AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು.

ಪುನೀತ್​ ಸರಳತೆಗೆ ಸಾಕ್ಷಿ ಈ ಫೋಟೋಗಳು; ಕುರಿಗಾಹಿಗಳ ಜತೆ ಮಜ್ಜಿಗೆ ಅನ್ನ ಊಟ ಮಾಡಿದ್ದ ಅಪ್ಪು
ಪುನೀತ್
TV9 Web
| Edited By: |

Updated on: Nov 01, 2021 | 4:47 PM

Share

ಪುನೀತ್​ ರಾಜ್​ಕುಮಾರ್​ ತುಂಬಾನೇ ಸರಳ ವ್ಯಕ್ತಿಯಾಗಿದ್ದರು ಎನ್ನುವುದನ್ನು ವಿವರಿಸಿ ಹೇಳಬೇಕಿಲ್ಲ. ಅವರು ನಡೆದುಕೊಳ್ಳುತ್ತಿದ್ದ ರೀತಿ ಇದಕ್ಕೆ ಸಾಕ್ಷಿ ಒದಗಿಸುತ್ತಿತ್ತು. ಪುನೀತ್​ ಯಾವಾಗಲೂ ಸಿಂಪಲ್​ ಆಗಿ ಬಟ್ಟೆ ಹಾಕುತ್ತಿದ್ದರು. ಬಟ್ಟೆ ವಿಚಾರದಲ್ಲಿ ಅವರು ಎಂದಿಗೂ ಆಡಂಬರ ಮಾಡಲಿಲ್ಲ. ಐಷಾರಾಮಿ ಕಾರುಗಳಿದ್ದರೂ ಅವರು ದರ್ಪ ತೋರಲಿಲ್ಲ. ಉಳಿದುಕೊಳ್ಳೋಕೆ ಅದ್ಭುತ ಮನೆ ಇದ್ದರೂ ದಿಕ್ಕು ಇಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಯೋಚನೆ ಮಾಡುವುದನ್ನು ನಿಲ್ಲಿಸಲಿಲ್ಲ. ಇದರ ಜತೆಗೆ ಪುನೀತ್​ ಸಾಮಾನ್ಯರ ಜತೆ ಸಾಕಷ್ಟು ಬೆರೆಯುತ್ತಿದ್ದರು. ಇದಕ್ಕೆ ಈಗ ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋಗಳೇ ಸಾಕ್ಷಿ.

​ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಪುನೀತ್ ರಾಜ್​ಕುಮಾರ್ ಸೆಪ್ಟೆಂಬರ್​ ತಿಂಗಳಲ್ಲಿ​ ಭೇಟಿ ನೀಡಿದ್ದರು. ಆದರೆ, ಬೆಟ್ಟ ಬಂದ್ ಆಗಿತ್ತು. ಹೀಗಾಗಿ, ಗಂಗಾವತಿ ಸಮೀಪದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರು ಸುತ್ತಾಟ ನಡೆಸಿದ್ದರು. ಸ್ಥಳೀಯ ಪ್ರವಾಸಿ ಸ್ಥಳಗಳಾದ ಋಷಿಮುಖ ಪರ್ವತ, ಸಣಾಪೂರ, ಬಂಡಿ ಹರ್ಲಾಪೂರ, ನಾರಾಯಣ ಪೇಟೆಗಳಿಗೆ ಪುನೀತ್​ ಭೇಟಿ ನೀಡಿದ್ದರು.

ಗಂಗಾವತಿಯಲ್ಲಿ ಸುತ್ತಾಟ ನಡೆಸಿ ಅವರು ವಿಜಯಪೂರಕ್ಕೆ ಹೋಗುವ ವೇಳೆಯಲ್ಲಿ ದಾರಿ ಪಕ್ಕದ ಜಮೀನಿನಲ್ಲಿ ಕುರಿಗಾಹಿಗಳು ಹಾಕಿರುವ ಕುರಿ ಹಟ್ಟಿ ಪುನೀತ್​ ಕಣ್ಣಿಗೆ ಬಿದ್ದಿತ್ತು. ಅವರು ಅಲ್ಲಿಗೆ ಭೇಟಿ ನೀಡಿದ್ದರು. ಖುಷಿಯಿಂದಲೇ ಕುರಿಗಾಹಿಗಳ ಜೊತೆ ಪುನೀತ್​ ಮಾತುಕತೆ ನಡೆಸಿದ್ದರು. ಕಂಬಳಿ ಮೇಲೆ ಕುಳಿತು, ಅವರು ಊಟ ಮಾಡುವ ರಾಗಿ ಮುದ್ದೆ, ಹಾಲು, ಮಜ್ಜಿಗೆ ಅನ್ನ ಊಟ ಮಾಡಿದ್ದರು. ಇದು ಅವರ ಸರಳತೆಗೆ ಉದಾಹರಣೆ.

ಇದರ ಜತೆಗೆ ಪುನೀತ್​ ಎಲ್ಲರ ಜತೆ ನೆಲದ ಮೇಲೆ ಊಟಕ್ಕೆ ಕುಳಿತ ಫೋಟೋ ಕೂಡ ಸಾಕಷ್ಟು ವೈರಲ್​ ಆಗುತ್ತಿದೆ. ಪುನೀತ್​ ರಾಜ್​​ಕುಮಾರ್​ ಈ ವಿಚಾರಕ್ಕೆ ಅಭಿಮಾನಿಗಳಿಗೆ ತುಂಬಾನೇ ಹತ್ತಿರವಾಗುತ್ತಾರೆ. ಆದರೆ, ಪುನೀತ್​ ಇಲ್ಲ ಎನ್ನುವ ವಿಚಾರ ಕೂಡ ಅಷ್ಟೇ ನೋವನ್ನು ತರುತ್ತದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ