AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿ ವಿಚಾರವನ್ನು ರಾಜ್​ಕುಮಾರ್ ಬಳಿ ಅಳುಕುತ್ತಲೇ ಹೇಳಿದ್ದ ಪುನೀತ್; ಜನರೇಶನ್ ಗ್ಯಾಪ್ ಮೀರಿ ನಿಂತಿದ್ದ ಅಣ್ಣಾವ್ರು

ಪುನೀತ್ ರಾಜ್ ಕುಮಾರ್ ಅವರು ಅಶ್ವಿನಿ ಅವರನ್ನು ಪ್ರೀತಿಸಿ ಮದುವೆಯಾದರು. ತಮ್ಮ ಪ್ರೇಮ ವಿಷಯವನ್ನು ತಂದೆ ರಾಜ್ ಕುಮಾರ್ ಅವರಿಗೆ ತಿಳಿಸುವಾಗ ಅವರು ಅನುಭವಿಸಿದ ಭಯ ಮತ್ತು ರಾಜ್ ಕುಮಾರ್ ಅವರ ಪ್ರತಿಕ್ರಿಯೆ ಬಗ್ಗೆ ಇಲ್ಲಿ ಹೇಳಲಾಗಿದೆ. ರಾಜ್ ಕುಮಾರ್ ಅವರು ತಮ್ಮ ಮಕ್ಕಳ ಭಾವನೆಗಳನ್ನು ಗೌರವಿಸಿ, ಅವರ ಮದುವೆಗೆ ಅನುಮತಿ ನೀಡಿದರು ಅನ್ನೋದು ವಿಶೇಷ.

ಪ್ರೀತಿ ವಿಚಾರವನ್ನು ರಾಜ್​ಕುಮಾರ್ ಬಳಿ ಅಳುಕುತ್ತಲೇ ಹೇಳಿದ್ದ ಪುನೀತ್; ಜನರೇಶನ್ ಗ್ಯಾಪ್ ಮೀರಿ ನಿಂತಿದ್ದ ಅಣ್ಣಾವ್ರು
ಪ್ರೀತಿ ವಿಚಾರವನ್ನು ರಾಜ್​ಕುಮಾರ್ ಬಳಿ ಅಳಕುತ್ತಲೇ ಹೇಳಿದ್ದ ಪುನೀತ್
ರಾಜೇಶ್ ದುಗ್ಗುಮನೆ
|

Updated on:Mar 15, 2025 | 6:59 AM

Share

ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ ಸಮಿಪೀಸಿದೆ. ಮಾರ್ಚ್​ 17ರಂದು ಅವರು ಇದ್ದಿದ್ದರೆ 50ನೇ ವರ್ಷದ ಬರ್ತ್​ಡೇನ ಅವರ ಜೊತೆ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು. ಪುನೀತ್ ರಾಜ್​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲದಿದ್ದರು ಆಚರರಣೆ ನಿಂತಿಲ್ಲ. ಅವರ ನಟನೆಯ ‘ಅಪ್ಪು’ ಸಿನಿಮಾ (Appu Movie) ರೀ-ರಿಲೀಸ್ ಆಗಿದೆ. ಎಲ್ಲ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅವರ ಬರ್ತ್​​ಡೇ ಸಂದರ್ಭದಲ್ಲಿ ಅವರ ವಿಡಿಯೋಗಳನ್ನು ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈಗ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಅವರು ತಮ್ಮ ಪ್ರೀತಿ ವಿಚಾರವನ್ನು ತಂದೆಗೆ ಹೇಳಿಕೊಂಡ ಬಗ್ಗೆ ಮಾತನಾಡಿದ್ದರು.

ಪುನೀತ್ ರಾಜ್​ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಪ್ರೀತಿಸಿ ಮದುವೆ ಆದವರು. ಇವರ ಪ್ರೀತಿಗೆ ಕುಟುಂಬದವರು ಕೂಡ ಒಪ್ಪಿಗೆ ಕೊಟ್ಟ ಬಳಿಕವೇ ಮದುವೆ ನಡೆಯಿತು. ಪುನೀತ್ ರಾಜ್​ಕುಮಾರ್ ಅವರು ಈ ವಿಚಾರವನ್ನು ತುಂಬಾನೇ ಭಯದಲ್ಲೇ ತಂದೆ ಬಳಿ ಹೇಳಿಕೊಂಡಿದ್ದರು. ವಿಶೇಷ ಎಂದರೆ ರಾಜ್​ಕುಮಾರ್ ನೀಡಿದ ಪುನೀತ್ ಮೊಗದಲ್ಲಿ ನಗು ತರಿಸಿತ್ತು.

ಪುನೀತ್ ರಾಜ್​ಕುಮಾರ್ ಅವರಿಗೆ ಆಗ 24 ವರ್ಷ. ರಾಜ್​ಕುಮಾರ್​ಗೆ 70+ ವರ್ಷ ಆಗಿತ್ತು. ಆದರೂ ರಾಜ್​ಕುಮಾರ್ ಅವರು ಮಕ್ಕಳ ಭಾವನೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಿದ್ದರು. ‘ನನ್ನ ತಾಯಿ ಬಳಿ ಪ್ರೀತಿ ವಿಚಾರ ಹೇಳಿದೆ. ಆಯ್ತಪ್ಪ, ತಂದೆಗೆ ಹೇಳಿ ಎಂದರು. ಆಗ ನನಗೆ 24 ವರ್ಷ. ಅವರಿಗೆ 72 ವರ್ಷ. ನನ್ನ ತಂದೆ ಬಳಿ ಹೋಗಿ ಒಂದು ಹುಡುಗಿಯನ್ನು ಇಷ್ಟಪಟ್ಟಿದೀನಿ ಎಂದೆ. ಅವರು ನಕ್ಕರು. ಮದುವೆ ಮಾಡ್ಕೋತಿನಿ ಎಂದರು. ನನ್ನ ತಂದೆ ಬರ್ತ್​​ಡೇ ದಿನ ಅಶ್ವಿನಿ ಬಳಿ ಕಾಲ್ ಮಾಡಿಸಿ ತಂದೆಗೆ ವಿಶ್ ಮಾಡಿಸಿದ್ದೆ. ಜನರೇಶನ್ ಗ್ಯಾಪ್ ಅನ್ನೋದಲ್ಲ ಏನೂ ಇರಲಿಲ್ಲ’ ಎಂದಿದ್ದರು ಪುನೀತ್. (ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ)

ಇದನ್ನೂ ಓದಿ
Image
ಪುನೀತ್​ ಬಯೋಪಿಕ್ ಪ್ಲ್ಯಾನ್ ಬಗ್ಗೆ ಮಾತಾಡಿದ ಸಂತೋಷ್ ಆನಂದ್​ರಾಮ್
Image
ಪುನೀತ್ ಪೋಸ್ಟರ್​ಗೆ ಹಾಲಿನ ಅಭಿಷೇಕ; ‘ಅಪ್ಪು’ ಸಿನಿಮಾ ಭರ್ಜರಿ ಪ್ರದರ್ಶನ
Image
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
Image
‘ಅಪ್ಪು’ ಹಿಟ್ ಆದಾಗ ಅಣ್ಣಾವ್ರು ಮಾಡಿದ್ದೇನು? ಪುನೀತ್​ಗೆ ಖುಷಿ ಕೊಟ್ಟಿತ್ತು

ಇದನ್ನೂ ಓದಿ: ‘ಅಪ್ಪು’ ಸಿನಿಮಾ ಹಿಟ್ ಆದಾಗ ರಾಜ್​ಕುಮಾರ್ ಮಾಡಿದ್ದೇನು? ಪುನೀತ್​ಗೆ ಖುಷಿ ಕೊಟ್ಟಿತ್ತು ವಿಚಾರ

ರಾಜ್​ಕುಮಾರ್ ಅವರು ಮಕ್ಕಳ ಜೊತೆ ಮಕ್ಕಳಾಗಿ ಬೆರೆಯುತ್ತಿದ್ದರು. ಹಿರಿಯರ ಬಳಿ ಅವರ ರೀತಿಯೇ ಇರುತ್ತಿದ್ದರು. ರಾಜ್​ಕುಮಾರ್ ಒಪ್ಪಿಗೆ ಬಳಿಕ ಪುನೀತ್ ಹಾಗೂ ಅಶ್ವಿನಿ ಮದುವೆ ಅದ್ದೂರಿಯಾಗಿ ನಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:53 am, Sat, 15 March 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?