AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಬರಲಿದ್ದಾರೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

ತೆಲುಗಿನ ಕೆಲವು ನಟ-ನಟಿಯರಿಗೆ ವಿಶೇಷ ಪೂಜೆ ಮಾಡಿಸಿ ವೃತ್ತಿಯಲ್ಲಿ ಏಳಿಗೆ ದೊರಕಿಸಿಕೊಟ್ಟಿದ್ದಾರೆ ಎನ್ನಲಾಗುವ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಈ ಬಾರಿ ತೆಲುಗು ಬಿಗ್​ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಿಗ್​ಬಾಸ್ ಮನೆಗೆ ಬರಲಿದ್ದಾರೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ
ಮಂಜುನಾಥ ಸಿ.
|

Updated on:Jul 05, 2024 | 10:59 AM

Share

ಸಿನಿಮಾ ನಟರು, ರಾಜಕಾರಣಿಗಳು ಜ್ಯೋತಿಷ್ಯವನ್ನು ಅತಿಯಾಗಿ ನಂಬುವುದು ಗುಟ್ಟೇನಲ್ಲ. ಕೆಲವು ಸಿನಿಮಾ ನಟರಂತೂ ಪ್ರತಿ ಸಿನಿಮಾ ಒಪ್ಪಿಕೊಳ್ಳುವ ಮುಂಚೆ ಜ್ಯೋತಿಷಿಗಳ ಸಲಹೆ ಪಡೆಯುತ್ತಾರೆ. ನಟಿಯರು ಸಹ ಚಿತ್ರರಂಗದಲ್ಲಿ ಯಶಸ್ಸು ಸಿಗಲೆಂದು ಜ್ಯೋತಿಷಿಗಳ ಬಳಿ ವಿಶೇಷ ಪೂಜೆ ಮಾಡಿಸುತ್ತಾರೆ. ಅಂಥಹಾ ಸೆಲೆಬ್ರಿಟಿ ಜ್ಯೋತಿಷಿಗಳಲ್ಲಿ ವೇಣುಸ್ವಾಮಿ ಸಹ ಒಬ್ಬರು. ಡಿಕೆ ಶಿವಕುಮಾರ್​ಗೂ ಆಪ್ತವಾಗಿರುವ ವೇಣುಸ್ವಾಮಿ, ತೆಲುಗು ಚಿತ್ರರಂಗದ ಸೆಲೆಬ್ರಿಟಿ ಜ್ಯೋತಿಷಿ. ಇದೀಗ ಇವರು ತೆಲುಗು ಬಿಗ್​ಬಾಸ್​ಗೆ ಆಗಮಿಸಲಿದ್ದಾರೆ.

ರಶ್ಮಿಕಾ ಸ್ಟಾರ್ ಆಗುವ ಮುನ್ನ ಪೂಜೆ ಮಾಡಿದ್ದ ಹಾಗೂ ರಕ್ಷಿತ್ ಶೆಟ್ಟಿ ಜೊತೆಗೆ ಮದುವೆ ಬೇಡವೆಂದು ಸಲಹೆ ನೀಡಿದ್ದ ವೇಣು ಸ್ವಾಮಿ ಆ ಬಳಕ ಹಲವು ನಟಿಯರಿಗೆ ವಿಶೇಷ ಪೂಜೆ ಮಾಡಿಸಿ ಅವರ ವೃತ್ತಿ ಜೀವನದಲ್ಲಿ ಏಳ್ಗೆ ಬರುವಂತೆ ಮಾಡಿದ್ದಾರೆ. ಮಾತ್ರವಲ್ಲದೆ ಸಾಮಾಜಿಕ ಜಾಲತಾಣದಲ್ಲಿಯೂ ಸಾಕಷ್ಟು ಜನಪ್ರಿಯತೆ ಹೊಂದಿರುವ ವೇಣುಸ್ವಾಮಿ ಪ್ರಭಾಸ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಜ್ಯೋತಿಷ್ಯ ವಿಶ್ಲೇಷಣೆ ಮಾಡಿ ಜನಪ್ರಿಯರಾಗಿದ್ದಾರೆ.

ಇದನ್ನೂ ಓದಿ: ಸುಳ್ಳಾಯ್ತು ಭವಿಷ್ಯ, ಕ್ಷಮೆ ಕೇಳಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

ಮುಂದಿನ ತಿಂಗಳು ಅಂದರೆ ಆಗಸ್ಟ್​ನಲ್ಲಿ ತೆಲುಗು ಬಿಗ್​ಬಾಸ್ ಸೀಸನ್ 8 ಪ್ರಾರಂಭವಾಗಲಿದೆ. ಕಳೆದ ಸೀಸನ್​ ಭಾರಿ ಯಶಸ್ವಿ ಆಗಿರುವ ಕಾರಣ ಈ ಬಾರಿ ತುಸು ಮುಂಚಿತವಾಗಿಯೇ ಬಿಗ್​ಬಾಸ್ ಹೊಸ ಸೀಸನ್ ಪ್ರಾರಂಭ ಮಾಡಲಾಗುತ್ತಿದೆ. ಈ ಶೋನಲ್ಲಿ ಈ ಬಾರಿ ಸ್ಪರ್ಧಿಯಾಗಿ ವೇಣು ಸ್ವಾಮಿ ಸಹ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಕನ್ನಡ ಬಿಗ್​ಬಾಸ್ ಶೋನಲ್ಲಿ ಗುರೂಜಿಗಳು, ಜ್ಯೋತಿಷಿಗಳನ್ನು ಕರೆತರುವುದು ಸಾಮಾನ್ಯ ಎಂಬಂತಾಗಿದೆ. ಈಗ ತೆಲುಗಿನಲ್ಲೂ ಜ್ಯೋತಿಷಿಯನ್ನು ಶೋಗೆ ಕರೆತರಲಾಗುತ್ತಿದೆ.

ಬಿಗ್​ಬಾಸ್ ತೆಲುಗಿನಲ್ಲಿ ಈ ಬಾರಿ ಸಿನಿಮಾ, ಟಿವಿ ಅವರಿಗಿಂತಲೂ ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯರಾದವರ ಸಂಖ್ಯೆ ಹೆಚ್ಚಿರಲಿದೆ ಎನ್ನಲಾಗುತ್ತಿದೆ. ರಸ್ತೆ ಬದಿ ಹೋಟೆಲ್ ಇಟ್ಟು ಭಾರಿ ದುಬಾರಿ ಬೆಲೆಗೆ ಆಹಾರ ಮಾರುವ ಕುಮಾರಿ ಆಂಟಿ, ಜೋಡಿಯಾಗಿ ದೇಶ-ವಿದೇಶ ಸುತ್ತಿ ಬ್ಲಾಗ್ ಮಾಡುವ ಜೋಡಿ, ತಂದೆಯಿಂದಲೇ ಪತಿಯನ್ನು ಕಳೆದುಕೊಂಡ ಅಮೃತಾ ಪ್ರಣಯ್ ಇನ್ನೂ ಹಲವರು ಈ ಬಾರಿ ಬಿಗ್​ಬಾಸ್ ಶೋಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Fri, 5 July 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ