕ್​ ಚಿತ್ರದ ಮೂಲಕ.

ಇದನ್ನೂ ಓದಿ: ವಿವಾಹಿತ ಮಹಿಳೆಯ ಜತೆ ಪ್ರೀತಿಯಲ್ಲಿ ಬಿದ್ದ ರಾಜಮೌಳಿ; ಯಾವ ಸಿನಿಮಾಕ್ಕೂ ಕಮ್ಮಿ ಇಲ್ಲ ಈ ನಿರ್ದೇಶಕನ ಪ್ರೇಮಕಥೆ

Published On - 3:04 pm, Wed, 26 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್