AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ನಟನೆಯ ಈ ಚಿತ್ರ ನೋಡಿದ್ದಾರೆ ಟಿಮ್ ಡೇವಿಡ್; ಅಚ್ಚರಿಯ ಮಾಹಿತಿ ರಿವೀಲ್

ಆರ್‌ಸಿಬಿ ಆಟಗಾರ ಟಿಮ್ ಡೇವಿಡ್ ಅವರು ದಾನಿಶ್ ಸೇಠ್ ಜೊತೆಗಿನ ಸಂದರ್ಶನದಲ್ಲಿ ವಿಷ್ಣುವರ್ಧನ್ ಅಭಿನಯದ ಚಿತ್ರವನ್ನು ನೋಡಿದ್ದಾಗಿ ಹೇಳಿದ್ದಾರೆ. ಈ ವಿಷಯ ವೈರಲ್ ಆಗಿದ್ದು, ಟಿಮ್ ಡೇವಿಡ್ ಅವರ ಕನ್ನಡ ಚಲನಚಿತ್ರದ ಬಗ್ಗೆ ಇರುವ ಒಲವು ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದೆ. ಟಿಮ್ ಡೇವಿಡ್ ಸಿಂಗಾಪುರದಲ್ಲಿ ಜನಿಸಿದ್ದಾರೆ ಎಂಬುದನ್ನು ಸಹ ಅವರು ತಿಳಿಸಿದ್ದಾರೆ.

ವಿಷ್ಣುವರ್ಧನ್ ನಟನೆಯ ಈ ಚಿತ್ರ ನೋಡಿದ್ದಾರೆ ಟಿಮ್ ಡೇವಿಡ್; ಅಚ್ಚರಿಯ ಮಾಹಿತಿ ರಿವೀಲ್
ಡೇವಿಡ್-ವಿಷ್ಣು
ರಾಜೇಶ್ ದುಗ್ಗುಮನೆ
| Edited By: |

Updated on:May 05, 2025 | 1:51 PM

Share

2025ನೇ ಸಾಲಿನ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಟಿಮ್ ಡೇವಿಡ್ ಆಡುತ್ತಿದ್ದಾರೆ. ಅವರು ಸ್ಟ್ರಾಂಗ್ ಹಿಟ್ಟರ್ ಎನಿಸಿಕೊಂಡಿದ್ದಾರೆ. ಕ್ಲೈಮ್ಯಾಕ್ಸ್​ನಲ್ಲಿ ಬಂದು ತಂಡದ ಮೊತ್ತ ಹೆಚ್ಚಿಸಲು ಅವರು ಕಾರಣ ಆಗುತ್ತಾರೆ. ಅವರು ದಾನಿಶ್ ಸೇಠ್ (Danish Sait) ಜೊತೆ ನೀಡಿದ ಸಂದರ್ಶನದಲ್ಲಿ ಒಂದು ಅಚ್ಚರಿಯ ಮಾಹಿತಿ ರಿವೀಲ್ ಮಾಡಿದ್ದಾರೆ. ಅದೇನೆಂದರೆ ಟಿಮ್ ಡೇವಿಡ್ ಅವರು ವಿಷ್ಣುವರ್ಧನ್ ನಟನೆಯ ಸಿನಿಮಾ ಒಂದನ್ನು ನೋಡಿದ್ದಾರಂತೆ! ಈ ಫನ್ ಟಾಕ್ ವಿಡಿಯೋ ಸಖತ್ ವೈರಲ್ ಆಗಿದೆ. ಇದನ್ನು ಆರ್​ಸಿಬಿ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್​ನಲ್ಲಿ ಹಂಚಿಕೊಂಡಿದೆ.

ನಟ, ಆ್ಯಂಕರ್ ದಾನಿಶ್ ಸೇಠ್ ಅವರು ಪ್ರತಿ ಬಾರಿ ಆರ್​ಸಿಬಿ ಇನ್​ಸೈಡರ್ ಆಗಿ ಕಾಣಿಸಿಕೊಳ್ಳುತ್ತಾರೆ. ಈ ವೇಳೆ ಅವರು ಆಟಗಾರರ ಜೊತೆ ಮಾತುಕತೆ ನಡೆಸುತ್ತಾರೆ. ದಾನಿಶ್ ಅವರು ಈ ಬಾರಿ ಟಿಮ್ ಡೇವಿಡ್ ಜೊತೆ ಒಂದಷ್ಟು ಹರಟೆ ಹೊಡೆದಿದ್ದಾರೆ. ಅಷ್ಟೇ ಅಲ್ಲ, ಈ ವೇಳೆ ಒಂದು ಅಚ್ಚರಿಯ ಮಾಹಿತಿಯನ್ನು ಹೊರಹಾಕಿದ್ದಾರೆ.

ಟಿಮ್ ಡೇವಿಡ್ ಆಸ್ಟ್ರೇಲಿಯಾ ಆಟಗಾರ. ಆದರೆ, ಅವರು ಹುಟ್ಟಿದ್ದು ಸಿಂಗಾಪುರದಲ್ಲಿ. ಈ ವಿಚಾರವನ್ನು ಟಿಮ್ ರಿವೀಲ್ ಮಾಡಿದರು. ಆಗ, ದಾನಿಶ್ ಸೇಠ್ ಅವರು ‘ನಾನು ಮೊದಲ ಬಾರಿ ಸಿಂಗಾಪುರ ನೋಡಿದ್ದು ಕನ್ನಡದ ‘ಸಿಂಗಾಪೂರ್​ನಲ್ಲಿ ರಾಜ ಕುಳ್ಳ’ ಚಿತ್ರದಲ್ಲಿ. ಆ ಸಿನಿಮಾ ನೋಡಿದ್ದೀರಾ’ ಎಂದು ದಾನಿಶ್ ಕೇಳಿದ್ದಾರೆ. ಇದಕ್ಕೆ ಹೌದು ಎಂದಿದ್ದಾರೆ ಟಿಮ್.

ಇದನ್ನೂ ಓದಿ
Image
ರಣಬೀರ್-ರಣವೀರ್​ನ ತಂದೆ ತಾಯಿಗೆ ಹೋಲಿಸಿದ್ದ ದೀಪಿಕಾ ಪಡುಕೋಣೆ
Image
ಅಪಘಾತದ ಬಳಿಕ ಬದಲಾಯಿತು ನಾನಿ ಬದುಕು; ಅಂದು ಆಗಿದ್ದೇನು?
Image
ಖ್ಯಾತ ನಿರ್ಮಾಪಕನ ಜೊತೆ ಪೋಸ್ ಕೊಟ್ಟ ಶ್ರೀಲೀಲಾ; ಕೇಳಿಬಂತು ಹೊಸ ಗಾಸಿಪ್
Image
ಸಾರಾ ತೆಂಡೂಲ್ಕರ್​ಗೆ ಹೊಸ ಬಾಯ್​ಫ್ರೆಂಡ್; ಸ್ಟಾರ್ ನಟನ ಜೊತೆ ಡೇಟಿಂಗ್?

‘ಈ ಚಿತ್ರದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ನಟಿಸಿದ್ದಾರೆ’ ಎಂದು ಟಿಮ್ ವಿವರಿಸಿದರು. ಆ ಬಳಿಕ ಈ ಚಿತ್ರದ ‘ಕುಳ್ಳರ ರಾಜ ಬಾರೋ..’ ಹಾಡಿಗೆ ಟಿಮ್ ಧ್ವನಿಗೂಡಿಸಿದ್ದಾರೆ. ಟಿಮ್ ಡೇವಿಡ್ ಅವರು ನಿಜಕ್ಕೂ ಈ ಸಿನಿಮಾನ ನೋಡಿದ್ದು ಅನುಮಾನವೇ. ಫನ್​ಗಾಗಿ ಅವರು ಈ ರೀತಿ ಹೇಳಿರಬಹುದು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿಷ್ಣುವರ್ಧನ್ ಜೊತೆ ಅಭಿನಯಿಸಿದ್ದ ಈ ನಟಿಗೆ 54 ವರ್ಷ; ಇವರು ಮದುವೆಯನ್ನೇ ಆಗಿಲ್ಲವೇಕೆ?

1978ರಲ್ಲಿ ಬಂದ ‘ಸಿಂಗಾಪೂರ್​ನಲ್ಲಿ ರಾಜ ಕುಳ್ಳ’ ಸಿನಿಮಾನ ಸಿವಿ ರಾಜೇಂದ್ರ ಅವರು ನಿರ್ದೇಶನ ಮಾಡಿದರು. ದ್ವಾರಕೀಶ್ ಅವರೇ ಚಿತ್ರವನ್ನು ನಿರ್ಮಾಣ ಮಾಡಿದರು. ವಿಷ್ಣುವರ್ಧನ್, ದ್ವಾರಕೀಶ್, ಮಂಜುಳಾ ಈ ಚಿತ್ರದಲ್ಲಿ ನಟಿಸಿದ್ದರು. ಆಗಿ ಕಾಲದಲ್ಲಿ ಸಿಂಗಾಪುರಕ್ಕೆ ತೆರಳಿ ಶೂಟ್ ಮಾಡಿ ಸಿನಿಮಾ ಸದ್ದು ಮಾಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:01 pm, Mon, 5 May 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?