AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನಿಂದ ಅವರು ಗೆದ್ರು ಎಂದು ಯಾವಾಗಲೂ ಹೇಳಲ್ಲ’; ನೇರವಾಗಿ ಉತ್ತರಿಸಿದ ಶಿವಣ್ಣ

ಬಾಮೈದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಲಿದ್ದಾರೆ. ಈ ವಿಚಾರ ಶಿವರಾಜ್​ಕುಮಾರ್​​ಗೆ ಖುಷಿ ನೀಡಿದೆ.

ರಾಜೇಶ್ ದುಗ್ಗುಮನೆ
|

Updated on: May 27, 2023 | 12:59 PM

Share

ಶಿವರಾಜ್​ಕುಮಾರ್ (Shivarajkumar) ಅವರು ಸಾಕಷ್ಟು ಖುಷಿಯಲ್ಲಿದ್ದಾರೆ. ಅವರ ಸಂಬಂಧಿಗಳಾದ ಮಧು ಬಂಗಾರಪ್ಪ ಹಾಗೂ ಭೀಮಣ್ಣ ನಾಯ್ಕ್​ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಈ ಪೈಕಿ ಬಾಮೈದ ಮಧು ಬಂಗಾರಪ್ಪಗೆ ಸಚಿವ ಸ್ಥಾನ ಸಿಕ್ಕಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಅವರು ಸಚಿವರಾಗಿ ಸೇವೆ ಸಲ್ಲಿಸಲಿದ್ದಾರೆ. ಈ ವಿಚಾರ ಶಿವರಾಜ್​ಕುಮಾರ್​​ಗೆ ಖುಷಿ ನೀಡಿದೆ. ಈ ಬಗ್ಗೆ ಮಧು ಬಂಗಾರಪ್ಪ (Madhu Bangarappa), ಶಿವಣ್ಣ ಹಾಗೂ ಗೀತಕ್ಕ ಒಟ್ಟಾಗಿ ಬಂದು ಟಿವಿ9 ಕನ್ನಡದ ಜೊತೆ ಖುಷಿ ಹಂಚಿಕೊಂಡರು. ​

‘ಹಾರ್ಡ್​ ವರ್ಕ್​​ಗೆ ಪ್ರತಿಫಲ ಸಿಕ್ಕಿದೆ. ತುಂಬಾನೇ ಖುಷಿ ಆಗುತ್ತಿದೆ’ ಎಂದರು ಶಿವರಾಜ್​ಕುಮಾರ್. ಇದೇ ವೇಳೆ ಮಾತನಾಡಿದ ಗೀತಾ ಶಿರವಾಜ್​ಕುಮಾರ್ ಅವರು, ‘ತೋರಿಸಿಕೊಳ್ಳಲು ಆಗದೇ ಇರುವಷ್ಟು ಖುಷಿ ಆಗಿದೆ. ಮಧು ತುಂಬಾನೇ ಕಷ್ಟಪಟ್ಟಿದ್ದಾನೆ. ಹೇಳಿಕೊಳ್ಳೋಕೆ ಆಗಲ್ಲ’ ಎಂದರು.

ಇವರ ಜೊತೆ ಇದ್ದ ಮಧು ಬಂಗಾರಪ್ಪ ಕೂಡ ಖುಷಿ ಹೊರಹಾಕಿದರು. ‘ಯಾವ ಸಚಿವ ಸ್ಥಾನ ಕೊಟ್ಟರೂ ಖುಷಿ ಇದೆ. ನನಗೆ ಅವಕಾಶ ನೀಡಿದ ಕರ್ನಾಟಕದ ಜನತೆಗೆ ಧನ್ಯವಾದ. ಅನೇಕರು ಗೆಲ್ಲೋಕೆ ಶಿವಣ್ಣ ಕಾರಣ. ಅವರಿಗೆ ತುಂಬು ಹೃದಯದ ಧನ್ಯವಾದ’ ಎಂದರು. ಈ ಮಾತನ್ನು ಕೇಳುತ್ತಿದ್ದಂತೆ ಶಿವಣ್ಣ ತಮ್ಮ ಅಭಿಪ್ರಾಯ ಹೊರಹಾಕಿದರು.

ಇದನ್ನೂ ಓದಿ: ಕಾರ್​ ಡ್ರೈವ್ ಮಾಡಿ ತೆರಳಿದ ಶಿವರಾಜ್​ಕುಮಾರ್; ಅವರು ಇಷ್ಟೆಲ್ಲ ಮಾಡಿದ್ದು ಯಾರಿಗೆ?

‘ಅವರವರ ಕೆಲಸವನ್ನು ಅವರು ಮಾಡಿದ್ದಾರೆ. ನನ್ನಿಂದ ಗೆದ್ದಿದ್ದಾರೆ ಅಂತಲ್ಲ. ನಾನು ಹೋಗಿ ಅಳಿಲು ಸೇವೆ ಮಾಡಿದ್ದೇನೆ ಅಷ್ಟೆ. ನನ್ನಿಂದಲೇ ಅವರು ಗೆದ್ದರು ಅನ್ನೋದು ಸರಿ ಅಲ್ಲ. ಮಧು ಬಂಗಾರಪ್ಪ ಅವರಿಗೆ ಅಧಿಕಾರ ಇಲ್ಲದೇ ಇರುವಾಗಲೇ ಕೆಲಸ ಮಾಡಿದ್ದರು. ಹೀಗಿರುವಾಗ ಅಧಿಕಾರ ಸಿಕ್ಕರೆ ಅವರು ಖಂಡಿತ ಕೆಲಸ ಮಾಡುತ್ತಾರೆ. ಅವರಿಗೆ ಸಹಾಯ ಮಾಡುವ ಮನೋಭಾವನೆ ಇದೆ. ಆ ಭಾವನೆ ಇದ್ರೆ ಮಾತ್ರ ಕೆಲಸ ಮಾಡೋಕೆ ಆಗೋದು’ ಎಂದರು ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್