AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು

​Tiger Claw Pendant Case: ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ರಾಕ್​ಲೈನ್​ ವೆಂಕಟೇಶ್​ ಅವರ ಫೋಟೋ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು
ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​
TV9 Web
| Edited By: |

Updated on:Oct 26, 2023 | 12:34 PM

Share

ಬೆಂಗಳೂರಿನ ಹಲವು ಕಡೆಗಳಲ್ಲಿ ಅರಣ್ಯಾಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಹುಲಿ ಉಗುರು (​Tiger Claw Pendant) ಧರಿಸಿದ ಆರೋಪ ಎದುರಿಸುತ್ತಿರುವ ಅನೇಕ ಸೆಲೆಬ್ರಿಟಿಗಳ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಇಂದು (ಅಕ್ಟೋಬರ್​ 25) ಮಧ್ಯಾಹ್ನ ನಟ ದರ್ಶನ್​ ಅವರ ರಾಜರಾಜೇಶ್ವರಿ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಆ ಬಳಿಕ ನಟ ಜಗ್ಗೇಶ್​ (​Jaggesh) ಮತ್ತು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅದರ ಪರಿಣಾಮವಾಗಿ ತನಿಖೆ ಚುರುಕುಗೊಂಡಿದೆ.

ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆದ ಬಳಿಕ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದಲ್ಲಿ ಇರುವ ಅವರ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸದ್ಯ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದೆ. ಅವರ ಅನುಪಸ್ಥಿತಿಯಲ್ಲೇ ರಾಜಾಜಿನಗರದಲ್ಲಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ಅವರ ಕಾರಿನ ಒಳಗೂ ಶೋಧ ಕಾರ್ಯ ನಡೆಸಲಾಗಿದೆ. ಈ ಸೆಲೆಬ್ರಿಟಿಗಳ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಲ್ಲವೋ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಜವಾದ ಹುಲಿ ಉಗುರು ಹೊಂದಿರುವುದು ಪತ್ತೆಯಾದರೆ ಜಗ್ಗೇಶ್​, ದರ್ಶನ್​, ರಾಕ್​ಲೈನ್​ ವೆಂಕಟೇಶ್, ನಿಖಿಲ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ವರ್ತೂರು ಸಂತೋಷ್​ ರೀತಿಯೇ ಜೈಲು ವಾಸ ಅನುಭವಿಸಬೇಕಾದ ಪ್ರಸಂಗ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Varthur Santhosh: ಪರಪ್ಪನ ಅಗ್ರಹಾರಕ್ಕೆ ವರ್ತೂರು ಸಂತೋಷ್​; ಬಿಗ್ ಬಾಸ್​ ಸ್ಪರ್ಧಿಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ನಿಖಿಲ್​ ಕುಮಾರಸ್ವಾಮಿ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲೂ ಅರಣ್ಯಾಧಿಕಾರಿಗಳಿಂದ ಶೋಧ ಕಾರ್ಯ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡ ಬಂದಿದೆ. ಈ ವೇಳೆ ಮನೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಇಬ್ಬರೂ ಇರಲಿಲ್ಲ. ಹೆಚ್​ಡಿಕೆ ಪತ್ನಿ ಅನಿತಾ ಮಾತ್ರ ಮನೆಯಲ್ಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Wed, 25 October 23

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು