AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಅನಿಲ್ ಕಪೂರ್​ಗೆ ‘ಪಲ್ಲವಿ ಅನುಪಲ್ಲವಿ’ ಆಫರ್ ಸಿಕ್ಕಿದ್ದು ಹೇಗೆ? ಇಲ್ಲಿದೆ ವಿವರ

‘ಪಲ್ಲವಿ ಅನುಪಲ್ಲವಿ’ ಸಿನಿಮಾ ರಿಲೀಸ್ ಆಗಿ 40 ವರ್ಷಗಳ ಮೇಲಾಗಿದೆ. ಈಗಲೂ ಸಿನಿಮಾ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಅನಿಲ್ ಕಪೂರ್ ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾ ಮುಖ್ಯ ಎನಿಸಿಕೊಂಡಿದೆ. ಅವರು ನಟಿಸಿದ ಏಕೈಕ ಕನ್ನಡ ಸಿನಿಮಾ ಇದು.

ನಟ ಅನಿಲ್ ಕಪೂರ್​ಗೆ ‘ಪಲ್ಲವಿ ಅನುಪಲ್ಲವಿ’ ಆಫರ್ ಸಿಕ್ಕಿದ್ದು ಹೇಗೆ? ಇಲ್ಲಿದೆ ವಿವರ
ಅನಿಲ್​ ಕಪೂರ್​
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on: Dec 24, 2023 | 3:30 PM

Share

ನಟ ಅನಿಲ್ ಕಪೂರ್ (Anil Kapoor) ಅವರಿಗೆ ಇಂದು (ಡಿಸೆಂಬರ್ 24) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅನಿಲ್ ಕಪೂರ್ ಅವರು ಕನ್ನಡದ ‘ಪಲ್ಲವಿ ಅನುಪಲ್ಲವಿ’ (Pallavi Anupallavi) ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಗೊಂಡರು. ಬಾಲಿವುಡ್ ನಟ ಅನಿಲ್ ಕಪೂರ್​ಗೆ ಕನ್ನಡದ ಸಿನಿಮಾ (Kannada Cinema) ಆಫರ್ ಸಿಕ್ಕಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಅನಿಲ್ ಕಪೂರ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1979ರಲ್ಲಿ. ಹಿಂದಿಯ ‘ಹಮಾರೆ ತುಮಾರೆ’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರದಲ್ಲಿ ಅವರು ಸಣ್ಣ ಪಾತ್ರ ಮಾಡಿದ್ದರು. 1980ರಲ್ಲಿ ರಿಲೀಸ್ ಆದ ತೆಲುಗಿನ ‘ವಂಶ ವೃಕ್ಷ’ ಸಿನಿಮಾದಲ್ಲಿ ಅನಿಲ್ ಕಪೂರ್ ನಟಿಸಿದರು. ಈ ಚಿತ್ರವನ್ನು ಬಾಪು ಅವರು ನಿರ್ದೇಶನ ಮಾಡಿದ್ದರು. ಆ ವರ್ಷ ಎರಡು ಹಿಂದಿ ಸಿನಿಮಾಗಳಲ್ಲಿ ಅನಿಲ್ ಕಪೂರ್ ನಟಿಸಿದ್ದರು.

ಮೊದಲಿಗೆ ‘ಪಲ್ಲವಿ ಅನುಪಲ್ಲವಿ’ ಸಿನಿಮಾ ನಿರ್ದೇಶನ ಮಾಡುವ ಆಲೋಚನೆ ಮಣಿರತ್ನಂ ಅವರಿಗೆ ಇರಲಿಲ್ಲ. ಈ ಬಗ್ಗೆ ಅವರು ವೇದಿಕೆ ಮೇಲೆ ಹೇಳಿಕೊಂಡಿದ್ದರು. ‘ನಾನು ನನ್ನ ಮೊದಲ ಸಿನಿಮಾ ಮಾಡಿದಾಗ ನನಗೆ ಸಿನಿಮಾ ಮಾಡೋದು ಹೇಗೆ ಎಂದು ಗೊತ್ತಿರಲಿಲ್ಲ. ನನಗೆ ಕನ್ನಡ ಬರುತ್ತಿರಲಿಲ್ಲ. ಆದರೂ ಕನ್ನಡ ಸಿನಿಮಾ ಮಾಡಿದೆ. ನಾನು ಒಂದು ಸ್ಕ್ರಿಪ್ಟ್ ರೆಡಿ ಮಾಡಿಕೊಂಡೆ. ಯಾವುದಾದರೂ ಒಂದು ದೊಡ್ಡ ನಿರ್ದೇಶಕನ ಮನ ಒಲಿಸಿ ಸಿನಿಮಾ ಮಾಡಬೇಕು ಎಂದುಕೊಂಡಿದ್ದೆ. ಆಗ ಅವರ ಜೊತೆ ಸಹಾಯಕ ನಿರ್ದೇಶಕನಾಗಿ ಸೇರಿಕೊಂಡು ಸಿನಿಮಾ ಬಗ್ಗೆ ಕಲಿಯಬೇಕು ಎಂದುಕೊಂಡಿದ್ದೆ. ಆದರೆ, ನಾನೇ ನಿರ್ದೇಶನ ಮಾಡಬೇಕಾಗಿ ಬಂತು’ ಎಂದು ಮಣಿರತ್ನಂ ಹೇಳಿದ್ದರು.

ಇದನ್ನೂ ಓದಿ: ಬಾಲಿವುಡ್​ನ ಶ್ರೀಮಂತ ನಟ ಅನಿಲ್ ಕಪೂರ್ ಅವರ ಒಟ್ಟೂ ಆಸ್ತಿ ಎಷ್ಟು ಕೋಟಿ ರೂಪಾಯಿ?

‘ವಂಶ ವೃಕ್ಷ’ ಸಿನಿಮಾನ ಮಣಿರತ್ನಂ ವೀಕ್ಷಿಸಿದ್ದರು. ಈ ಚಿತ್ರದಲ್ಲಿ ಅನಿಲ್ ಕಪೂರ್ ಪಾತ್ರ ಮಣಿರತ್ನಂ ಅವರಿಗೆ ಇಷ್ಟ ಆಗಿತ್ತು. ತಮ್ಮ ಮೊದಲ ಸಿನಿಮಾಗೆ ಅನಿಲ್ ಸೂಕ್ತ ಎಂದು ಮಣಿರತ್ನಂ ನಿರ್ಧರಿಸಿದರು. ಅವರು ಅನಿಲ್ ಕಪೂರ್​ಗೆ ಆಫರ್ ನೀಡಿದರು. ಅನಿಲ್ ಕಪೂರ್ ಅವರು ಖುಷಿಯಿಂದ ಒಪ್ಪಿ ಸಿನಿಮಾ ಮಾಡಿದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾದಲ್ಲಿ ನಾಯಕಿ ಆಗಿ ನಟಿಸೋಕೆ ಮೊದಲು ಸುಹಾಸಿನಿಗೆ ಆಫರ್ ನೀಡಲಾಗಿತ್ತು. ಆದರೆ, ಈ ಆಫರ್​ನ ಅವರು ತಿರಸ್ಕರಿಸಿದರು. ಆ ಬಳಿಕ ಕಿರಣ್ ವೈರಾಲೆ ಅವರು ತಂಡ ಸೇರಿಕೊಂಡರು. ಈ ಸಿನಿಮಾ ರಿಲೀಸ್ ಆಗಿ 40 ವರ್ಷಗಳ ಮೇಲಾಗಿದೆ. ಈಗಲೂ ಸಿನಿಮಾ ಅನೇಕರ ಫೇವರಿಟ್ ಎನಿಸಿಕೊಂಡಿದೆ. ಅನಿಲ್ ಕಪೂರ್ ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾ ಮುಖ್ಯ ಎನಿಸಿಕೊಂಡಿದೆ. ಅವರು ನಟಿಸಿದ ಏಕೈಕ ಕನ್ನಡ ಸಿನಿಮಾ ಇದು.

ಅನಿಲ್ ಕಪೂರ್ ಅವರಿಗೆ ಈ ವರ್ಷ ಬರ್ತ್​ಡೇ ವಿಶೇಷ ಎನಿಸಿಕೊಂಡಿದೆ. ಅವರ ನಟನೆಯ ‘ಅನಿಮಲ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಾಚಿಕೊಂಡಿದೆ. ಇದು ಅನಿಲ್ ಕಪೂರ್ ಖುಷಿ ಹೆಚ್ಚಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು