AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ; ನಾಗಾಭರಣ ವಿರುದ್ಧ ದೂರು
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಸಿನಿಮಾ ಟೈಟಲ್ ವಿವಾದ;
ರಾಚಪ್ಪಾಜಿ ನಾಯ್ಕ್
| Edited By: |

Updated on: Jun 22, 2024 | 7:14 AM

Share

ಸ್ಯಾಂಡಲ್​ವುಡ್​ನಲ್ಲಿ ಸದ್ಯ ಎಲ್ಲೆಲ್ಲೂ ದರ್ಶನ್ (Darshan) ವಿಚಾರವೇ ಚರ್ಚೆ ಆಗುತ್ತಿದೆ. ಈ ಮಧ್ಯೆ ಟೈಟಲ್​ಗಾಗಿ ಕಿತ್ತಾಟ ಶುರುವಾಗಿದೆ. ನಿರ್ದೇಶಕ‌ ನಾಗಾಭರಣ ವಿರುದ್ಧ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಲಾಗಿದೆ. ನಿರ್ಮಾಪಕ ಕಿರಣ್ ತೋಟಂಬೈಲೆ ಅವರು ನಾಗಾಭರಣ ವಿರುದ್ಧ ದೂರು ನೀಡಿದವರು. ಇದಕ್ಕೆ ಕಾರಣವಾಗಿದ್ದು ‘ನಾಡಪ್ರಭು ಕೆಂಪೇಗೌಡ’ ಟೈಟಲ್. ಅಷ್ಟಕ್ಕೂ ಏನಿದು ಕಿತ್ತಾಟ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ

ಕಿರಣ್ ಅವರು ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಹೆಸರಿನ ಸಿನಿಮಾ ಘೋಷಣೆ ಮಾಡಿ ಕೆಲವು ತಿಂಗಳು ಕಳೆದಿದೆ. ನಿರ್ದೇಶಕ ಬಾಬು ಅವವರು ಈ ಚಿತ್ರವನ್ನು ನಿರ್ದೇನ ಮಾಡುತ್ತಿದ್ದಾರೆ. ಇತ್ತ, ನಾಗಾಭರಣ ಅವರು ‘ನಾಡಪ್ರಭು ಕೆಂಪೇಗೌಡ’ ಟೈಟಲ್ ರಿಜಿಸ್ಟರ್ ಮಾಡಿಸಿ, ಸಿನಿಮಾ ಘೋಷಿಸಿದ್ದಾರೆ. ಇದಕ್ಕೆ ಡಾಲಿ ಧನಂಜಯ್ ಹೀರೋ.

ನಾಡಪ್ರಭು ಕೆಂಪೇಗೌಡ ಕಾಪಿರೈಟ್ಸ್ ನಮ್ಮದು‌ ಎಂದು ನಾಗಾಭರಣ ಹೇಳಿಕೊಂಡಿದ್ದಾರೆ. ಜೊತೆಗೆ ಕಿರಣ್ ಅವರಿಗೆ ನಿರ್ಬಂಧಕ ನೋಟಿಸ್ ಕಳುಹಿಸಿದ್ದಾರೆ. ಜೂನ್ 27 ಕ್ಕೆ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಿತ್ರದ ಮುಹೂರ್ತ ಸಮಾರಂಭ ಇಟ್ಟುಕೊಳ್ಳಲಾಗಿತ್ತು. ಈಗ ಈ ಎಲ್ಲಾ ಬೆಳವಣಿಗೆಯಿಂದ ಮುಹೂರ್ತ ಮುಂದಕ್ಕೆ ಹೋಗಿದೆ.

ಇದನ್ನೂ ಓದಿ: ಕೆಂಪೇಗೌಡರ ಬಗ್ಗೆ ಮಾಡ್ತಿರೋ ಸಿನಿಮಾಗೆ ತಡೆ ತಂದ ನಾಗಾಭರಣ

ಸದ್ಯ ಇರುವ ಸ್ಟೇ ವೆಕೇಟ್ ಮಾಡಲು ಕೋರ್ಟ್​ನಲ್ಲಿ ಕಿರಣ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ‘ನಾಡಪ್ರಭು ಅನ್ನುವುದು ಸಾರ್ವತ್ರಿಕ ಹೆಸರು. ಅದರ ಮೇಲೆ ಸ್ಟೇ ತರಲು ಸಾಧ್ಯವಿಲ್ಲ. ಅವರು ಕಾಪಿರೈಟ್ಸ್ ರಿಜಿಸ್ಟರ್ ಮಾಡಿಸಿಯೇ ಇಲ್ಲ. ಕೋರ್ಟ್​ಗೆ ಸುಳ್ಳು ದಾಖಲೆ ನೀಡಿದ್ದಾರೆ’ ಎಂದಿದ್ದಾರೆ ಕಿರಣ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ