AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು

‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ.

 ಓಂ ಪ್ರಕಾಶ್ ರಾವ್ ಕಂಬ್ಯಾಕ್ ಸಿನಿಮಾದಲ್ಲಿ ಮೂವರು ನಾಯಕಿಯರು
ಫೀನಿಕ್ಸ್ ಸಿನಿಮಾ ತಂಡ
ರಾಜೇಶ್ ದುಗ್ಗುಮನೆ
|

Updated on: Jul 31, 2023 | 11:02 AM

Share

ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿರುವ ಖ್ಯಾತಿ ಓಂ ಪ್ರಕಾಶ್ ರಾವ್​ಗೆ (Om Prakash Rau) ಇದೆ. ಇತ್ತೀಚೆಗೆ ಅವರ ನಿರ್ದೇಶನದ ಯಾವುದೇ ಸಿನಿಮಾ ಬಂದಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇತ್ತು. ಈಗ ಈ ಬೇಸರ ದೂರವಾಗುತ್ತಿದೆ. ‘ಫೀನಿಕ್ಸ್’ ಹೆಸರಿನ ಸಿನಿಮಾ ಮೂಲಕ ಕಂಬ್ಯಾಕ್ ಮಾಡಲು ಓಂ ಪ್ರಕಾಶ್ ರಾವ್ ರೆಡಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್ ಆರಂಭವಾಗಲಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.

ಶ್ರೀಗುರು ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ತ್ರಿಶಾ ಪ್ರಕಾಶ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಫೀನಿಕ್ಸ್’ ಓಂ ಪ್ರಕಾಶ್ ರಾವ್​ ನಿರ್ದೇಶನದ 49ನೇ ಸಿನಿಮಾ ಅನ್ನೋದು ವಿಶೇಷ. ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ ಇರಲಿದೆ. ನಿಮಿಕಾ ರತ್ನಾಕರ್, ಶಿಲ್ಪ ಶೆಟ್ಟಿ ಹಾಗೂ ಕೃತಿಕಾ ಲೋಬೋ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಭಾಸ್ಕರ್ ಶೆಟ್ಟಿ, ಜಗದೀಶ್ ಮತ್ತು ಪ್ರತಾಪ್ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರದೀಪ್ ರಾಹುತ್ ಅವರು ಈ ಚಿತ್ರದಲ್ಲಿ ಮುಖ್ಯ ವಿಲನ್ ಪಾತ್ರ ಮಾಡುತ್ತಿದ್ದಾರೆ. ಅನಿಲ್ ಕುಮಾರ್, ಸ್ವಸ್ತಿಕ್ ಶಂಕರ್ ಮುಂತಾದವರು ಪಾತ್ರವರ್ಗದಲ್ಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಶೂಟಿಂಗ್ ಆರಂಭ ಆಗಲಿದೆ. ಬೆಂಗಳೂರಿನ ಜೊತೆ ವಿದೇಶದಲ್ಲೂ ಶೂಟಿಂಗ್​​ಗೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಜರ್ಮನಿ ಮತ್ತು ಆಸ್ಟ್ರೀಯಾದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಓಂ ಪ್ರಕಾಶ್ ರಾವ್ ತಿಳಿಸಿದ್ದಾರೆ.

ಇದನ್ನೂ ಓದಿ: ಮೊದಲ ಮೂರು ದಿನಕ್ಕೆ ರಣವೀರ್-ಆಲಿಯಾ ಸಿನಿಮಾ ಗಳಿಸಿದ್ದು ಬರೀ ಇಷ್ಟೇನಾ? ಸೋಲಿನ ಮುನ್ಸೂಚನೆಯೇ?

ಸುಬ್ರಹ್ಮಣಿ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಓಂ ಪ್ರಕಾಶ್ ರಾವ್ ಅವರು ಚಿತ್ರಕಥೆ ಬರೆದಿದ್ದಾರೆ. ಈ ಚಿತ್ರಕ್ಕೆ ಸಾಧು ಕೋಕಿಲ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ರವಿಕುಮಾರ್ ಅವರು ಕ್ಯಾಮೆರಾ ಕೆಲಸ ಮಾಡಲಿದ್ದಾರೆ. ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ಸಾಹಸ ನಿರ್ದೇಶಕರಾಗಿ ವಿಜಯನ್ ಅವರು ಕೆಲಸ ಮಾಡುತ್ತಿದ್ದಾರೆ. ಎಂ.ಎಸ್ ರಮೇಶ್ ಸಂಭಾಷಣೆ ಚಿತ್ರಕ್ಕಿದೆ. ಓಂ ಪ್ರಕಾಶ್ ರಾವ್ ಜನ್ಮದಿನದ ಪ್ರಯುಕ್ತ ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ