AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ

‘ತಿಕ್ಲು ರಾಮ’ ಸಿನಿಮಾದ ಟೈಟಲ್ ಬದಲಾವಣೆ ಮಾಡಲಾಗುವುದು. ಬೇರೆ ಟೈಟಲ್ ಏನೆಂಬುದನ್ನು ಮುಂದಿನ ದಿನಗಳಲ್ಲಿ ಚಿತ್ರತಂಡ ತಿಳಿಸಲಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಆಯಿತು. ಈ ವೇಳೆ ಸುಚೇಂದ್ರ ಪ್ರಸಾದ್, ದೊಡ್ಡರಂಗೇಗೌಡ ಮುಂತಾದವರು ಕಾದಂಬರಿ ಮತ್ತು ಸಿನಿಮಾ ಬಗ್ಗೆ ಮಾತನಾಡಿದರು.

ಸಿನಿಮಾಗೂ ಮೊದಲೇ ‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ಮಾಡಿದ ಚಿತ್ರತಂಡ
Thiklu Rama Film Team
ಮದನ್​ ಕುಮಾರ್​
|

Updated on: May 12, 2026 | 5:04 PM

Share

ಟೈಟಲ್ ಕಾರಣದಿಂದ ಸುದ್ದಿಯಾದ ‘ತಿಕ್ಲು ರಾಮ’ (Thiklu Rama) ಸಿನಿಮಾದಲ್ಲಿ ಪರಿಸರಕ್ಕೆ ಸಂಬಂಧಿಸಿದ ಕಥೆ ಇರಲಿದೆ. ಇದು ಹೃದಯಸ್ಪರ್ಶಿ ಕಥೆ ಎಂದು ಚಿತ್ರತಂಡ ಹೇಳಿದೆ. ಇದು ಡಾ. ನಟರಾಜ ಅವರು ಬರೆದ ‘ತಿಕ್ಲು ರಾಮ’ ಕಾದಂಬರಿ ಆಧಾರಿತ ಸಿನಿಮಾ. ಈಗಾಗಲೇ ಈ ಸಿನಿಮಾಗೆ ಶೇಕಡ 40 ಭಾಗ ಶೂಟಿಂಗ್ ಮುಗಿದಿದೆ. ಈಗ ಕಾದಂಬರಿಯನ್ನು ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ‘ತಿಕ್ಲು ರಾಮ’ ಕಾದಂಬರಿ (Kannada Novel) ಬಿಡುಗಡೆ ಸಮಾರಂಭ ನಡೆಯಿತು. ಈ ವೇಳೆ ಚಿತ್ರತಂಡದವರು ಹಾಜರಿದ್ದರು.

ಬೆಂಗಳೂರಿನ ಖಾಸಗಿ ಮಾಲ್​​ನಲ್ಲಿ ಕಾದಂಬರಿ ಬಿಡುಗಡೆ ಸಮಾರಂಭ ಮಾಡಲಾಯಿತು. ಹಿರಿಯ ಗೀತಸಾಹಿತಿ ಡಾ. ದೊಡ್ಡರಂಗೇಗೌಡ, ನಟ-ನಿರ್ದೇಶಕ ಕೆ. ಸುಚೇಂದ್ರ ಪ್ರಸಾದ್, ಸಾಹಿತಿ ಮತ್ತು ನಿರ್ದೇಶಕ ಬಿ. ಶಿವಾನಂದ, ಡಾ. ಭರತ್ ಮುಂತಾದವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ‘ತಿಕ್ಲು ರಾಮ’ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು.

ಈ ಸಿನಿಮಾಗೆ ಮಂಜು ಕವಿ ಅವರು ನಿರ್ದೇಶನ ಮಾಡುತ್ತಿದ್​ದಾರೆ. ಡಾ. ರಾಜವೀರ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಕರಿಷ್ಮ-ಶ್ರ್ಯಾವ್ಯ ಕಂಬೈನ್ಸ್ ಬ್ಯಾನರ್ ಮೂಲಕ ಶ್ರುತಿ ಜಿ.ಬಿ. ಮತ್ತು ಕೋಮಲ ನಟರಾಜು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸುಚೇಂದ್ರ ಪಸ್ರಾದ್, ಜಹಾಂಗೀರ್, ಚೈತ್ರಾ ರಾಮ್, ಗಿರೀಶ್, ವಿನೋದ್ ಪವಿತ್ರಾ, ನಿಖಿತಾ ಸ್ವಾಮಿ, ಶ್ರಾವ್ಯ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.

‘ತಿಕ್ಲು ರಾಮ’ ಕಾದಂಬರಿ ಬಿಡುಗಡೆ ವೇಳೆ ನಿರ್ದೇಶಕ ಮಂಜು ಕವಿ ಮಾತನಾಡಿದರು. ‘ಪುಸ್ತಕವನ್ನು ಪ್ರತಿಯೊಬ್ಬರು ಓದಬೇಕು. ಓದುವುದರಿಂದ ಖಂಡಿತ ಒಂದಷ್ಟು ಜನರು ಬದಲಾವಣೆ ಆಗ್ತಾರೆ. ಪರಿಸರದ ಬಗ್ಗೆ ಯಾವ ರೀತಿ ಕಾಳಜಿ ವಹಿಸಬೇಕು? ಪ್ರಕೃತಿ ನಮಗೆ ಏನೆಲ್ಲ ಕೊಟ್ಟಿದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ವರ್ಣನೆ ಮಾಡಲಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ತಿಕ್ಲು ರಾಮ’ ಸಿನಿಮಾದ ಶೀರ್ಷಿಕೆ ವಿವಾದ: ದೂರು ದಾಖಲಾದ ಬಳಿಕ ಟೈಟಲ್ ಬದಲಾವಣೆ?

ಸುಚೇಂದ್ರ ಪ್ರಸಾದ್ ಅವರು ಈ ಸಿನಿಮಾದಲ್ಲಿ ಶಾಸಕರಾಗಿ ಬಣ್ಣ ಹಚ್ಚುತ್ತಿದ್ದಾರೆ. ‘ಪುಸ್ತಕದಲ್ಲಿ ಗ್ರಾಮೀಣ ಸೊಗಡು ಇದೆ. ಓದುಗರಲ್ಲಿ ಪರಿಸರ ಕಾಳಜಿ ಬಗ್ಗೆ ಆಸಕ್ತಿ ತರಿಸುವಂತಿದೆ. ಇಂತಹ ಕೃತಿಗಳು ನಿರಂತವಾಗಿ ಹೊರಬರಲಿ’ ಎಂದು ಅವರು ಹೇಳಿದರು. ‘ತಿಕ್ಲು ರಾಮ ಕಾದಂಬರಿ ಚೆನ್ನಾಗಿದೆ. ಸಿನಿಮಾ ನೋಡಲು ಕಾತುರನಾಗಿದ್ದೇನೆ’ ಎಂದು ಡಾ. ದೊಡ್ಡರಂಗೇಗೌಡ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
'ಶ್ರಮ ವ್ಯರ್ಥವಾಯಿತು': ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ