AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ

ಇಂದು ಸಂಜೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ ರಾಜಕುಮಾರ್​ಗೆ ನಮನ ಸಲ್ಲಿಸಲು ಆಯೋಜಿಸಲಾಗಿದೆ.

Puneeth Rajkumar: ಇಂದು ಸಂಜೆ 6 ಗಂಟೆಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಕಾರ್ಯಕ್ರಮ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 07, 2021 | 9:10 AM

Share

ಇಂದು ಸಂಜೆ (ನವೆಂಬರ್ 6) 6 ಗಂಟೆಗೆ ರಾಜ್ಯದ ಚಿತ್ರಮಂದಿರಗಳಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ. ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಒಟ್ಟು 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನ ಸಲ್ಲಿಸಲಾಗುತ್ತಿದ್ದು, ಕಾರ್ಯಕ್ರಮದ ರೂಪುರೇಶೆಯನ್ನೂ ಸಿದ್ಧಪಡಿಸಲಾಗಿದೆ. ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದಾರೆ. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಪುಷ್ಪಾಂಜಲಿ ಹಾಗೂ ಥಿಯೇಟರ್‌ಗಳಲ್ಲಿ ಕ್ಯಾಂಡಲ್ ಹಚ್ಚಿ ದೀಪಾಂಜಲಿ ನಡೆಸಲಾಗುತ್ತದೆ. ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ಥಿಯೇಟರ್ ಸಿಬ್ಬಂದಿ ಹಾಗೂ ಅಭಿಮಾನಿಗಳಿಂದ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತದೆ. 

ಮೈಸೂರಿನಲ್ಲಿ ಭರದಿಂದ ತಯಾರಿ: ಪುನೀತ್ ರಾಜಕುಮಾರ್​ಗೆ ಶ್ರದ್ಧಾಂಜಲಿ ಸಲ್ಲಿಸಲು ಮೈಸೂರಿನಲ್ಲಿ ಭರದಿಂದ ಸಿದ್ಧತೆ ಸಾಗಿದೆ. ಗೀತನಮನ, ದೀಪ ನಮನಕ್ಕೆ ಸಿದ್ದತೆ ಮಾಡಲಾಗುತ್ತಿದ್ದು, ಮೈಸೂರಿನ 8 ಸಿನಿಮಾ ಮಂದಿರ, ಮಲ್ಟಿಪ್ಲೆಕ್ಸ್‌ಗಳಲ್ಲೂ ಶ್ರದ್ದಾಂಜಲಿ ನಡೆಸಲಾಗುತ್ತದೆ. ಶ್ರದ್ದಾಂಜಲಿಗಾಗಿ ಪುನೀತ್ ಕಟೌಟ್ ಬ್ಯಾನರ್ ಸಿದ್ಧತೆ ಮಾಡಲಾಗಿದ್ದು, ಏಕ ಕಾಲಕ್ಕೆ ಎಲ್ಲಾ ಕಡೆ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ. ಚಿತ್ರಮಂದಿರದ ಮಾಲೀಕರು, ಸಿಬ್ಬಂದಿ, ಪ್ರೇಕ್ಷಕರು, ಅಭಿಮಾನಿಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:

ಅರಳಿಮರ ಎಲೆಯ ಮೇಲೆ ಪುನೀತ್ ರಾಜಕುಮಾರ್ ಚಿತ್ರ ಬರೆದು ತನ್ನ ಪ್ರೀತಿ ಮತ್ತು ಅಭಿಮಾನ ವ್ಯಕ್ತಪಡಿಸಿದ ಕಲಾವಿದ

Marakkar: ಮೋಹನ್​ಲಾಲ್ ‘ಮರಕ್ಕರ್​’ ಚಿತ್ರದ ಕ್ರಾಂತಿಕಾರಕ ನಿರ್ಧಾರ; ‘ಆರ್​ಆರ್​ಆರ್​’, ‘ಕೆಜಿಎಫ್​ 2’ ಭವಿಷ್ಯವೇನು?

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು