AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು
ಪುನೀತ್
TV9 Web
| Edited By: |

Updated on: Nov 01, 2021 | 4:47 PM

Share

ಪುನೀತ್​ ರಾಜ್​ಕುಮಾರ್​ ತುಂಬಾನೇ ಸರಳ ವ್ಯಕ್ತಿಯಾಗಿದ್ದರು ಎನ್ನುವುದನ್ನು ವಿವರಿಸಿ ಹೇಳಬೇಕಿಲ್ಲ. ಅವರು ನಡೆದುಕೊಳ್ಳುತ್ತಿದ್ದ ರೀತಿ ಇದಕ್ಕೆ ಸಾಕ್ಷಿ ಒದಗಿಸುತ್ತಿತ್ತು. ಪುನೀತ್​ ಯಾವಾಗಲೂ ಸಿಂಪಲ್​ ಆಗಿ ಬಟ್ಟೆ ಹಾಕುತ್ತಿದ್ದರು. ಬಟ್ಟೆ ವಿಚಾರದಲ್ಲಿ ಅವರು ಎಂದಿಗೂ ಆಡಂಬರ ಮಾಡಲಿಲ್ಲ. ಐಷಾರಾಮಿ ಕಾರುಗಳಿದ್ದರೂ ಅವರು ದರ್ಪ ತೋರಲಿಲ್ಲ. ಉಳಿದುಕೊಳ್ಳೋಕೆ ಅದ್ಭುತ ಮನೆ ಇದ್ದರೂ ದಿಕ್ಕು ಇಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಯೋಚನೆ ಮಾಡುವುದನ್ನು ನಿಲ್ಲಿಸಲಿಲ್ಲ. ಇದರ ಜತೆಗೆ ಪುನೀತ್​ ಸಾಮಾನ್ಯರ ಜತೆ ಸಾಕಷ್ಟು ಬೆರೆಯುತ್ತಿದ್ದರು. ಇದಕ್ಕೆ ಈಗ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋಗಳೇ ಸಾಕ್ಷಿ.

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹರ್ಲಾಪೂರ, ನಾರಾಯಣ ಪೇಟೆಗಳಿಗೆ ಪುನೀತ್​ ಭೇಟಿ ನೀಡಿದ್ದರು.

ಗಂಗಾವತಿಯಲ್ಲಿ ಸುತ್ತಾಟ ನಡೆಸಿ ಅವರು ವಿಜಯಪೂರಕ್ಕೆ ಹೋಗುವ ವೇಳೆಯಲ್ಲಿ ದಾರಿ ಪಕ್ಕದ ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಕುರಿ ಹಟ್ಟಿ ಪುನೀತ್​ ಕಣ್ಣಿಗೆ ಬಿದ್ದಿತ್ತು. ಅವರು ಅಲ್ಲಿಗೆ ಭೇಟಿ ನೀಡಿದ್ದರು. ಖುಷಿಯಿಂದಲೇ ಕುರಿಗಾಹಿಗಳ ಜೊತೆ ಪುನೀತ್​ ಮಾತುಕತೆ ನಡೆಸಿದ್ದರು. ಕಂಬಳಿ ಮೇಲೆ ಕುಳಿತು, ಅವರು ಊಟ ಮಾಡುವ ರಾಗಿ ಮುದ್ದೆ, ಹಾಲು, ಮಜ್ಜಿಗೆ ಅನ್ನ ಊಟ ಮಾಡಿದ್ದರು. ಇದು ಅವರ ಸರಳತೆಗೆ ಉದಾಹರಣೆ.

ಇದರ ಜತೆಗೆ ಪುನೀತ್​ ಎಲ್ಲರ ಜತೆ ನೆಲದ ಮೇಲೆ ಊಟಕ್ಕೆ ಕುಳಿತ ಫೋಟೋ ಕೂಡ ಸಾಕಷ್ಟು ವೈರಲ್​ ಆಗುತ್ತಿದೆ. ಪುನೀತ್​ ರಾಜ್​​ಕುಮಾರ್​ ಈ ವಿಚಾರಕ್ಕೆ ಅಭಿಮಾನಿಗಳಿಗೆ ತುಂಬಾನೇ ಹತ್ತಿರವಾಗುತ್ತಾರೆ. ಆದರೆ, ಪುನೀತ್​ ಇಲ್ಲ ಎನ್ನುವ ವಿಚಾರ ಕೂಡ ಅಷ್ಟೇ ನೋವನ್ನು ತರುತ್ತದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್