AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ

‘ಸಲಗ’ ಚಿತ್ರದ ಪ್ರಮೋಷನಲ್ ಹಾಡಿನ ಯಶಸ್ಸಿನ ಹಿನ್ನೆಲೆಯಲ್ಲಿ ಚಿತ್ರತಂಡವು ಸುದ್ದಿಗೋಷ್ಠಿಯನ್ನು ನಡೆಸಿತು. ಇದರಲ್ಲಿ ಗಾಯಕರಾದ ಗಿರಿಜಾ ಸಿದ್ದಿ, ಗೀತಾ ಸಿದ್ದಿ ಮತ್ತು ತಂಡದವರಿಗೆ ಗೌರವ ಸಲ್ಲಿಸಲಾಯಿತು. ಈ ವೇಳೆ ಗೀತಾ ಸಿದ್ದಿ ಭಾವುಕರಾದರು.

‘ಸಲಗ’ ಚಿತ್ರದ ಹಾಡಿಗೆ ಸಿಕ್ಕ ಯಶಸ್ಸಿನ ಹಿನ್ನೆಲೆ; ವೇದಿಕೆಯಲ್ಲೇ ಭಾವುಕರಾದ ಗೀತಾ ಸಿದ್ದಿ
ದುನಿಯಾ ವಿಜಯ್, ಗೀತಾ ಸಿದ್ದಿ
TV9 Web
| Edited By: |

Updated on:Aug 13, 2021 | 3:17 PM

Share

ಸದ್ಯ ಕನ್ನಡ ಚಿತ್ರರಂಗದಲ್ಲಿ ‘ಸಲಗ’ ಚಿತ್ರದ್ದೇ ಮಾತು. ಚಿತ್ರತಂಡ ಬಿಡುಗಡೆ ಮಾಡಿರುವ ಪ್ರಮೋಷನಲ್ ಸಾಂಗ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದ್ದು, ಚಿತ್ರತಂಡ ಖುಷಿಯಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಸುದ್ದಿಗೋಷ್ಠಿಯನ್ನು ನಡೆಸಿತ್ತು. ಹಾಡಿನ ಯಶಸ್ಸಿಗೆ ಪ್ರಮುಖ ಕಾರಣರಾದ ಸಿದ್ದಿ ಸಮುದಾಯದ ಗಾಯಕರನ್ನು ವೇದಿಕೆಗೆ ಕರೆದು ಸನ್ಮಾಯಿಸಲಾಯಿತು. ಈ ವೇಳೆ ಪ್ರಮುಖ ಗಾಯಕಿ, ರಂಗಭೂಮಿಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿರುವ ಗಿರಿಜಾ ಸಿದ್ದಿಯವರ ಸಹೋದರಿ ಗೀತಾ ಸಿದ್ದಿ ಅವರಿಗೆ ಡಾಕ್ಟರೇಟ್ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಸಿದ್ದಿ ಸಮುದಾಯ ಹಾಗೂ ಗಿರಿಜಾ ಸಿದ್ದಿಯವರ ಪರಿಶ್ರಮದ ಕುರಿತು ದುನಿಯಾ ವಿಜಯ್ ಮಾತನಾಡುತ್ತಿರುವಾಗ ಗೀತಾ ಸಿದ್ದಿ ಭಾವುಕರಾದರು. ಹಾಡಿನ ಯಶಸ್ಸಿನ ಕುರಿತು ಮಾತನಾಡಿದ ಗಿರಿಜಾ ಸಿದ್ದಿ, ಎಲ್ಲರೂ ಸೇರಿ ಬಹಳ ದೊಡ್ಡ ಭಾರವನ್ನು ನಮ್ಮ ಮೇಲೆ ಹೊರಿಸಿದ್ದೀರಿ. ನಮ್ಮ ಸಮುದಾಯದ ಹಾಡಿಗೆ ಸಿಗುತ್ತಿರುವ ಮನ್ನಣೆ ಖುಷಿ ತಂದಿದೆ ಎಂದು ಹೇಳಿದರು.

ಸಲಗ ಚಿತ್ರದ ಸುದ್ದಿಗೋಷ್ಠಿಯಲ್ಲಿ ಭಾವುಕರಾದ ಗೀತಾ ಸಿದ್ಧಿ:

ನಟ, ನಿರ್ದೇಶಕ ದುನಿಯಾ ವಿಜಯ್ ಮಾತನಾಡಿ, ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಅವರಿಗೆ ಹಾಗೂ ಸಂಗೀತ ನಿರ್ದೇಶಕ ಚರಣ್ ರಾಜ್ ಅವರಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ಈ ವೇಳೆ ಗಿರಿಜಾ ಸಿದ್ದಿಯವರ ಪತಿ ಚನ್ನೇಶವ ಅವರನ್ನು ಸ್ಮರಿಸಿದ ವಿಜಯ್, ಅವರ ಪರಿಶ್ರಮದಿಂದಾಗಿ ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಮಿಂಚುತ್ತಿರುವ ಸಿದ್ದಿ ಸಮುದಾಯದವರು ಮತ್ತಷ್ಟು ಮುನ್ನೆಲೆಗೆ ಬಂದಿದ್ಧಾರೆ ಎಂದರು.

ಕರ್ನಾಟಕದ ಅದರಲ್ಲೂ ಉತ್ತರ ಕನ್ನಡದಲ್ಲಿ ಸಿದ್ದಿ ಸಮುದಾಯದವರು ವಾಸವಿದ್ದಾರೆ. ಅವರು ತಮ್ಮದೇ ಆದ ಸಂಸ್ಕೃತಿ, ಭಾಷೆಯನ್ನು ಹೊಂದಿರುವುದಲ್ಲದೇ, ಅವರದೇ ಆದ ಹಾಡಿನ ಪದ್ಧತಿಯೂ ಇದೆ. ಅವರ ಹಾಡನ್ನು ಹಾಗೂ ಅವರ ಸಮುದಾಯದ ಹಾಡುಗಾರರನ್ನೇ ಬಳಸಿಕೊಂಡು ‘ಟಿಣಿಂಗ್ ಮಿಣಿಂಗ್ ಟಿಷ್ಯಾ’ ಹಾಡನ್ನು ರಚಿಸಲಾಗಿದ್ದು, ಈ ಹಾಡು ಸದ್ಯ ಸಿನಿಮಾ ಪ್ರೇಮಿಗಳ ನೆಚ್ಚಿನ ಗೀತೆಯಾಗಿದೆ.

ಇದನ್ನೂ ಓದಿ:

Girija Siddhi: ‘ಟಿಣಿಂಗ್ ಮಿಣಿಂಗ್ ಟಿಷ್ಯಾ’ ಮೂಲಕ ಕರುನಾಡ ಮನೆದ್ದಿರುವ ಗಿರಿಜಾ ಸಿದ್ದಿ ಮತ್ತು ತಂಡದವರ ವಿಶೇಷ ಸಂದರ್ಶನ

‘ಎದೆ ತುಂಬಿ ಹಾಡುವೆನು’ ವೇದಿಕೆ ಮೇಲೆ ಎಸ್​ಪಿಬಿ ಧ್ವನಿ; ಭಾವುಕರಾದ ಪುತ್ರ ಚರಣ್​

(Tininga Mininga Tishshya Singer Geetha Siddhi got emotional while Salaga Press meet)

Published On - 2:17 pm, Fri, 13 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ