AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನಿಂದ ಅವರು ಗೆದ್ರು ಎಂದು ಯಾವಾಗಲೂ ಹೇಳಲ್ಲ’; ನೇರವಾಗಿ ಉತ್ತರಿಸಿದ ಶಿವಣ್ಣ

ಬಾಮೈದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಲಿದ್ದಾರೆ. ಈ ವಿಚಾರ ಶಿವರಾಜ್​ಕುಮಾರ್​​ಗೆ ಖುಷಿ ನೀಡಿದೆ.

Follow us
ರಾಜೇಶ್ ದುಗ್ಗುಮನೆ
|

Updated on: May 27, 2023 | 12:59 PM

ಶಿವರಾಜ್​ಕುಮಾರ್ (Shivarajkumar) ಅವರು ಸಾಕಷ್ಟು ಖುಷಿಯಲ್ಲಿದ್ದಾರೆ. ಅವರ ಸಂಬಂಧಿಗಳಾದ ಮಧು ಬಂಗಾರಪ್ಪ ಹಾಗೂ ಭೀಮಣ್ಣ ನಾಯ್ಕ್​ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಈ ಪೈಕಿ ಬಾಮೈದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಲಿದ್ದಾರೆ. ಈ ವಿಚಾರ ಶಿವರಾಜ್​ಕುಮಾರ್​​ಗೆ ಖುಷಿ ನೀಡಿದೆ. ಈ ಬಗ್ಗೆ ಮಧು ಬಂಗಾರಪ್ಪ (Madhu Bangarappa), ಶಿವಣ್ಣ ಹಾಗೂ ಗೀತಕ್ಕ ಒಟ್ಟಾಗಿ ಬಂದು ಟಿವಿ9 ಕನ್ನಡದ ಜೊತೆ ಖುಷಿ ಹಂಚಿಕೊಂಡರು. ​

‘ಹಾರ್ಡ್​ ವರ್ಕ್​​ಗೆ ಪ್ರತಿಫಲ ಸಿಕ್ಕಿದೆ. ತುಂಬಾನೇ ಖುಷಿ ಆಗುತ್ತಿದೆ’ ಎಂದರು ಶಿವರಾಜ್​ಕುಮಾರ್. ಇದೇ ವೇಳೆ ಮಾತನಾಡಿದ ಗೀತಾ ಶಿರವಾಜ್​ಕುಮಾರ್ ಅವರು, ‘ತೋರಿಸಿಕೊಳ್ಳಲು ಆಗದೇ ಇರುವಷ್ಟು ಖುಷಿ ಆಗಿದೆ. ಮಧು ತುಂಬಾನೇ ಕಷ್ಟಪಟ್ಟಿದ್ದಾನೆ. ಹೇಳಿಕೊಳ್ಳೋಕೆ ಆಗಲ್ಲ’ ಎಂದರು.

ಇವರ ಜೊತೆ ಇದ್ದ ಮಧು ಬಂಗಾರಪ್ಪ ಕೂಡ ಖುಷಿ ಹೊರಹಾಕಿದರು. ‘ಯಾವ ಸಚಿವ ಸ್ಥಾನ ಕೊಟ್ಟರೂ ಖುಷಿ ಇದೆ. ನನಗೆ ಅವಕಾಶ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದ. ಅನೇಕರು ಗೆಲ್ಲೋಕೆ ಶಿವಣ್ಣ ಕಾರಣ. ಅವರಿಗೆ ತುಂಬು ಹೃದಯದ ಧನ್ಯವಾದ’ ಎಂದರು. ಈ ಮಾತನ್ನು ಕೇಳುತ್ತಿದ್ದಂತೆ ಶಿವಣ್ಣ ತಮ್ಮ ಅಭಿಪ್ರಾಯ ಹೊರಹಾಕಿದರು.

ಇದನ್ನೂ ಓದಿ: ಕಾರ್​ ಡ್ರೈವ್ ಮಾಡಿ ತೆರಳಿದ ಶಿವರಾಜ್​ಕುಮಾರ್; ಅವರು ಇಷ್ಟೆಲ್ಲ ಮಾಡಿದ್ದು ಯಾರಿಗೆ?

‘ಅವರವರ ಕೆಲಸವನ್ನು ಅವರು ಮಾಡಿದ್ದಾರೆ. ನನ್ನಿಂದ ಗೆದ್ದಿದ್ದಾರೆ ಅಂತಲ್ಲ. ನಾನು ಹೋಗಿ ಅಳಿಲು ಸೇವೆ ಮಾಡಿದ್ದೇನೆ ಅಷ್ಟೆ. ನನ್ನಿಂದಲೇ ಅವರು ಗೆದ್ದರು ಅನ್ನೋದು ಸರಿ ಅಲ್ಲ. ಮಧು ಬಂಗಾರಪ್ಪ ಅವರಿಗೆ ಅಧಿಕಾರ ಇಲ್ಲದೇ ಇರುವಾಗಲೇ ಕೆಲಸ ಮಾಡಿದ್ದರು. ಹೀಗಿರುವಾಗ ಅಧಿಕಾರ ಸಿಕ್ಕರೆ ಅವರು ಖಂಡಿತ ಕೆಲಸ ಮಾಡುತ್ತಾರೆ. ಅವರಿಗೆ ಸಹಾಯ ಮಾಡುವ ಮನೋಭಾವನೆ ಇದೆ. ಆ ಭಾವನೆ ಇದ್ರೆ ಮಾತ್ರ ಕೆಲಸ ಮಾಡೋಕೆ ಆಗೋದು’ ಎಂದರು ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ