AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಧರಿಸಿದ್ದು ನಿಜವಾದ ಹುಲಿ ಉಗುರಲ್ಲ, ಬೇಕಿದ್ದರೆ ಪರಿಶೀಲಿಸಿ’; ನಿಖಿಲ್ ಕುಮಾರ್ ಸ್ಪಷ್ಟನೆ  

‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದು ನಿಖಿಲ್ ಪೋಸ್ಟ್ ಆರಂಭಿಸಿದ್ದಾರೆ.

‘ನಾನು ಧರಿಸಿದ್ದು ನಿಜವಾದ ಹುಲಿ ಉಗುರಲ್ಲ, ಬೇಕಿದ್ದರೆ ಪರಿಶೀಲಿಸಿ’; ನಿಖಿಲ್ ಕುಮಾರ್ ಸ್ಪಷ್ಟನೆ   
ನಿಖಿಲ್ ಕುಮಾರಸ್ವಾಮಿ
ರಾಜೇಶ್ ದುಗ್ಗುಮನೆ
| Edited By: |

Updated on:Oct 26, 2023 | 12:40 PM

Share

ನಿಖಿಲ್ ಕುಮಾರ್ (Nikhil Kumar) ಅವರು ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿದ್ದರು ಎನ್ನಲಾದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ನಿಖಿಲ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಇದು ಸತ್ಯಕ್ಕೆ ದೂರವಾದುದ್ದು’ ಎಂದು ಅವರು ಹೇಳಿದ್ದಾರೆ. ಜೊತೆಗೆ ಸಂಬಂಧ ಪಟ್ಟ ಅಧಿಕಾರಿಗಳು ಇದನ್ನು ಪರಿಶೀಲಿಸಬಹುದು ಎಂದಿದ್ದಾರೆ.

‘ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ’ ಎಂದು ನಿಖಿಲ್ ಪೋಸ್ಟ್ ಆರಂಭಿಸಿದ್ದಾರೆ.

‘ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೊರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ’ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ವರ್ತೂರು ಸಂತೋಷ್ ಎಷ್ಟು ಗ್ರಾಂ ಚಿನ್ನ ಧರಿಸುತ್ತಿದ್ದರು?

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಮೊದಲು ಬಂಧಿಸಲಾಯಿತು. ಆ ಬಳಿಕ ಹಲವು ಸೆಲೆಬ್ರಿಟಿಗಳು ಹುಲಿ ಉಗುರು ಧರಿಸಿದ್ದ ಫೋಟೋ ವೈರಲ್ ಆದವು. ನಟ ದರ್ಶನ್, ಜಗ್ಗೇಶ್, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಸೇರಿ ಅನೇಕರ ಕತ್ತಿನಲ್ಲಿ ಹುಲಿ ಉಗುರು ಇರುವ ಪೆಂಡೆಂಟ್ ಕಂಡಿದೆ. ಇವರಲ್ಲಿ ಯಾರ್ಯಾರು ಧರಿಸಿದ್ದು ನಿಜವಾದುದ್ದು, ಯಾರ್ಯಾರು ಧರಿಸಿದ್ದು ಡುಪ್ಲಿಕೇಟ್ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:38 pm, Wed, 25 October 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ