AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ‘ಅಪ್ಪು’ ರೀ-ರಿಲೀಸ್; ಹೊಸ ಚಿತ್ರ ತಂಡಗಳಿಗೆ ಇಲ್ಲ ಬಿಡುಗಡೆ ಮಾಡುವ ಆಸಕ್ತಿ

ಈ ವಾರ ಕನ್ನಡ ಚಿತ್ರರಂಗದಲ್ಲಿ ಹಲವು ಹೊಸ ಬಿಡುಗಡೆಗಳಿಲ್ಲ. ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನಾಚರಣೆಯ ಪ್ರಯುಕ್ತ ‘ಅಪ್ಪು’ ಸಿನಿಮಾ ಮರುಬಿಡುಗಡೆಯಾಗುತ್ತಿದೆ. ಇದರ ಜೊತೆಗೆ, ಹಿಂದಿ ಚಿತ್ರ ‘ದಿ ಡಿಪ್ಲೋಮ್ಯಾಟ್’, ತೆಲುಗು ಚಿತ್ರಗಳು ‘ದಿಲ್ರುಬಾ’ ಮತ್ತು ‘ಕೋರ್ಟ್’, ಮತ್ತು ತಮಿಳು ಚಿತ್ರ ‘ಸ್ವೀಟ್‌ಹಾರ್ಟ್’ ಗಳು ಬಿಡುಗಡೆಯಾಗುತ್ತಿವೆ.

ಈ ವಾರ ‘ಅಪ್ಪು’ ರೀ-ರಿಲೀಸ್; ಹೊಸ ಚಿತ್ರ ತಂಡಗಳಿಗೆ ಇಲ್ಲ ಬಿಡುಗಡೆ ಮಾಡುವ ಆಸಕ್ತಿ
ಪುನೀತ್​-ಜಾನ್
ರಾಜೇಶ್ ದುಗ್ಗುಮನೆ
|

Updated on: Mar 13, 2025 | 12:50 PM

Share

ಶುಕ್ರವಾರ ಬಂತೆಂದರೆ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ, ಈ ವಾರ ಯಾವುದೇ ಹೊಸ ಸಿನಿಮಾಗಳು ತೆರೆಗೆ ಬರುತ್ತಿಲ್ಲ. ಯಾವುದೇ ಹೊಸ ಸಿನಿಮಾಗಳನ್ನು ರಿಲೀಸ್ ಮಾಡಲು ತಂಡದವರು ಹೆಚ್ಚು ಆಸಕ್ತಿ ತೋರಿಸಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಈ ಕಾರಣದಿಂದ ಸಿನಿಮಾ ಹೆಚ್ಚಿನ ಸಂಖ್ಯೆಯಲ್ಲಿ ರಿಲೀಸ್ ಆಗುತ್ತಿಲ್ಲ. ಈ ವಾರ ರಿಲೀಸ್ ಆಗುತ್ತಿರುವ ಸಿನಿಮಾಗಳ ಬಗ್ಗೆ ಇಲ್ಲಿದೆ ವಿವರ.

ಅಪ್ಪು

ಪುನೀತ್ ರಾಜ್​ಕುಮಾರ್ ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾಗಿದ್ದರು. ಕೇವಲ 46 ವರ್ಷ ವಯಸ್ಸಿನಲ್ಲಿ ಅವರು ನಿಧನ ಹೊಂದಿದರು. ಅವರು ಇಲ್ಲ ಎಂಬ ನೋವು ಎಂದಿಗೂ ಮರೆಯಾಗುವಂಥದ್ದು ಅಲ್ಲ. ಮಾರ್ಚ್ 17 ಪುನೀತ್ ರಾಜ್​ಕುಮಾರ್ ಅವರ ಜನ್ಮದಿನ. ಆ ಪ್ರಯುಕ್ತ ‘ಅಪ್ಪು’ ಸಿನಿಮಾ ರೀ-ರಿಲೀಸ್ ಆಗುತ್ತಿದೆ.

ಟಾಲಿವುಡ್​ನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರು ‘ಅಪ್ಪು’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಪಾರ್ವತಮ್ಮ ರಾಜ್​ಕುಮಾರ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಶಿವರಾಜ್​ಕುಮಾರ್ ಅವರು ‘ಅಪ್ಪು’ ಎನ್ನುವ ಶೀರ್ಷಿಕೆ ಕೊಟ್ಟರು ಎನ್ನಲಾಗಿದೆ. ಗುರು ಕಿರಣ್ ಸಂಗೀಯ ಸಂಯೋಜನೆ ಚಿತ್ರದ ತೂಕ ಹೆಚ್ಚಿಸಿತು. ಈಗ ‘ಅಪ್ಪು’ ಸಿನಿಮಾ ಮತ್ತೆ ರಿಲೀಸ್ ಆಗುತ್ತಿರುವುದು ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಪಿಆರ್​ಕೆ ಪ್ರೊಡಕ್ಷನ್ಸ್ ಬ್ಯಾನರ್ ಮೂಲಕ ಸಿನಿಮಾ ಬಿಡುಗಡೆ ಕಾಣುತ್ತಿರುವುದು ವಿಶೇಷ. ಈ ಚಿತ್ರದ ಸ್ವಾಗತಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ದೊಡ್ಡ ಮಟ್ಟದಲ್ಲೇ ಚಿತ್ರ ಬಿಡುಗಡೆ ಆಗಲಿದೆ.

ಇದನ್ನೂ ಓದಿ
Image
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
Image
ಬೇಸರದಲ್ಲಿರೋ ಸೋನು ನಿಗಮ್ ಬೆಂಬಲಕ್ಕೆ ನಿಂತ ಸಂಗೀತಾ ಶೃಂಗೇರಿ
Image
ಯಶ್​ ಬಗ್ಗೆ ಗುಣಗಾನ ಮಾಡಿದ ಹಾಲಿವುಡ್ ತಂತ್ರಜ್ಞ; ಕನ್ನಡ ಚಿತ್ರರಂಗದ ಹೆಮ್ಮೆ
Image
‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು

ಇದನ್ನೂ ಓದಿ: ‘ಇದು ಸಿಂಹದ ಮರಿ’; ‘ಅಪ್ಪು’ 100ನೇ ದಿನದ ಸೆಲೆಬ್ರೇಷನ್​ನಲ್ಲಿ ರಜನಿ ಮಾತು; ಇಲ್ಲಿದೆ ಹಳೆಯ ವಿಡಿಯೋ

ಡಿಪ್ಲೋಮ್ಯಾಟ್

ಹಿಂದಿಯಲ್ಲಿ ಜಾನ್ ಅಬ್ರಹಾಂ ನಟಿಸುತ್ತಿರುವ ‘ದಿ ಡಿಪ್ಲೋಮ್ಯಾಟ್’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಸಾದಿಯಾ ಖತೀಬ್ ನಾಯಕಿ. ಶಿವ ನಾಯರ್ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ಸಿಕ್ಕಿಲ್ಲ. ಉಳಿದಂತೆ ತೆಲುಗಿನಲ್ಲಿ ಕಿರಣ್ ಹಾಗೂ ರುಕ್ಸರ್ ದಿಲ್ಲೋನ್ ನಟನೆಯ ‘ದಿಲ್ರುಬಾ’, ತೆಲುಗಿನ ‘ಕೋರ್ಟ್’, ‘ತಮಿಳಿನ ‘ಸ್ವೀಟ್​ಹಾರ್ಟ್’ ಸಿನಿಮಾ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ