AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು

​Tiger Claw Pendant Case: ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ರಾಕ್​ಲೈನ್​ ವೆಂಕಟೇಶ್​ ಅವರ ಫೋಟೋ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು
ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​
TV9 Web
| Updated By: Digi Tech Desk|

Updated on:Oct 26, 2023 | 12:34 PM

Share

ಬೆಂಗಳೂರಿನ ಹಲವು ಕಡೆಗಳಲ್ಲಿ ಅರಣ್ಯಾಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಹುಲಿ ಉಗುರು (​Tiger Claw Pendant) ಧರಿಸಿದ ಆರೋಪ ಎದುರಿಸುತ್ತಿರುವ ಅನೇಕ ಸೆಲೆಬ್ರಿಟಿಗಳ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಇಂದು (ಅಕ್ಟೋಬರ್​ 25) ಮಧ್ಯಾಹ್ನ ನಟ ದರ್ಶನ್​ ಅವರ ರಾಜರಾಜೇಶ್ವರಿ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಆ ಬಳಿಕ ನಟ ಜಗ್ಗೇಶ್​ (​Jaggesh) ಮತ್ತು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅದರ ಪರಿಣಾಮವಾಗಿ ತನಿಖೆ ಚುರುಕುಗೊಂಡಿದೆ.

ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆದ ಬಳಿಕ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದಲ್ಲಿ ಇರುವ ಅವರ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸದ್ಯ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದೆ. ಅವರ ಅನುಪಸ್ಥಿತಿಯಲ್ಲೇ ರಾಜಾಜಿನಗರದಲ್ಲಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ಅವರ ಕಾರಿನ ಒಳಗೂ ಶೋಧ ಕಾರ್ಯ ನಡೆಸಲಾಗಿದೆ. ಈ ಸೆಲೆಬ್ರಿಟಿಗಳ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಲ್ಲವೋ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಜವಾದ ಹುಲಿ ಉಗುರು ಹೊಂದಿರುವುದು ಪತ್ತೆಯಾದರೆ ಜಗ್ಗೇಶ್​, ದರ್ಶನ್​, ರಾಕ್​ಲೈನ್​ ವೆಂಕಟೇಶ್, ನಿಖಿಲ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ವರ್ತೂರು ಸಂತೋಷ್​ ರೀತಿಯೇ ಜೈಲು ವಾಸ ಅನುಭವಿಸಬೇಕಾದ ಪ್ರಸಂಗ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Varthur Santhosh: ಪರಪ್ಪನ ಅಗ್ರಹಾರಕ್ಕೆ ವರ್ತೂರು ಸಂತೋಷ್​; ಬಿಗ್ ಬಾಸ್​ ಸ್ಪರ್ಧಿಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ನಿಖಿಲ್​ ಕುಮಾರಸ್ವಾಮಿ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲೂ ಅರಣ್ಯಾಧಿಕಾರಿಗಳಿಂದ ಶೋಧ ಕಾರ್ಯ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡ ಬಂದಿದೆ. ಈ ವೇಳೆ ಮನೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಇಬ್ಬರೂ ಇರಲಿಲ್ಲ. ಹೆಚ್​ಡಿಕೆ ಪತ್ನಿ ಅನಿತಾ ಮಾತ್ರ ಮನೆಯಲ್ಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Wed, 25 October 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!