AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ

Totapuri 2 Kannada Movie: ಜಗ್ಗೇಶ್ ಮತ್ತು ಡಾಲಿ ಧನಂಜಯ್ ಅವರ ಕಾಂಬಿನೇಷ​ನ್‌ನಲ್ಲಿ ‘ತೋತಾಪುರಿ 2’ ಸಿನಿಮಾ ಮೂಡಿಬಂದಿದೆ. ‘ಜೈಲರ್​’ ಚಿತ್ರದ ಎದುರು ಈ ಸಿನಿಮಾ ರಿಲೀಸ್​ ಆಗಲಿದೆ.

‘ಜೈಲರ್​’ ಎದುರು ಪೈಪೋಟಿ ನೀಡಲಿರುವ ‘ತೋತಾಪುರಿ 2’; ಆಗಸ್ಟ್​ 11ರಂದು ಅದ್ದೂರಿಯಾಗಿ ಬಿಡುಗಡೆ
ತೋತಾಪುರಿ 2, ಜೈಲರ್​
ಮದನ್​ ಕುಮಾರ್​
|

Updated on: Jul 31, 2023 | 3:31 PM

Share

ಬೇರೆ ಬೇರೆ ಸ್ಟಾರ್​ ನಟರ ಸಿನಿಮಾಗಳು ಒಂದೇ ಸಮಯದಲ್ಲಿ ಬಿಡುಗಡೆಯಾದರೆ ಬಾಕ್ಸ್​ ಆಫೀಸ್​ನಲ್ಲಿ ಕ್ಲ್ಯಾಶ್​ ಏರ್ಪಡುತ್ತದೆ. ಹಾಗಾಗಿ ಸಾಧ್ಯವಾದಷ್ಟು ಡೇಟ್​ ಕ್ಲ್ಯಾಶ್​ ತಪ್ಪಿಸಲು ನಿರ್ಮಾಪಕರು ಪ್ರಯತ್ನಿಸುತ್ತಾರೆ. 2023ರ ದ್ವಿತೀಯಾರ್ಧದಲ್ಲಿ ಅನೇಕ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ಬಿಡುಗಡೆ ಆಗುತ್ತಿವೆ. ಕೆಲವು ಸಂದರ್ಭಗಳಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಸಿನಿಮಾಗಳು ಮುಖಾಮುಖಿ ಆಗುವುದು ಅನಿವಾರ್ಯ. ಈಗ ತಮಿಳಿನ ‘ಜೈಲರ್​’ ಸಿನಿಮಾ (Jailer Movie) ಮತ್ತು ಕನ್ನಡದ ‘ತೋತಾಪುರಿ 2’ ಸಿನಿಮಾ ಒಂದು ದಿನದ ಅಂತರದಲ್ಲಿ ಬಿಡುಗಡೆ ಆಗುತ್ತಿವೆ. ಆ ಕಾರಣದಿಂದ ಸಿನಿಪ್ರಿಯರಲ್ಲಿ ಕೌತುಕ ಮನೆ ಮಾಡಿದೆ. ‘ಜೈಲರ್​’ ಚಿತ್ರದಲ್ಲಿ ರಜನಿಕಾಂತ್​ ಮತ್ತು ಶಿವರಾಜ್​ಕುಮಾರ್​ ನಟಿಸಿದ್ದಾರೆ. ‘ತೋತಾಪುರಿ 2’ (Totapuri 2) ಸಿನಿಮಾದಲ್ಲಿ ಜಗ್ಗೇಶ್​, ಡಾಲಿ ಧನಂಜಯ್ (Daali Dhananjay) ಮುಂತಾದವರು ಅಭಿನಯಿಸಿದ್ದಾರೆ.

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಜೈಲರ್​’ ಚಿತ್ರ ಮುಂಚೂಣಿಯಲ್ಲಿದೆ. ‘ಸೂಪರ್​ ಸ್ಟಾರ್​’ ರಜನಿಕಾಂತ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಸಿನಿಮಾ ಆಗಸ್ಟ್​ 10ರಂದು ಬಿಡುಗಡೆ ಆಗಲಿದೆ ಎಂದು ಘೋಷಣೆ ಆದ ಬಳಿಕ ಇದರ ಎದುರು ಬರಲು ಕನ್ನಡದ ಯಾವುದೇ ಸಿನಿಮಾಗಳು ಸಿದ್ಧವಿರಲಿಲ್ಲ. ಆದರೆ, ಈಗ ‘ಜೈಲರ್’ ಎದುರು ಪೈಪೋಟಿ ನೀಡಲು ‘ತೋತಾಪುರಿ 2’ ಸಿನಿಮಾ ಸಜ್ಜಾಗಿದೆ. ಜೈಲರ್​ ಬಿಡುಗಡೆಯಾದ ಒಂದು ದಿನದ ಬಳಿಕ ಅಂದರೆ, ಆಗಸ್ಟ್​ 11ರಂದು ‘ತೋತಾಪುರಿ 2’ ತೆರೆಕಾಣಲಿದೆ.

ಇದನ್ನೂ ಓದಿ: Dhananjay: ಮೈಸೂರಿನಲ್ಲಿ ಚಾಮುಂಡಿಯ ದರ್ಶನ ಪಡೆದ ಡಾಲಿ ಧನಂಜಯ್

‘ನವರಸ ನಾಯಕ’ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಅವರ ಕಾಂಬಿನೇಷ​ನ್‌ನಲ್ಲಿ ‘ತೋತಾಪುರಿ 2’ ಸಿನಿಮಾ ಮೂಡಿಬಂದಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ. ರಿಲೀಸ್​ ವಿಚಾರವನ್ನು ಚಿತ್ರತಂಡ ಖಚಿತಪಡಿಸಿದೆ. ‘ನಾವು ಆಗಸ್ಟ್​ ತಿಂಗಳ 2ನೇ ವಾರದಲ್ಲಿ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎಂದು ನಿರ್ಮಾಪಕ ಸುರೇಶ್ ಹೇಳಿದ್ದಾರೆ. ಸುಮನ್ ರಂಗನಾಥ್ ಅವರು ಸಹ ಈ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರವನ್ನು ಮಾಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ ಹತ್ತು ವರ್ಷ ಪೂರೈಸಿದ ಡಾಲಿ ಧನಂಜಯ್, 25 ಸಿನಿಮಾ ಮಾಡಿದ್ದು ಸಾಧನೆಯೇ?

2022ರ ಸೆಪ್ಟೆಂಬರ್​ನಲ್ಲಿ ‘ತೋತಾಪುರಿ 1’ ಸಿನಿಮಾ ತೆರೆಕಂಡಿತ್ತು. ಆ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್..’ ಗೀತೆ ಬಹಳ ವೈರಲ್​ ಆಗಿತ್ತು. ಇತ್ತೀಚೆಗಷ್ಟೇ ‘ತೋತಾಪುರಿ 2’ ಸಿನಿಮಾದ ಮೊದಲ ಸಾಂಗ್​ ಬಿಡುಗಡೆ ಮಾಡಲಾಗಿದೆ. ಹೃದಯಶಿವ ಅವರು ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ‘ಮೊದಲ ಮಳೆ ಮನದೊಳಗೆ…’ ಎಂದು ಈ ಹಾಡಿಗೆ ಜನಮೆಚ್ಚುಗೆ ಸಿಗುತ್ತಿದೆ. ಇದರಲ್ಲಿ ಧನಂಜಯ್ ಮತ್ತು ಸುಮನ್ ರಂಗನಾಥ್ ಕಾಣಿಸಿಕೊಂಡಿದ್ದಾರೆ. ಸಂಜಿತ್ ಹೆಗಡೆ ಅವರ ಕಂಠದಲ್ಲಿ ಈ ಗೀತೆ ಮೂಡಿಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು