‘ಟಾಮಿ’ ಸುದೀಪ್ ಶಿಷ್ಯನ ಹೊಸ ಸಾಹಸ, ನಟನೆ ಜೊತೆ ನಿರ್ದೇಶನ

Kichcha Sudeep: ಕಿಚ್ಚ ಸುದೀಪ್​ರ ಹಲವು ಸಿನಿಮಾಗಳಿಗೆ ಕೆಲಸ ಮಾಡಿರುವ ಕಿಚ್ಚ ಸುದೀಪ್​ರನ್ನು ಗುರುವೆಂದು ಸ್ವೀಕರಿಸಿರುವ ಅನುಭವಿ ಸಹಾಯಕ ನಿರ್ದೇಶಕ ಆಶು, ತಮ್ಮ ಮೊದಲ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಸಿನಿಮಾಕ್ಕೆ ‘ಟಾಮಿ’ ಎಂದು ಹೆಸರಿಟ್ಟಿದ್ದಾರೆ.

‘ಟಾಮಿ’ ಸುದೀಪ್ ಶಿಷ್ಯನ ಹೊಸ ಸಾಹಸ, ನಟನೆ ಜೊತೆ ನಿರ್ದೇಶನ
Follow us
|

Updated on: Sep 08, 2024 | 7:25 AM

ನಾಯಕರಾಗಿ ನಟಿಸಿ ನಿರ್ದೇಶನವನ್ನೂ ಮಾಡಿ ಗೆದ್ದವರ ಸಂಖ್ಯೆ ವಿರಳ. ಅದರಲ್ಲೂ ತಮ್ಮ ಮೊದಲ ಸಿನಿಮಾದಲ್ಲೆ ತೆರೆ ಮುಂದೆ ತೆರೆ ಹಿಂದೆ ಕೆಲಸ ಮಾಡುವುದು ಸುಲಭದ ಮಾತಲ್ಲ. ಇದೀಗ ಕಿಚ್ಚ ಸುದೀಪ್ ಶಿಷ್ಯರೊಬ್ಬರು ಇಂಥಹಾ ಒಂದು ಸಾಹಸಕ್ಕೆ ಕೈ ಹಾಕಿದ್ದಾರೆ. ನಟನೆ, ನಿರ್ದೇಶನ ಎರಡೂ ಮಾಡಿ ಗೆದ್ದಿರುವ ಸುದೀಪ್ ಅವರನ್ನೇ ಆದರ್ಶವಾಗಿಟ್ಟುಕೊಂಡು ಸಾಹಕ್ಕೆ ಇಳಿದಿದ್ದಾರೆ. ಅಂದಹಾಗೆ ಈ ಸಿನಿಮಾದ ಹೆಸರು ಪೋಸ್ಟರ್ ನೋಡಿದರೆ ‘ಚಾರ್ಲಿ 777’, ‘ನಾನು ಮತ್ತು ಗುಂಡ’ ರೀತಿ ಇದೂ ಸಹ ನಾಯಿಯ ಕುರಿತಾದ ಕತೆ ಹೊಂದಿರುವ ಸಿನಿಮಾ ಆಗಿರಬಹುದೆಂಬ ದಟ್ಟ ಅನುಮಾನ ಮೂಡಿಸುತ್ತಿದೆ.

ನಿನ್ನೆ ನಡೆದ ಗೌರಿ ಗಣೇಶ ಹಬ್ಬಕ್ಕೆ ಸಾಕಷ್ಟು ಹೊಸ ಸಿನಿಮಾಗಳು ಘೋಷಣೆ ಆಗಿವೆ. ಈ ನಡುವೆ ಹೊಸಬರ ಹೊಸ ಸಿನಿಮಾ ಗಮನ ಸೆಳೆಯುತ್ತಿದೆ. ಗಣೇಶ ಹಬ್ಬದ ಪ್ರಯುಕ್ತ ಹೊಸ ಸಿನಿಮಾ ತಂಡ ‘ಟಾಮಿ’ ಎನ್ನುವ ಚಿತ್ರವನ್ನು ಅನೌನ್ಸ್ ಮಾಡಿದ್ದಾರೆ. ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡುತ್ತಿರುವ ಸಿನಿಮಾ ಎನ್ನುವುದು ಇದರ ವಿಶೇಷ. ಸಿನಿಮಾವನ್ನು ಆಶು ನಿರ್ದೇಶನ ಮಾಡುವ ಜೊತೆಗೆ ನಾಯಕನಾಗಿಯೂ ನಟಿಸುತ್ತಿದ್ದಾರೆ. ಸಿನಿಮಾದ ಪೋಸ್ಟರ್ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ:ಕಿಚ್ಚ ಸುದೀಪ್ ಫಿಟ್​ನೆಸ್ ಸೀಕ್ರೆಟ್‌ ಇಲ್ಲಿದೆ

‘ಟಾಮಿ’ ಶ್ವಾನ ಪ್ರಿಯರಿಗೆ ಈ ಹೆಸರು ಮತ್ತಷ್ಟು ಆಪ್ತ. ನಿರ್ದೇಶಕ ನಾಯಕ ಆಶು ಅವರಿಗೆ ‘ಟಾಮಿ’ ಮೊದಲ ಸಿನಿಮಾ ಹೌದು, ಆದರೆ ಚಿತ್ರರಂಗವೇನು ಹೊಸದೇನಲ್ಲ. ಕಳೆದ ಏಳೆಂಟು ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಅನೇಕ ಸಿನಿಮಾಗಳಿಗೆ ಅದರಲ್ಲೂ ಕಿಚ್ಚ ಸುದೀಪ್ ನಟನೆಯ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ‘ಮುಕುಂದ ಮುರಾರಿ’, ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುದೀಪ್ ನಟನೆಯ ‘ಅಂಬಿ ನಿಂಗೆ ವಯಸ್ಸಾಯ್ತೊ’, ‘ಕೋಟಿಗೊಬ್ಬ 3’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ ಆಶು.

ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಾಯಕ ಆಶು, ಜೊತೆಯಲ್ಲಿ ನಾಯಿ ಹಾಗೂ ಆರ್ ಎಕ್ಸ್ ಬೈಕ್ ನೋಡಬಹುದು. ಪೋಸ್ಟರ್ ನೋಡುತ್ತಿದ್ದರೆ ನಾಯಕ ನಾಯಿ ಪ್ರೇಮಿ ಜೊತೆಗೆ ಆರ್ ಎಕ್ಸ್ ಬೈಕ್ ನ ಲವರ್ ಕೂಡ ಆಗಿರುತ್ತಾನೆ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ನಾಯಕನ ರಗಡ್​ ಲುಕ್ ನೋಡಿದರೆ ಇದು ಆಕ್ಷನ್ ಸಿನಿಮಾ ಇರಬಹುದೆಂಬ ಅನುಮಾನವೂ ಕಾಣುತ್ತಿದೆ. ‘ಟಾಮಿ’ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಎಲಿಪಾಸ್ ಇಂಡಿಯಾ ಎಂಟರ್ಟೈನ್ಮೆಂಟ್ ಬ್ಯಾನರ್ ಅಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರಕ್ಕೆ ಸಚಿನ್ ಶ್ಯಾಮ್ ಸುಂದರ್ ಹಾಗೂ ಅನೇಕ ಸ್ನೇಹಿತರು ಸೇರಿ ಬಂಡವಾಳ ಹೂಡುತ್ತಿದ್ದಾರೆ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ಪ್ರದ್ಯುತನ್ ‘ಟಾಮಿ’ ಸಿನಿಮಾಗೂ ಸಂಗೀತ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು