AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬರುತ್ತಿದೆ ‘ಫೋರೆನ್ಸಿಕ್​’ ಸಿನಿಮಾ; ‘ರತ್ನನ್​ ಪ್ರಪಂಚ’ ಬೆಡಗಿಯ ಇನ್ನೊಂದು ಚಿತ್ರ ಶೀಘ್ರವೇ ರಿಲೀಸ್

ರೆಬಾ ಮೋನಿಕಾ ಜಾನ್​​ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ‘ಅಂತಿಮ ಕ್ಷಣ’ ರಿಲೀಸ್​ ಆದ ಬಳಿಕ ಕನ್ನಡದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.

ಕನ್ನಡಕ್ಕೆ ಬರುತ್ತಿದೆ ‘ಫೋರೆನ್ಸಿಕ್​’ ಸಿನಿಮಾ; ‘ರತ್ನನ್​ ಪ್ರಪಂಚ’ ಬೆಡಗಿಯ ಇನ್ನೊಂದು ಚಿತ್ರ ಶೀಘ್ರವೇ ರಿಲೀಸ್
ರೆಬಾ ಮೋನಿಕಾ ಜಾನ್, ಟೊವಿನೋ ಥಾಮಸ್, ಮಮತಾ
TV9 Web
| Edited By: |

Updated on: Feb 24, 2022 | 8:08 AM

Share

ನಟಿ ರೆಬಾ ಮೋನಿಕಾ ಜಾನ್ (Reba Monica John)​ ಅವರು 2016ರಿಂದಲೂ ಚಿತ್ರರಂಗದಲ್ಲಿ ಇದ್ದಾರೆ. ಅವರು ಬಣ್ಣದ ಲೋಕದ ಪಯಣ ಆರಂಭಿಸಿದ್ದು ಮಲಯಾಳಂ ಚಿತ್ರರಂಗದಿಂದ. ಅಲ್ಲಿ ಅವರಿಗೆ ಯಶಸ್ಸು ಸಿಕ್ಕಿದೆ. ಸ್ಟಾರ್​ ಕಲಾವಿದರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ರೆಬಾ ಮೋನಿಕಾ ಜಾನ್​ ಅವರು ಕನ್ನಡದ ಪ್ರೇಕ್ಷಕರಿಗೂ ಪರಿಚಿತರಾಗಿದ್ದಾರೆ. ಡಾಲಿ ಧನಂಜಯ ನಟನೆಯ ‘ರತ್ನನ್​ ಪ್ರಪಂಚ’ ಚಿತ್ರಕ್ಕೆ ನಾಯಕಿ ಆಗುವ ಮೂಲಕ ರೆಬಾ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟಿದ್ದರು. ಒಟಿಟಿಯಲ್ಲಿ ಬಿಡುಗಡೆಯಾದ ಈ ಚಿತ್ರ ಜನಮೆಚ್ಚುಗೆ ಗಳಿಸಿತ್ತು. ಈಗ ರೆಬಾ ಅವರ ಇನ್ನೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ವಿಶೇಷ ಎಂದರೆ ಇದು ಒಂದು ಮಲಯಾಳಂ ಸಿನಿಮಾ. ಟೊವಿನೋ ಥಾಮಸ್​ (Tovino Thomas), ರೆಬಾ ಮೋನಿಯಾ ಜಾನ್​, ಮಮತಾ ಮೋಹನದಾಸ್​ ಮುಂತಾದವರು ಅಭಿನಯಿಸಿದ್ದ ‘ಫೋರೆನ್ಸಿಕ್​’ (Forensic Movie) ಚಿತ್ರ 2020ರಲ್ಲಿ ಬಿಡುಗಡೆ ಆಗಿತ್ತು. ಅದೇ ಸಿನಿಮಾವನ್ನು ಈಗ ಕನ್ನಡದಲ್ಲಿ ನೋಡುವ ಅವಕಾಶ ಸಿಗುತ್ತಿದೆ. ಹೌದು, ಆ ಚಿತ್ರ ಕನ್ನಡಕ್ಕೆ ಡಬ್​ ಆಗುತ್ತಿದೆ.

ಮಲಯಾಳಂ ಸಿನಿಮಾಗಳ ಕಂಟೆಂಟ್​ ಬಗ್ಗೆ ಹೊಸದಾಗಿ ಹೇಳಬೇಕಾದ್ದಿಲ್ಲ. ವಿಶೇಷವಾದ ಕಥಾವಸ್ತುಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಮಾಲಿವುಡ್​ ಚಿತ್ರಗಳು ಗಮನ ಸೆಳೆಯುತ್ತಿವೆ. ಅಂಥ ಸಿನಿಮಾಗಳ ಸಾಲಿಗೆ ‘ಫೋರೆನ್ಸಿಕ್​’ ಚಿತ್ರ ಕೂಡ ಸೇರುತ್ತದೆ. ಈ ಚಿತ್ರವನ್ನು ನೋಡಿದ್ದ ವಿಮರ್ಶಕರು ಬಹಳ ಮೆಚ್ಚಿಕೊಂಡಿದ್ದರು. ಕನ್ನಡ ಪ್ರೇಕ್ಷಕರು ಕೂಡ ‘ಫೋರೆನ್ಸಿಕ್​’ ನೋಡುವಂತಾಗಲಿ ಎಂದು ಡಬ್ಬಿಂಗ್​ ಮಾಡಲಾಗುತ್ತಿದೆ. ಕನ್ನಡದಲ್ಲಿ ಈ ಸಿನಿಮಾಗೆ ‘ಅಂತಿಮ ಕ್ಷಣ’ ಎಂದು ಶೀರ್ಷಿಕೆ ಇಡಲಾಗಿದೆ.

‘ಫೋರೆನ್ಸಿಕ್​’ ಚಿತ್ರವನ್ನು ಮೆಚ್ಚಿಕೊಂಡಿರುವ ಗೋಪಿನಾಥ್ ಹಾಗೂ ಚಂದ್ರಶೇಖರ್ ಅವರು ಕನ್ನಡಕ್ಕೆ ಡಬ್​ ಮಾಡಿಸುತ್ತಿದ್ದಾರೆ. ಡಬ್ಬಿಂಗ್​ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ ‘ಅಂತಿಮ ಕ್ಷಣ’ ಸಿನಿಮಾ ಬಿಡುಗಡೆ ಆಗಲಿದೆ. ‘ರತ್ನನ್​ ಪ್ರಪಂಚ’ ಸಿನಿಮಾದಲ್ಲಿ ರೆಬಾ ಮೋನಿಕಾ ಜಾನ್​ ಅವರ ನಟನೆ ನೋಡಿ ಮೆಚ್ಚಿಕೊಂಡಿದ್ದ ಎಲ್ಲರೂ ಈಗ ‘ಅಂತಿಮ ಕ್ಷಣ’ ನೋಡಲು ಕಾಯುತ್ತಿದ್ದಾರೆ.

ಅಖಿಲ್ ಪೌಲ್ ಹಾಗೂ ಅನಾಸ್ ಖಾನ್ ಅವರು ‘ಫೋರೆನ್ಸಿಕ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಟೊವಿನೋ ಥಾಮಸ್​, ರೆಬಾ ಮೋನಿಕಾ ಜಾನ್​, ಮಮತಾ ಮೋಹನದಾಸ್​ ಮಾತ್ರವಲ್ಲದೆ, ಪ್ರತಾಪ್​ ಪೋಪನ್​, ಬಿಜು ಜಾನ್​ ಅವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ಫೋರೆನ್ಸಿಕ್​’ ಚಿತ್ರಕ್ಕೆ ಜೆಕ್ಸ್ ಬಿಜೋಯ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಅಖಿಲ್ ಜಾರ್ಜ್ ಛಾಯಾಗ್ರಹಣ ಮಾಡಿದ್ದು, ಶಮೀರ್ ಅಹಮದ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಬಿ. ಮಂಜುನಾಥ್ ಹಾಗೂ ರಜನೀಶ್ ದೇವ ಸಂಭಾಷಣೆ ಬರೆದಿದ್ದಾರೆ. ಕನ್ನಡಕ್ಕೆ ಡಬ್​ ಆಗಿ, ‘ಅಂತಿಮ ಕ್ಷಣ’ ಶೀರ್ಷಿಕೆಯಲ್ಲಿ ಬಿಡುಗಡೆ ಆಗಲಿರುವ ಈ ಸಿನಿಮಾವನ್ನು ನೋಡಬೇಕು ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ.

ರೆಬಾ ಮೋನಿಕಾ ಜಾನ್​​ ಅವರು ಚಿತ್ರರಂಗದಲ್ಲಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಡಿಫರೆಂಟ್​ ಸಿನಿಮಾಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ‘ಅಂತಿಮ ಕ್ಷಣ’ ರಿಲೀಸ್​ ಆದ ಬಳಿಕ ಕನ್ನಡದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ. ಅದೇ ರೀತಿ, ನಟ ಟೊವಿನೋ ಥಾಮಸ್​ ಅವರು ಇತ್ತೀಚೆಗೆ ‘ಮಿನ್ನಲ್​ ಮುರಳಿ’ ಸಿನಿಮಾ ಮೂಲಕ ಮೋಡಿ ಮಾಡಿದ್ದರು. ಫ್ಯಾಂಟಸಿ ಶೈಲಿಯಲ್ಲಿ ಮೂಡಿಬಂದಿದ್ದ ಆ ಚಿತ್ರ ಒಟಿಟಿಯಲ್ಲಿ ಬಿಡುಗಡೆ ಆಗಿತ್ತು. ಕನ್ನಡಕ್ಕೂ ಡಬ್​ ಆಗಿ ವೀಕ್ಷಣೆಗೆ ಲಭ್ಯವಾಗಿತ್ತು. ಆ ಮೂಲಕ ಕನ್ನಡದ ಸಿನಿಪ್ರಿಯರನ್ನು ರಂಜಿಸಿದ್ದ ಅವರು ಈಗ ‘ಅಂತಿಮ ಕ್ಷಣ’ ಸಿನಿಮಾ ಮೂಲಕ ಮನರಂಜನೆ ನೀಡಲಿದ್ದಾರೆ.

ಇದನ್ನೂ ಓದಿ:

ರಮ್ಯಾಗೆ ಸಖತ್​ ಇಷ್ಟವಾಯ್ತು ‘ರತ್ನನ್​ ಪ್ರಪಂಚ’; ಈ ಚಿತ್ರಕ್ಕೆ ಅವರೇ ನಾಯಕಿ ಆಗಬೇಕಿತ್ತು, ಆದರೆ..

‘ಚೇತನ್​ ಬಗ್ಗೆ ಚಿಂತೆ ಬೇಡ, ಸ್ಟ್ರಾಂಗ್​​ ಆಗಿದ್ದಾರೆ’; ನ್ಯಾಯಾಂಗ ಬಂಧನ ಕುರಿತು ನಟನ ಪತ್ನಿ ಪ್ರತಿಕ್ರಿಯೆ

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ