Toofan Lyrical Video: ಬಂದೇ ಬಿಡ್ತು ತೂಫಾನ್​; ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​

KGF Chapter 2 Song: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ‘ತೂಫಾನ್​..’ ಹಾಡು ಬಿಡುಗಡೆ ಆಗಿದೆ. ಲಿರಿಕಲ್​ ಸಾಂಗ್​ ನೋಡಿ ಯಶ್​ ಫ್ಯಾನ್ಸ್​ ಖುಷಿಯಾಗಿದ್ದಾರೆ.

Toofan Lyrical Video: ಬಂದೇ ಬಿಡ್ತು ತೂಫಾನ್​; ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಮೊದಲ ಲಿರಿಕಲ್​ ವಿಡಿಯೋ ರಿಲೀಸ್​
ಯಶ್​
Follow us
| Updated By: ಮದನ್​ ಕುಮಾರ್​

Updated on:Mar 21, 2022 | 11:34 AM

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದಿಂದ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗುತ್ತಿದೆ. ಈವರೆಗೂ ಕೇವಲ ಒಂದಷ್ಟು ಪೋಸ್ಟರ್​ ಮತ್ತು ಒಂದು ಟೀಸರ್​ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಈ ಸಿನಿಮಾ ಈಗ ಮೊದಲ ಸಾಂಗ್​ ಬಿಡುಗಡೆ ಮಾಡಿದೆ. ‘ತೂಫಾನ್​..’  ಲಿರಿಕಲ್​ ವಿಡಿಯೋ (Toofan Lyrical Video) ರಿಲೀಸ್​ ಆಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಬಗ್ಗೆ ಎರಡು ದಿನ ಮುನ್ನವೇ ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ತಿಳಿಸಲಾಗಿತ್ತು. ಆಗಲೇ ಜನರ ನಿರೀಕ್ಷೆ ಮುಗಿಲುಮುಟ್ಟಿತ್ತು. ಆ ನಿರೀಕ್ಷೆಗೆ ತಕ್ಕಂತೆಯೇ ‘ಕೆಜಿಎಫ್​ 2’ ಚಿತ್ರದಿಂದ ‘ತೂಫಾನ್​..’ ಹಾಡು ಮೂಡಿಬಂದಿದೆ. ಸಾಂಗ್​ ನೋಡಿದ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ಹಾಡಿಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಯಶ್​ (Yash) ಅವರನ್ನು ಕಂಡು ಫ್ಯಾನ್ಸ್​ ಖುಷಿ ಆಗಿದ್ದಾರೆ. ಪ್ರಶಾಂತ್​ ನೀಲ್​ ನಿರ್ದೇಶನದ ಈ ಸಿನಿಮಾ ಬಗ್ಗೆ ಹೈಪ್​ ಸೃಷ್ಟಿ ಆಗಲು ಹಲವು ಕಾರಣಗಳಿವೆ. ‘ತೂಫಾನ್​..’ ಲಿರಿಕಲ್​ ಸಾಂಗ್​ ಬಿಡುಗಡೆ ಆದ ಬಳಿಕ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಬಗ್ಗೆ ಇನ್ನಷ್ಟು ಟಾಕ್​ ಹೆಚ್ಚಾಗಿದೆ.

ಇಂದು (ಮಾ.21) ಬೆಳಗ್ಗೆ 11.07ಕ್ಕೆ ‘ತೂಫಾನ್​’ ಲಿರಿಕಲ್​ ವಿಡಿಯೋ ಬಿಡುಗಡೆ ಆಯಿತು. ರಿಲೀಸ್​ ಆದ ಕೆಲವೇ ನಿಮಿಷಗಳಲ್ಲಿ ಕನ್ನಡ ವರ್ಷನ್​ ಹಾಡು ಲಕ್ಷಾಂತರ ವೀವ್ಸ್​ ಪಡೆದುಕೊಂಡಿದೆ. ಆ ಮೂಲಕ ಚಿತ್ರದ ಬಗ್ಗೆ ಜನರಿಗೆ ಇರುವ ಕ್ರೇಜ್​ ಎಂಥದ್ದು ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ. ಕನ್ನಡ ಮಾತ್ರವಲ್ಲದೇ, ಹಿಂದಿ, ಮಲಯಾಳಂ, ತಮಿಳು ಮತ್ತು ತೆಲುಗಿನಲ್ಲಿಯೂ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ಬಿಡುಗಡೆ ಆಗಲಿದೆ. ಆ ಎಲ್ಲ ಭಾಷೆಗಳಲ್ಲೂ ‘ತೂಫಾನ್​’ ಹಾಡಿನ ಲಿರಿಕಲ್​ ವಿಡಿಯೋ ರಿಲೀಸ್​ ಮಾಡಲಾಗಿದೆ. ಎಲ್ಲ ಭಾಷೆಯಲ್ಲೂ ಜನರಿಂದ ಸಖತ್​ ರಿಯಾಕ್ಷನ್​ ಸಿಗುತ್ತಿದೆ.

‘ಕೆಜಿಎಫ್​: ಚಾಪ್ಟರ್​ 1’ ಸಿನಿಮಾ ಗೆಲ್ಲಲು ಹಾಡುಗಳು ಕೂಡ ಪ್ರಮುಖ ಕಾರಣ ಆಗಿದ್ದವು. ಸಖತ್​ ಮಾಸ್​ ಆದಂತಹ ಹಾಡುಗಳನ್ನು ರವಿ ಬಸ್ರೂರು ನೀಡಿದ್ದರು. ಈಗ ‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ಸಾಂಗ್ಸ್​ ಮೇಲೆ ಅದೇ ಮಟ್ಟದ ನಿರೀಕ್ಷೆ ಇದೆ. ಸದ್ಯ ಮೊದಲ ಹಾಡು ಬಿಡುಗಡೆ ಆಗಿದ್ದು, ಅದಕ್ಕೆ ರವಿ ಬಸ್ರೂರು ಅವರೇ ಸಾಹಿತ್ಯ ಬರೆದಿದ್ದಾರೆ. ಇನ್ನುಳಿದ ಹಾಡುಗಳಿಗಾಗಿ ಫ್ಯಾನ್ಸ್​ ಕಾಯುವಂತಾಗಿದೆ. ಸದ್ಯ ರಿಲೀಸ್​ ಆಗಿರಯವ ‘ತೂಫಾನ್​’ ಹಾಡಿನಲ್ಲಿ ಕೆಲವು ಡೈಲಾಗ್​ಗಳು ಕೂಡ ಹೈಲೈಟ್​ ಆಗಿವೆ. ಅವುಗಳನ್ನು ಕೇಳಿ ಸಿನಿಪ್ರಿಯರು ಎಂಜಾಯ್​ ಮಾಡುತ್ತಿದ್ದಾರೆ.

ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಲಿದೆ. ಈಗಾಗಲೇ ವಿದೇಶದ ಥಿಯೇಟರ್​ಗಳಲ್ಲಿ ನಿಲ್ಲಿಸಲು ಸ್ಟ್ಯಾಂಡಿಗಳನ್ನು ಸಿದ್ಧಪಡಿಸಲಾಗಿದೆ. ಸಂಜಯ್​ ದತ್​, ರವೀನಾ ಟಂಡನ್​ ನಟಿಸಿರುವುದರಿಂದ ಬಾಲಿವುಡ್​ ವಲಯದಲ್ಲೂ ‘ಕೆಜಿಎಫ್​ 2’ ಚಿತ್ರಕ್ಕೆ ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಯಶ್​ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಕಾಶ್​ ರಾಜ್​, ಮಾಳವಿಕಾ ಅವಿನಾಶ್​, ರಾವ್​ ರಮೇಶ್​ ಮುಂತಾದ ಅನುಭವಿ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ಇದನ್ನೂ ಓದಿ:

ಅಕ್ಷಯ್​​ ಕುಮಾರ್ ನಟನೆಯ ‘ಬಚ್ಚನ್​ ಪಾಂಡೆ’ಯಲ್ಲಿ ‘ಕೆಜಿಎಫ್​’ ಚಿತ್ರದ ಬಗ್ಗೆ ಉಲ್ಲೇಖ; ಇಲ್ಲಿದೆ ವಿಡಿಯೋ

ವಿಶ್ವಾದ್ಯಂತ ‘ಕೆಜಿಎಫ್​ 2’ ಪ್ರಚಾರ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಜ್ಜು; ಹೇಗಿದೆ ನೋಡಿ ತಯಾರಿ

Published On - 11:08 am, Mon, 21 March 22

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು