AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು
ಪುನೀತ್
TV9 Web
| Edited By: |

Updated on: Nov 01, 2021 | 4:47 PM

Share

ಪುನೀತ್​ ರಾಜ್​ಕುಮಾರ್​ ತುಂಬಾನೇ ಸರಳ ವ್ಯಕ್ತಿಯಾಗಿದ್ದರು ಎನ್ನುವುದನ್ನು ವಿವರಿಸಿ ಹೇಳಬೇಕಿಲ್ಲ. ಅವರು ನಡೆದುಕೊಳ್ಳುತ್ತಿದ್ದ ರೀತಿ ಇದಕ್ಕೆ ಸಾಕ್ಷಿ ಒದಗಿಸುತ್ತಿತ್ತು. ಪುನೀತ್​ ಯಾವಾಗಲೂ ಸಿಂಪಲ್​ ಆಗಿ ಬಟ್ಟೆ ಹಾಕುತ್ತಿದ್ದರು. ಬಟ್ಟೆ ವಿಚಾರದಲ್ಲಿ ಅವರು ಎಂದಿಗೂ ಆಡಂಬರ ಮಾಡಲಿಲ್ಲ. ಐಷಾರಾಮಿ ಕಾರುಗಳಿದ್ದರೂ ಅವರು ದರ್ಪ ತೋರಲಿಲ್ಲ. ಉಳಿದುಕೊಳ್ಳೋಕೆ ಅದ್ಭುತ ಮನೆ ಇದ್ದರೂ ದಿಕ್ಕು ಇಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಯೋಚನೆ ಮಾಡುವುದನ್ನು ನಿಲ್ಲಿಸಲಿಲ್ಲ. ಇದರ ಜತೆಗೆ ಪುನೀತ್​ ಸಾಮಾನ್ಯರ ಜತೆ ಸಾಕಷ್ಟು ಬೆರೆಯುತ್ತಿದ್ದರು. ಇದಕ್ಕೆ ಈಗ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋಗಳೇ ಸಾಕ್ಷಿ.

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹರ್ಲಾಪೂರ, ನಾರಾಯಣ ಪೇಟೆಗಳಿಗೆ ಪುನೀತ್​ ಭೇಟಿ ನೀಡಿದ್ದರು.

ಗಂಗಾವತಿಯಲ್ಲಿ ಸುತ್ತಾಟ ನಡೆಸಿ ಅವರು ವಿಜಯಪೂರಕ್ಕೆ ಹೋಗುವ ವೇಳೆಯಲ್ಲಿ ದಾರಿ ಪಕ್ಕದ ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಕುರಿ ಹಟ್ಟಿ ಪುನೀತ್​ ಕಣ್ಣಿಗೆ ಬಿದ್ದಿತ್ತು. ಅವರು ಅಲ್ಲಿಗೆ ಭೇಟಿ ನೀಡಿದ್ದರು. ಖುಷಿಯಿಂದಲೇ ಕುರಿಗಾಹಿಗಳ ಜೊತೆ ಪುನೀತ್​ ಮಾತುಕತೆ ನಡೆಸಿದ್ದರು. ಕಂಬಳಿ ಮೇಲೆ ಕುಳಿತು, ಅವರು ಊಟ ಮಾಡುವ ರಾಗಿ ಮುದ್ದೆ, ಹಾಲು, ಮಜ್ಜಿಗೆ ಅನ್ನ ಊಟ ಮಾಡಿದ್ದರು. ಇದು ಅವರ ಸರಳತೆಗೆ ಉದಾಹರಣೆ.

ಇದರ ಜತೆಗೆ ಪುನೀತ್​ ಎಲ್ಲರ ಜತೆ ನೆಲದ ಮೇಲೆ ಊಟಕ್ಕೆ ಕುಳಿತ ಫೋಟೋ ಕೂಡ ಸಾಕಷ್ಟು ವೈರಲ್​ ಆಗುತ್ತಿದೆ. ಪುನೀತ್​ ರಾಜ್​​ಕುಮಾರ್​ ಈ ವಿಚಾರಕ್ಕೆ ಅಭಿಮಾನಿಗಳಿಗೆ ತುಂಬಾನೇ ಹತ್ತಿರವಾಗುತ್ತಾರೆ. ಆದರೆ, ಪುನೀತ್​ ಇಲ್ಲ ಎನ್ನುವ ವಿಚಾರ ಕೂಡ ಅಷ್ಟೇ ನೋವನ್ನು ತರುತ್ತದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ