AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು

​Tiger Claw Pendant Case: ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ರಾಕ್​ಲೈನ್​ ವೆಂಕಟೇಶ್​ ಅವರ ಫೋಟೋ ವೈರಲ್​ ಆಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನಲ್ಲಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅರಣ್ಯಾಧಿಕಾರಿಗಳ ಶೋಧ; ಹುಲಿ ಉಗುರು ಕೇಸ್​ ತನಿಖೆ ಚುರುಕು
ಜಗ್ಗೇಶ್​, ರಾಕ್​ಲೈನ್​ ವೆಂಕಟೇಶ್​
TV9 Web
| Edited By: |

Updated on:Oct 26, 2023 | 12:34 PM

Share

ಬೆಂಗಳೂರಿನ ಹಲವು ಕಡೆಗಳಲ್ಲಿ ಅರಣ್ಯಾಧಿಕಾರಿಗಳು ಶೋಧಕಾರ್ಯ ನಡೆಸುತ್ತಿದ್ದಾರೆ. ಹುಲಿ ಉಗುರು (​Tiger Claw Pendant) ಧರಿಸಿದ ಆರೋಪ ಎದುರಿಸುತ್ತಿರುವ ಅನೇಕ ಸೆಲೆಬ್ರಿಟಿಗಳ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಇಂದು (ಅಕ್ಟೋಬರ್​ 25) ಮಧ್ಯಾಹ್ನ ನಟ ದರ್ಶನ್​ ಅವರ ರಾಜರಾಜೇಶ್ವರಿ ನಿವಾಸಕ್ಕೆ ಅಧಿಕಾರಿಗಳು ಭೇಟಿ ನೀಡಿದರು. ಆ ಬಳಿಕ ನಟ ಜಗ್ಗೇಶ್​ (​Jaggesh) ಮತ್ತು ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ (Rockline Venkatesh) ಅವರ ಮನೆಯಲ್ಲೂ ಅರಣ್ಯಾಧಿಕಾರಿಗಳ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಕೇಳಿಬರುತ್ತಿದೆ. ಅದರ ಪರಿಣಾಮವಾಗಿ ತನಿಖೆ ಚುರುಕುಗೊಂಡಿದೆ.

ತಾವು ಧರಿಸಿರುವುದು ನಿಜವಾದ ಹುಲಿ ಉಗುರು ಎಂದು ಸ್ವತಃ ಜಗ್ಗೇಶ್​ ಅವರು ಹೇಳಿದ್ದರು. ಈ ಹಿಂದೆ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಆ ವಿಡಿಯೋ ವೈರಲ್​ ಆದ ಬಳಿಕ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಬೆಂಗಳೂರಿನ ಮಲ್ಲೇಶ್ವರದಲ್ಲಿ ಇರುವ ಅವರ ನಿವಾಸಕ್ಕೆ ಬಂದು ತಪಾಸಣೆ ನಡೆಸಿದ್ದಾರೆ.

ಇದನ್ನೂ ಓದಿ: Darshan: ಹುಲಿ ಉಗುರು ಧರಿಸಿದ ಆರೋಪ; ನಟ ದರ್ಶನ್​ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಅವರು ಸದ್ಯ ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದೆ. ಅವರ ಅನುಪಸ್ಥಿತಿಯಲ್ಲೇ ರಾಜಾಜಿನಗರದಲ್ಲಿ ಇರುವ ನಿವಾಸದಲ್ಲಿ ಪರಿಶೀಲನೆ ನಡೆಯುತ್ತಿದೆ. ಅವರ ಕಾರಿನ ಒಳಗೂ ಶೋಧ ಕಾರ್ಯ ನಡೆಸಲಾಗಿದೆ. ಈ ಸೆಲೆಬ್ರಿಟಿಗಳ ಬಳಿ ಇರುವುದು ನಿಜವಾದ ಹುಲಿ ಉಗುರು ಹೌದೋ ಅಲ್ಲವೋ ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಜವಾದ ಹುಲಿ ಉಗುರು ಹೊಂದಿರುವುದು ಪತ್ತೆಯಾದರೆ ಜಗ್ಗೇಶ್​, ದರ್ಶನ್​, ರಾಕ್​ಲೈನ್​ ವೆಂಕಟೇಶ್, ನಿಖಿಲ್​ ಕುಮಾರ್​ ಮುಂತಾದ ಸೆಲೆಬ್ರಿಟಿಗಳು ಕೂಡ ವರ್ತೂರು ಸಂತೋಷ್​ ರೀತಿಯೇ ಜೈಲು ವಾಸ ಅನುಭವಿಸಬೇಕಾದ ಪ್ರಸಂಗ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Varthur Santhosh: ಪರಪ್ಪನ ಅಗ್ರಹಾರಕ್ಕೆ ವರ್ತೂರು ಸಂತೋಷ್​; ಬಿಗ್ ಬಾಸ್​ ಸ್ಪರ್ಧಿಗೆ 14 ದಿನಗಳ ನ್ಯಾಯಾಂಗ ಬಂಧನ

ನಟ ನಿಖಿಲ್​ ಕುಮಾರಸ್ವಾಮಿ ಅವರು ಕೂಡ ಹುಲಿ ಉಗುರಿನ ಲಾಕೆಟ್​ ಧರಿಸಿರುವ ಆರೋಪ ಎದುರಿಸುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲೂ ಅರಣ್ಯಾಧಿಕಾರಿಗಳಿಂದ ಶೋಧ ಕಾರ್ಯ ನಡೆದಿದೆ. ಬೆಂಗಳೂರಿನ ಜೆ.ಪಿ. ನಗರದಲ್ಲಿ ಇರುವ ನಿಖಿಲ್ ಕುಮಾರಸ್ವಾಮಿ ಅವರ ನಿವಾಸಕ್ಕೆ ಅರಣ್ಯ ಇಲಾಖೆಯ ನಾಲ್ವರು ಅಧಿಕಾರಿಗಳ ತಂಡ ಬಂದಿದೆ. ಈ ವೇಳೆ ಮನೆಯಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಇಬ್ಬರೂ ಇರಲಿಲ್ಲ. ಹೆಚ್​ಡಿಕೆ ಪತ್ನಿ ಅನಿತಾ ಮಾತ್ರ ಮನೆಯಲ್ಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:24 pm, Wed, 25 October 23

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ