AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naresh: ಪವಿತ್ರಾ ಲೋಕೇಶ್​​ಗೆ​ ಪ್ರೀತಿಯಿಂದ ನರೇಶ್ ಏನಂತ ಕರೀತಾರೆ? ಬಯಲಾಯ್ತು ನಿಕ್​ ನೇಮ್​

Pavitra Lokesh: ‘ಮತ್ತೆ ಮದುವೆ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ವೇಳೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರಿಗೆ ಹಲವು ಪ್ರಶ್ನೆಗಳು ಎದುರಾಗುತ್ತಿವೆ.

Naresh: ಪವಿತ್ರಾ ಲೋಕೇಶ್​​ಗೆ​ ಪ್ರೀತಿಯಿಂದ ನರೇಶ್ ಏನಂತ ಕರೀತಾರೆ? ಬಯಲಾಯ್ತು ನಿಕ್​ ನೇಮ್​
ಪವಿತ್ರಾ ಲೋಕೇಶ್, ನರೇಶ್
ಮದನ್​ ಕುಮಾರ್​
|

Updated on: May 25, 2023 | 7:15 AM

Share

ನಟಿ ಪವಿತ್ರಾ ಲೋಕೇಶ್​ ಮತ್ತು ನಟ ನರೇಶ್​ (​Naresh) ನಡುವೆ ಪ್ರೀತಿ ಚಿಗುರಿದ್ದು ಗೊತ್ತಿರುವ ವಿಚಾರ. ಆದರೆ ಈ ಜೋಡಿಯ ಬಗ್ಗೆ ತಿಳಿಯದೇ ಇರುವ ಅನೇಕ ಸಂಗತಿಗಳು ಇವೆ. ಆ ಎಲ್ಲ ವಿಚಾರಗಳು ‘ಮತ್ತೆ ಮದುವೆ’ (​Matthe Maduve) ಸಿನಿಮಾದಲ್ಲಿ ರಿವೀಲ್​ ಆಗುವ ಸಾಧ್ಯತೆ ಇದೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಅದರ ಪ್ರಮೋಷನ್​ ಸಲುವಾಗಿ ಅನೇಕ ಮಾಧ್ಯಮಗಳಿಗೆ ನರೇಶ್​ ಮತ್ತು ಪವಿತ್ರಾ ಲೋಕೇಶ್​ (​Pavitra Lokesh) ಅವರು ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರಿಗೆ ಹಲವು ಬಗೆಯ ಪ್ರಶ್ನೆಗಳು ಎದುರಾಗುತ್ತಿವೆ. ಪವಿತ್ರಾ ಲೋಕೇಶ್​ಗೆ ನರೇಶ್​ ಅವರು ಪ್ರೀತಿಯಿಂದ ಏನಂತ ಕರೀತಾರೆ? ಈ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ. ‘ನಾನು ಪವಿತ್ರಾ ಅವರನ್ನು ಮುದ್ದಾಗಿ ಅಮೂಲ್​ ಅಂತ ಕರೆಯುತ್ತೇನೆ’ ಎಂದು ನರೇಶ್​ ಹೇಳಿದ್ದಾರೆ. ಆ ವಿಡಿಯೋ ವಿಡಿಯೋ ವೈರಲ್​ ಆಗಿದೆ.

ನರೇಶ್ ಹಾಗೂ ಪವಿತ್ರಾ ಲೋಕೇಶ್ ಮಧ್ಯೆ ಪ್ರೇಮ ಚಿಗುರಿದೆ ಎನ್ನಲಾಗಿತ್ತು. ಇದಕ್ಕೆ ನರೇಶ್ ಪತ್ನಿ ರಮ್ಯಾ ರಘುಪತಿ ಅವರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಈಗ ಇದೇ ವಿಚಾರ ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಸಿದ್ಧಗೊಂಡಂತಿದೆ. ಟೀಸರ್ ಮತ್ತು ಟ್ರೇಲರ್​ ಮೂಲಕ ಈ ಸಿನಿಮಾ ಎಲ್ಲರ ಗಮನ ಸೆಳೆದಿದೆ. ಮೇ 26ರಂದು ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: ‘ಮತ್ತೆ ಮದುವೆ’ ಚಿತ್ರಕ್ಕೆ ತಾವೇ ಡಬ್ ಮಾಡಿದ ನರೇಶ್; ಕಾರಣ ತಿಳಿಸಿದ ಹೀರೋ

ನರೇಶ್ ಹಾಗೂ ಪವಿತ್ರಾ ಲೋಕೇಶ್ ಮಧ್ಯೆ ಇರುವ ಸಂಬಂಧ ಎಂಥದ್ದು ಎಂಬ ಪ್ರಶ್ನೆ ಅನೇಕರಲ್ಲಿದೆ. ಇದಕ್ಕೆ ಅವರ ಕಡೆಯಿಂದಲೂ ಸ್ಪಷ್ಟನೆ ಇಲ್ಲ. ಇಬ್ಬರೂ ಮದುವೆ ಆಗುತ್ತಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಇಬ್ಬರೂ ಒಟ್ಟಾಗಿ ‘ಮತ್ತೆ ಮದುವೆ’ ಸಿನಿಮಾದಲ್ಲಿ ನಟಿಸಿದರು. ಈ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆದಾಗ ಒಂದು ಪ್ರಶ್ನೆ ಎದುರಾಗಿತ್ತು. ‘ನೀವಿಬ್ಬರೂ ಗೆಳೆಯರೇ ಅಥವಾ ಅದಕ್ಕಿಂತಲೂ ಹೆಚ್ಚೇ?’ ಎಂದು ಮಾಧ್ಯಮದವರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ನರೇಶ್, ‘ನಮ್ಮ ಹೃದಯಗಳ ಮಧ್ಯೆ ಮದುವೆ ಆಗಿದೆ, ನಾವು ಖುಷಿಯಿಂದ ಇದ್ದೇವೆ’ ಎಂದಿದ್ದರು.

ಇದನ್ನೂ ಓದಿ: ‘ನನಗೆ ಕನ್ನಡ ಗೊತ್ತು, ಶಿವರಾಜ್​ಕುಮಾರ್ ನನ್ನ ಕ್ಲಾಸ್​ಮೇಟ್ ಆಗಿದ್ರು’; ನರೇಶ್

ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಚಿಗುರಿದ್ದು ಹೇಗೆ? ಆ ಪ್ರೀತಿಗೆ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅಡ್ಡಿಯಾಗಿ ನಿಂತಿದ್ದು ಯಾಕೆ? ಈ ಮೂವರ ಜಗಳವು ಬೀದಿ ರಂಪವಾಗಿದ್ದು ಹೇಗೆ? ಮೈಸೂರು ಹೋಟೆಲ್​ನಲ್ಲಿ ಮಾಧ್ಯಮಗಳ ಎದುರಲ್ಲೇ ನಡೆದ ಹೈಡ್ರಾಮಾ ಹೇಗಿತ್ತು? ಇಂಥ ಹಲವು ಘಟನೆಗಳ ಝಲಕ್​ ಅನ್ನು ‘ಮತ್ತೆ ಮದುವೆ’ ಟ್ರೇಲರ್​ನಲ್ಲಿ ತೋರಿಸಲಾಗಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ