AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು

‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು
ಫೀನಿಕ್ಸ್ ಸಿನಿಮಾ ತಂಡ
Follow us
ರಾಜೇಶ್ ದುಗ್ಗುಮನೆ
|

Updated on: Jul 31, 2023 | 11:02 AM

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತಿ ಓಂ ಪ್ರಕಾಶ್ ರಾವ್​ಗೆ (Om Prakash Rau) ಇದೆ. ಇತ್ತೀಚೆಗೆ ಅವರ ನಿರ್ದೇಶನದ ಯಾವುದೇ ಸಿನಿಮಾ ಬಂದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇತ್ತು. ಈಗ ಈ ಬೇಸರ ದೂರವಾಗುತ್ತಿದೆ. ‘ಫೀನಿಕ್ಸ್’ ಹೆಸರಿನ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಓಂ ಪ್ರಕಾಶ್ ರಾವ್ ರೆಡಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಆರಂಭವಾಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಶ್ರೀಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ನಿಮಿಕಾ ರತ್ನಾಕರ್, ಶಿಲ್ಪ ಶೆಟ್ಟಿ ಹಾಗೂ ಕೃತಿಕಾ ಲೋಬೋ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ, ಜಗದೀಶ್ ಮತ್ತು ಪ್ರತಾಪ್ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರದೀಪ್ ರಾಹುತ್ ಅವರು ಈ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರ ಮಾಡುತ್ತಿದ್ದಾರೆ. ಅನಿಲ್ ಕುಮಾರ್, ಸ್ವಸ್ತಿಕ್ ಶಂಕರ್ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಜೊತೆ ವಿದೇಶದಲ್ಲೂ ಶೂಟಿಂಗ್​​ಗೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಜರ್ಮನಿ ಮತ್ತು ಆಸ್ಟ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಓಂ ಪ್ರಕಾಶ್ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

ಸುಬ್ರಹ್ಮಣಿ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಓಂ ಪ್ರಕಾಶ್ ರಾವ್ ಅವರು ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಸಾಧು ಕೋಕಿಲ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಅವರು ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ಸಾಹಸ ನಿರ್ದೇಶಕರಾಗಿ ವಿಜಯನ್ ಅವರು ಕೆಲಸ ಮಾಡುತ್ತಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಚಿತ್ರಕ್ಕಿದೆ. ಓಂ ಪ್ರಕಾಶ್ ರಾವ್ ಜನ್ಮದಿನದ ಪ್ರಯುಕ್ತ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವ ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್
ಇದು ದೋಷಾರೋಪಣೆ ಮಾಡುವ ಸಮಯ ಅಲ್ಲ: ಶಿವಕುಮಾರ್