AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು

‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು
ಫೀನಿಕ್ಸ್ ಸಿನಿಮಾ ತಂಡ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 11:02 AM

Share

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತಿ ಓಂ ಪ್ರಕಾಶ್ ರಾವ್​ಗೆ (Om Prakash Rau) ಇದೆ. ಇತ್ತೀಚೆಗೆ ಅವರ ನಿರ್ದೇಶನದ ಯಾವುದೇ ಸಿನಿಮಾ ಬಂದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇತ್ತು. ಈಗ ಈ ಬೇಸರ ದೂರವಾಗುತ್ತಿದೆ. ‘ಫೀನಿಕ್ಸ್’ ಹೆಸರಿನ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಓಂ ಪ್ರಕಾಶ್ ರಾವ್ ರೆಡಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಆರಂಭವಾಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಶ್ರೀಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ನಿಮಿಕಾ ರತ್ನಾಕರ್, ಶಿಲ್ಪ ಶೆಟ್ಟಿ ಹಾಗೂ ಕೃತಿಕಾ ಲೋಬೋ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ, ಜಗದೀಶ್ ಮತ್ತು ಪ್ರತಾಪ್ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರದೀಪ್ ರಾಹುತ್ ಅವರು ಈ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರ ಮಾಡುತ್ತಿದ್ದಾರೆ. ಅನಿಲ್ ಕುಮಾರ್, ಸ್ವಸ್ತಿಕ್ ಶಂಕರ್ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಜೊತೆ ವಿದೇಶದಲ್ಲೂ ಶೂಟಿಂಗ್​​ಗೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಜರ್ಮನಿ ಮತ್ತು ಆಸ್ಟ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಓಂ ಪ್ರಕಾಶ್ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

ಸುಬ್ರಹ್ಮಣಿ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಓಂ ಪ್ರಕಾಶ್ ರಾವ್ ಅವರು ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಸಾಧು ಕೋಕಿಲ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಅವರು ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ಸಾಹಸ ನಿರ್ದೇಶಕರಾಗಿ ವಿಜಯನ್ ಅವರು ಕೆಲಸ ಮಾಡುತ್ತಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಚಿತ್ರಕ್ಕಿದೆ. ಓಂ ಪ್ರಕಾಶ್ ರಾವ್ ಜನ್ಮದಿನದ ಪ್ರಯುಕ್ತ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ