‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

Totapuri 2 Kannada Movie: ಜಗ್ಗೇಶ್ ಮತ್ತು ಡಾಲಿ ಧನಂಜಯ್ ಅವರ ಕಾಂಬಿನೇಷ​ನ್‌ನಲ್ಲಿ ‘ತೋತಾಪುರಿ 2’ ಸಿನಿಮಾ ಮೂಡಿಬಂದಿದೆ. ‘ಜೈಲರ್​’ ಚಿತ್ರದ ಎದುರು ಈ ಸಿನಿಮಾ ರಿಲೀಸ್​ ಆಗಲಿದೆ.

‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ
ತೋತಾಪುರಿ 2, ಜೈಲರ್​
Follow us
|

Updated on: Jul 31, 2023 | 3:31 PM

ಬೇರೆ ಬೇರೆ ಸ್ಟಾರ್​ ನಟರ ಸಿನಿಮಾಗಳು ಒಂದೇ ಸಮಯದಲ್ಲಿ ಬಿಡುಗಡೆಯಾದರೆ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತದೆ. ಹಾಗಾಗಿ ಸಾಧ್ಯವಾದಷ್ಟು ಡೇಟ್​ ಕ್ಲ್ಯಾಶ್​ ತಪ್ಪಿಸಲು ನಿರ್ಮಾಪಕರು ಪ್ರಯತ್ನಿಸುತ್ತಾರೆ. 2023ರ ದ್ವಿತೀಯಾರ್ಧದಲ್ಲಿ ಅನೇಕ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗುತ್ತಿವೆ. ಕೆಲವು ಸಂದರ್ಭಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸಿನಿಮಾಗಳು ಮುಖಾಮುಖಿ ಆಗುವುದು ಅನಿವಾರ್ಯ. ಈಗ ತಮಿಳಿನ ‘ಜೈಲರ್​’ ಸಿನಿಮಾ (Jailer Movie) ಮತ್ತು ಕನ್ನಡದ ‘ತೋತಾಪುರಿ 2’ ಸಿನಿಮಾ ಒಂದು ದಿನದ ಅಂತರದಲ್ಲಿ ಬಿಡುಗಡೆ ಆಗುತ್ತಿವೆ. ಆ ಕಾರಣದಿಂದ ಸಿನಿಪ್ರಿಯರಲ್ಲಿ ಕೌತುಕ ಮನೆ ಮಾಡಿದೆ. ‘ಜೈಲರ್​’ ಚಿತ್ರದಲ್ಲಿ ರಜನಿಕಾಂತ್​ ಮತ್ತು ಶಿವರಾಜ್​ಕುಮಾರ್​ ನಟಿಸಿದ್ದಾರೆ. ‘ತೋತಾಪುರಿ 2’ (Totapuri 2) ಸಿನಿಮಾದಲ್ಲಿ ಜಗ್ಗೇಶ್​, ಡಾಲಿ ಧನಂಜಯ್ (Daali Dhananjay) ಮುಂತಾದವರು ಅಭಿನಯಿಸಿದ್ದಾರೆ.

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಜೈಲರ್​’ ಚಿತ್ರ ಮುಂಚೂಣಿಯಲ್ಲಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ ಆಗಸ್ಟ್​ 10ರಂದು ಬಿಡುಗಡೆ ಆಗಲಿದೆ ಎಂದು ಘೋಷಣೆ ಆದ ಬಳಿಕ ಇದರ ಎದುರು ಬರಲು ಕನ್ನಡದ ಯಾವುದೇ ಸಿನಿಮಾಗಳು ಸಿದ್ಧವಿರಲಿಲ್ಲ. ಆದರೆ, ಈಗ ‘ಜೈಲರ್’ ಎದುರು ಪೈಪೋಟಿ ನೀಡಲು ‘ತೋತಾಪುರಿ 2’ ಸಿನಿಮಾ ಸಜ್ಜಾಗಿದೆ. ಜೈಲರ್​ ಬಿಡುಗಡೆಯಾದ ಒಂದು ದಿನದ ಬಳಿಕ ಅಂದರೆ, ಆಗಸ್ಟ್​ 11ರಂದು ‘ತೋತಾಪುರಿ 2’ ತೆರೆಕಾಣಲಿದೆ.

ಇದನ್ನೂ ಓದಿ: Dhananjay: ಮೈಸೂರಿನಲ್ಲಿ ಚಾಮುಂಡಿಯ ದರ್ಶನ ಪಡೆದ ಡಾಲಿ ಧನಂಜಯ್

‘ನವರಸ ನಾಯಕ’ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಅವರ ಕಾಂಬಿನೇಷ​ನ್‌ನಲ್ಲಿ ‘ತೋತಾಪುರಿ 2’ ಸಿನಿಮಾ ಮೂಡಿಬಂದಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ರಿಲೀಸ್​ ವಿಚಾರವನ್ನು ಚಿತ್ರತಂಡ ಖಚಿತಪಡಿಸಿದೆ. ‘ನಾವು ಆಗಸ್ಟ್​ ತಿಂಗಳ 2ನೇ ವಾರದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎಂದು ನಿರ್ಮಾಪಕ ಸುರೇಶ್ ಹೇಳಿದ್ದಾರೆ. ಸುಮನ್ ರಂಗನಾಥ್ ಅವರು ಸಹ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ ಡಾಲಿ ಧನಂಜಯ್, 25 ಸಿನಿಮಾ ಮಾಡಿದ್ದು ಸಾಧನೆಯೇ?

2022ರ ಸೆಪ್ಟೆಂಬರ್​ನಲ್ಲಿ ‘ತೋತಾಪುರಿ 1’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್..’ ಗೀತೆ ಬಹಳ ವೈರಲ್​ ಆಗಿತ್ತು. ಇತ್ತೀಚೆಗಷ್ಟೇ ‘ತೋತಾಪುರಿ 2’ ಸಿನಿಮಾದ ಮೊದಲ ಸಾಂಗ್​ ಬಿಡುಗಡೆ ಮಾಡಲಾಗಿದೆ. ಹೃದಯಶಿವ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ‘ಮೊದಲ ಮಳೆ ಮನದೊಳಗೆ…’ ಎಂದು ಈ ಹಾಡಿಗೆ ಜನಮೆಚ್ಚುಗೆ ಸಿಗುತ್ತಿದೆ. ಇದರಲ್ಲಿ ಧನಂಜಯ್ ಮತ್ತು ಸುಮನ್ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಸಂಜಿತ್ ಹೆಗಡೆ ಅವರ ಕಂಠದಲ್ಲಿ ಈ ಗೀತೆ ಮೂಡಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ