AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಂದ್ರುನ ನನ್ನಿಂದ ಯಾರೂ ದೂರ ಮಾಡೋಕಾಗಲ್ಲ’; ಟ್ರೋಲ್​ಗೆ ಶಿವಣ್ಣ ತಿರುಗೇಟು

ಇತ್ತೀಚೆಗೆ ಚಂದ್ರು ಅವರು ತಮ್ಮ ನಿರ್ಮಾಣದ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾ ಘೋಷಿಸಿದ್ದರು. ಇದರಲ್ಲಿ ‘ಫಾದರ್’ ಕೂಡ ಒಂದು. ಬೆಂಗಳೂರಿನ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಇದಕ್ಕೆ ಶಿವಣ್ಣ ಆಗಮಿಸಿ ಸಾಥ್ ಕೊಟ್ಟಿದ್ದಾರೆ. ಮಾಧ್ಯಮದ ಜೊತೆ ಮಾತನಾಡುವಾಗ ಅವರು ಆರ್ ಚಂದ್ರು ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

‘ಚಂದ್ರುನ ನನ್ನಿಂದ ಯಾರೂ ದೂರ ಮಾಡೋಕಾಗಲ್ಲ’; ಟ್ರೋಲ್​ಗೆ ಶಿವಣ್ಣ ತಿರುಗೇಟು
ಚಂದ್ರು-ಶಿವಣ್ಣ
Malatesh Jaggin
| Edited By: |

Updated on: Apr 27, 2024 | 2:29 PM

Share

ಶಿವರಾಜ್​ಕುಮಾರ್ (Shivarajkumar) ಅವರು ‘ಕಬ್ಜ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಈ ಸಿನಿಮಾ ಅಂದುಕೊಂಡ ರೀತಿಯಲ್ಲಿ ವಿಮರ್ಶೆ ಪಡೆದಿಲ್ಲ. ಆದರೆ, ಸಿನಿಮಾ ಉತ್ತಮವಾಗಿ ಬಿಸ್ನೆಸ್ ಮಾಡಿದೆ ಎಂದು ಚಂದ್ರು ಹೇಳಿಕೊಂಡಿದ್ದರು. ‘ಕಬ್ಜಾಗೆ ಚಂದ್ರು ಓವರ್ ಹೈಪ್ ಕೊಟ್ಟರು’ ಎಂಬರ್ಥದಲ್ಲಿ ಶಿವಣ್ಣ ಮಾತನಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದನ್ನು ಟ್ರೋಲ್ ಪೇಜ್​ಗಳಲ್ಲಿ ಬಳಕೆ ಮಾಡಲಾಗಿತ್ತು. ‘ಕಬ್ಜ’ ಬಗ್ಗೆ ಶಿವಣ್ಣಗೆ ಅಸಮಾಧಾನ ಇದೆ ಎಂದೆಲ್ಲ ಸುದ್ದಿ ಹಬ್ಬಿಸಲಾಯಿತು. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ನನ್ನ ಹಾಗೂ ಆರ್​ ಚಂದ್ರುನ ಯಾರೂ ಬೇರೆ ಮಾಡೋಕಾಗಲ್ಲ’ ಎಂದಿದ್ದಾರೆ.

ಇತ್ತೀಚೆಗೆ ಚಂದ್ರು ಅವರು ತಮ್ಮ ನಿರ್ಮಾಣದ ಬ್ಯಾಕ್ ಟು ಬ್ಯಾಕ್ ಐದು ಸಿನಿಮಾ ಘೋಷಿಸಿದ್ದರು. ಇದರಲ್ಲಿ ‘ಫಾದರ್’ ಕೂಡ ಒಂದು. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸ್ತಿರೊ ಈ ಚಿತ್ರಕ್ಕೆ ಅಮೃತಾ ಅಯ್ಯಂಗಾರ್ ನಾಯಕಿ. ಬೆಂಗಳೂರಿನ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ನಡೆದಿದೆ. ಇದಕ್ಕೆ ಶಿವಣ್ಣ ಆಗಮಿಸಿ ಸಾಥ್ ಕೊಟ್ಟಿದ್ದಾರೆ. ಮಾಧ್ಯಮದ ಜೊತೆ ಮಾತನಾಡುವಾಗ ಅವರು ಆರ್ ಚಂದ್ರು ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

‘ಚಂದ್ರು ಏನೇ ಮಾಡಿದರೂ ಸ್ಟೈಲ್ ಆಗಿ ಮಾಡ್ತಾರೆ. ಆಡಂಬರ ಸ್ವಲ್ಪ ಜಾಸ್ತಿಯೇ ಇರುತ್ತೆ. ನಾನು ಮಾತನಾಡುವಾಗ ಅವರ ಬಗ್ಗೆ ಮಾತನಾಡಲಿ ಎಂದು ನಿರೀಕ್ಷಿಸುತ್ತಾರೆ. ಅವರು ನಿರೀಕ್ಷಿಸುತ್ತಾರೆ ಎಂದು ನಾನು ಮಾತನಾಡಲ್ಲ, ಇಷ್ಟಪಟ್ಟು ಮಾತಾಡ್ತೀನಿ. ತಂದೆ ಸೆಂಟಿಮೆಂಟ್ ಚೆನ್ನಾಗಿ ಕಟ್ಟಿಕೊಡ್ತಾರೆ. ಅವರ ಸಿನಿಮಾಗಳು ಎಮೋಷನ್ ಆಗಿ ಕನೆಕ್ಟ್ ಆಗುತ್ತವೆ. ಮೈಲಾರಿ ಸಿನಿಮಾ ಮಾಡೋವಾಗ ತಂದೆಗೆ ಕನೆಕ್ಟ್ ಆಗೋ ಪಾತ್ರ ಇತ್ತು’ ಎಂದು ಶಿವಣ್ಣ ಹೇಳಿದರು. ‘ಫಾದರ್’ ಸಿನಿಮಾದಲ್ಲಿ ತಂದೆ-ಮಗನ ಬಾಂಧವ್ಯದ ಬಗ್ಗೆ ಇದೆ.

ಇದನ್ನೂ ಓದಿ: ‘ಶಿವಮೊಗ್ಗದ ಜನರು ಬದಲಾವಣೆ ಬಯಸಿದ್ದಾರೆ’: ಗೀತಾ ನಾಮಪತ್ರ ಸಲ್ಲಿಕೆ ಬಳಿಕ ಶಿವಣ್ಣ ಪ್ರತಿಕ್ರಿಯೆ

ಇನ್ನು, ವೈರಲ್ ಆದ ವಿಡಿಯೋ ಬಗ್ಗೆ ಶಿವಣ್ಣಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಶಿವಣ್ಣ ಉತ್ತರ ನೀಡಿದ್ದಾರೆ. ‘ನನ್ನ ಹಾಗೂ ಚಂದ್ರುನ ಯಾರೂ ಬೇರೆ ಮಾಡೋಕಾಗಲ್ಲ. ಚಂದ್ರು ನನ್ನ ಬಾಂಧವ್ಯ ಯಾವಾಗಲೂ ಇರುತ್ತದೆ. ಸೋಶಿಯಲ್ ಮೀಡಿಯಾ ಆಟದ ಸಾಮಾನಿನ ರೀತಿ ಆಗಿದೆ. ಅದನ್ನು ಜನರು ಒಳ್ಳೆಯದಕ್ಕೆ ಬಳಸಿಕೊಳ್ಳುವಂತಾಗಲಿ. ಯಾವ ಮೀಡಿಯಾನೂ ಏನು ಮಾಡೋಕಾಗಲ್ಲ’ ಎಂದು ಹೇಳಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ