AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ

‘ತಿಕ್ಲು ರಾಮ’ ಸಿನಿಮಾದ ಟೈಟಲ್ ಬದಲಾವಣೆ ಮಾಡಲಾಗುವುದು. ಬೇರೆ ಟೈಟಲ್ ಏನೆಂಬುದನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ತಿಳಿಸಲಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಆಯಿತು. ಈ ವೇಳೆ ಸುಚೇಂದ್ರ ಪ್ರಸಾದ್, ದೊಡ್ಡರಂಗೇಗೌಡ ಮುಂತಾದವರು ಕಾದಂಬರಿ ಮತ್ತು ಸಿನಿಮಾ ಬಗ್ಗೆ ಮಾತನಾಡಿದರು.

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ
Thiklu Rama Film Team
ಮದನ್​ ಕುಮಾರ್​
|

Updated on: May 12, 2026 | 5:04 PM

Share

ಟೈಟಲ್ ಕಾರಣದಿಂದ ಸುದ್ದಿಯಾದ ‘ತಿಕ್ಲು ರಾಮ’ (Thiklu Rama) ಸಿನಿಮಾದಲ್ಲಿ ಪರಿಸರಕ್ಕೆ ಸಂಬಂಧಿಸಿದ ಕಥೆ ಇರಲಿದೆ. ಇದು ಹೃದಯಸ್ಪರ್ಶಿ ಕಥೆ ಎಂದು ಚಿತ್ರತಂಡ ಹೇಳಿದೆ. ಇದು ಡಾ. ನಟರಾಜ ಅವರು ಬರೆದ ‘ತಿಕ್ಲು ರಾಮ’ ಕಾದಂಬರಿ ಆಧಾರಿತ ಸಿನಿಮಾ. ಈಗಾಗಲೇ ಈ ಸಿನಿಮಾಗೆ ಶೇಕಡ 40 ಭಾಗ ಶೂಟಿಂಗ್ ಮುಗಿದಿದೆ. ಈಗ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ (Kannada Novel) ಬಿಡುಗಡೆ ಸಮಾರಂಭ ನಡೆಯಿತು. ಈ ವೇಳೆ ಚಿತ್ರತಂಡದವರು ಹಾಜರಿದ್ದರು.

ಬೆಂಗಳೂರಿನ ಖಾಸಗಿ ಮಾಲ್​​ನಲ್ಲಿ ಕಾದಂಬರಿ ಬಿಡುಗಡೆ ಸಮಾರಂಭ ಮಾಡಲಾಯಿತು. ಹಿರಿಯ ಗೀತಸಾಹಿತಿ ಡಾ. ದೊಡ್ಡರಂಗೇಗೌಡ, ನಟ-ನಿರ್ದೇಶಕ ಕೆ. ಸುಚೇಂದ್ರ ಪ್ರಸಾದ್, ಸಾಹಿತಿ ಮತ್ತು ನಿರ್ದೇಶಕ ಬಿ. ಶಿವಾನಂದ, ಡಾ. ಭರತ್ ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ‘ತಿಕ್ಲು ರಾಮ’ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

ಈ ಸಿನಿಮಾಗೆ ಮಂಜು ಕವಿ ಅವರು ನಿರ್ದೇಶನ ಮಾಡುತ್ತಿದ್​ದಾರೆ. ಡಾ. ರಾಜವೀರ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಕರಿಷ್ಮ-ಶ್ರ್ಯಾವ್ಯ ಕಂಬೈನ್ಸ್ ಬ್ಯಾನರ್ ಮೂಲಕ ಶ್ರುತಿ ಜಿ.ಬಿ. ಮತ್ತು ಕೋಮಲ ನಟರಾಜು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ನಿಖಿತಾ ಸ್ವಾಮಿ, ಶ್ರಾವ್ಯ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ವೇಳೆ ನಿರ್ದೇಶಕ ಮಂಜು ಕವಿ ಮಾತನಾಡಿದರು. ‘ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು. ಓದುವುದರಿಂದ ಖಂಡಿತ ಒಂದಷ್ಟು ಜನರು ಬದಲಾವಣೆ ಆಗ್ತಾರೆ. ಪರಿಸರದ ಬಗ್ಗೆ ಯಾವ ರೀತಿ ಕಾಳಜಿ ವಹಿಸಬೇಕು? ಪ್ರಕೃತಿ ನಮಗೆ ಏನೆಲ್ಲ ಕೊಟ್ಟಿದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ವರ್ಣನೆ ಮಾಡಲಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ?

ಸುಚೇಂದ್ರ ಪ್ರಸಾದ್ ಅವರು ಈ ಸಿನಿಮಾದಲ್ಲಿ ಶಾಸಕರಾಗಿ ಬಣ್ಣ ಹಚ್ಚುತ್ತಿದ್ದಾರೆ. ‘ಪುಸ್ತಕದಲ್ಲಿ ಗ್ರಾಮೀಣ ಸೊಗಡು ಇದೆ. ಓದುಗರಲ್ಲಿ ಪರಿಸರ ಕಾಳಜಿ ಬಗ್ಗೆ ಆಸಕ್ತಿ ತರಿಸುವಂತಿದೆ. ಇಂತಹ ಕೃತಿಗಳು ನಿರಂತವಾಗಿ ಹೊರಬರಲಿ’ ಎಂದು ಅವರು ಹೇಳಿದರು. ‘ತಿಕ್ಲು ರಾಮ ಕಾದಂಬರಿ ಚೆನ್ನಾಗಿದೆ. ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು