AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

ಬಾಲಿವುಡ್ ನಟಿ ಕಂಗನಾ ರನೌತ್ ತಲೈವಿ ಪಾತ್ರದಲ್ಲಿ ಅಭಿನಯಿಸಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಇದ್ರ ಬೆನ್ನಲ್ಲೇ ಜಯಲಲಿತಾ ಆಪ್ತೆ ಶಶಿಕಲಾ ಪಾತ್ರವನ್ನ ಯಾರು ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿತ್ತು ಆದ್ರೀಗ ಆಪಾತ್ರಕ್ಕೆ ನಟಿಯೊಬ್ಬರು ಆಯ್ಕೆಯಾಗಿದ್ದಾರೆ. ತಮಿಳು ನಾಡಿನ ಅಮ್ಮ. ದ್ರಾವಿಡ ರಾಜ್ಯ ರಾಜಕಾರಣದ ಫೈರ್​ಬ್ರಾಂಡ್. ಎಐಎಡಿಎಂಕೆಯ ಧೀಮಂತ ನಾಯಕಿ. ಚಿತ್ರರಂಗದಲ್ಲೂ ಮೋಡಿ ಮಾಡಿದ ನಟಿ. ಹೌದು, ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾರ ಜೀವನಗಾಥೆ ತಲೈವಿ ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರ್ತಿದೆ. ಜಯಲಲಿತಾ ಪಾತ್ರದಲ್ಲಿ ನಟಿ […]

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!
ಸಾಧು ಶ್ರೀನಾಥ್​
|

Updated on:Feb 28, 2020 | 2:57 PM

Share

ಬಾಲಿವುಡ್ ನಟಿ ಕಂಗನಾ ರನೌತ್ ತಲೈವಿ ಪಾತ್ರದಲ್ಲಿ ಅಭಿನಯಿಸಿ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ. ಇದ್ರ ಬೆನ್ನಲ್ಲೇ ಜಯಲಲಿತಾ ಆಪ್ತೆ ಶಶಿಕಲಾ ಪಾತ್ರವನ್ನ ಯಾರು ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ಹೆಚ್ಚಾಗಿತ್ತು ಆದ್ರೀಗ ಆಪಾತ್ರಕ್ಕೆ ನಟಿಯೊಬ್ಬರು ಆಯ್ಕೆಯಾಗಿದ್ದಾರೆ.

ತಮಿಳು ನಾಡಿನ ಅಮ್ಮ. ದ್ರಾವಿಡ ರಾಜ್ಯ ರಾಜಕಾರಣದ ಫೈರ್​ಬ್ರಾಂಡ್. ಎಐಎಡಿಎಂಕೆಯ ಧೀಮಂತ ನಾಯಕಿ. ಚಿತ್ರರಂಗದಲ್ಲೂ ಮೋಡಿ ಮಾಡಿದ ನಟಿ. ಹೌದು, ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾರ ಜೀವನಗಾಥೆ ತಲೈವಿ ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರ್ತಿದೆ. ಜಯಲಲಿತಾ ಪಾತ್ರದಲ್ಲಿ ನಟಿ ಕಂಗನಾ ರನೌತ್ ಅಭಿನಯಿಸ್ತಿದ್ದು, ಈಗಾಗಲೇ ಚಿತ್ರದ ಫಸ್ಟ್ ಲುಕ್ ಚಿತ್ರದ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಮೂಡಿಸಿದೆ. ಪೋಸ್ಟರ್​ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದ್ರೂ, ಕೌತುಕ ಹೆಚ್ಚಿಸಿದೆ.

ಜಯಲಲಿತಾ ಪಾತ್ರಕ್ಕೆ ಕಂಗನಾ ಏನೋ ಸೂಟ್ ಆದ್ರು. ಆದ್ರೆ, ಜಯಲಲಿತಾ ಆಪ್ತೆ ಶಶಿಕಲಾ ಪಾತ್ರದಲ್ಲಿ ಯಾರು ಕಾಣಿಸಿಕೊಳ್ತಿದ್ದಾರೆ ಅನ್ನೋದೇ ಯಕ್ಷ ಪ್ರಶ್ನೆಯಾಗಿತ್ತು. ಆದ್ರೆ, ಈ ಪಾತ್ರದಲ್ಲಿ ಪ್ರಿಯಾಮಣಿ ನಟಿಸ್ತಾರೆ ಅನ್ನೋ ಪುಕಾರು ಎದ್ದಿತ್ತು. ಆದ್ರೆ, ಕಾರಣಾಂತರಗಳಿಂದ ಅವರು ನಟಿಸಲ್ಲ ಅನ್ನೋ ಸುದ್ದಿ ಈಗ ರಿವೀಲ್ ಆಗಿದೆ.

ಪ್ರಿಯಾಮಣಿ ಒಲ್ಲೆ ಎಂದ ಮೇಲೆ ಈ ಪಾತ್ರಕ್ಕೆ ಮತ್ತಿನ್ಯಾರು ಬರ್ತಾರೆ ಅನ್ನೋದು ಕೂಡ ಸಾಕಷ್ಟು ಚರ್ಚೆಗೀಡಾಗಿತ್ತು. ಕ್ಯೂರಿಯಾಸಿಟಿಗೀಗ ತೆರೆ ಬಿದ್ದಿದೆ. ಅಂದಹಾಗೆ, ಕನ್ನಡದ ಜೋಶ್ ಸೇರಿದಂತೆ ಟಾಲಿವುಡ್​ ಸಿನಿಮಾಗಳಲ್ಲಿ ನಟಿಸಿರೋ ನಟಿ ಪೂರ್ಣ ಈಗ ಶಶಿಕಲಾ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ.

ಸದ್ಯ ಒಂದ್ಕಡೆ ಕಂಗನಾ ಜಯಲಲಿತಾ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದು, ಶಶಿಕಲಾ ಪಾತ್ರಕ್ಕೆ ಪೂರ್ಣ ಹೇಗೆ ನ್ಯಾಯ ಒದಗಿಸಲಿದ್ದಾರೆ ಅನ್ನೋದೂ ಕುತೂಹಲ ಹೆಚ್ಚಿಸಿದೆ. ಇನ್ನು ಜಯಲಲಿತಾ ಹಾಗು ಶಶಿಕಲಾ ನಡುವಿನ ಆಪ್ತತೆಯನ್ನ ಬೆಳ್ಳಿಪರದೆ ಮೇಲೆ ಹೇಗೆ ಅನಾವರಣ ಮಾಡಲಾಗುತ್ತೆ ನೋಡಬೇಕಿದೆ.

Published On - 2:43 pm, Fri, 28 February 20

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ