AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic Movie: ಟಾಕ್ಸಿಕ್ ಗ್ಲಿಂಪ್ಸ್ ರಿಲೀಸ್; ಮಸ್ತ್ ಆಗಿ ಕ್ಲಬ್​ಗೆ ಎಂಟ್ರಿ ಕೊಟ್ಟ ಯಶ್

Toxic Birthday Peek: ರಾಕಿಂಗ್ ಸ್ಟಾರ್ ಯಶ್ ಅವರಿಗೆ ಇಂದು (ಜನವರಿ 8) ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಈ ದಿನದಂದು ‘ಟಾಕ್ಸಿಕ್’ ಚಿತ್ರದ ಕಡೆಯಿಂದ ಅಪ್​ಡೇಟ್ ಸಿಗಲಿದೆ ಎಂದು ನಿರ್ಮಾಣ ಸಂಸ್ಥೆ ‘ಕೆವಿಎನ್ ಪ್ರೊಡಕ್ಷನ್ಸ್’ ಅಪ್​ಡೇಟ್ ಕೊಟ್ಟಿತ್ತು. ಆ ಸಮಯ ಈಗ ಸಮೀಪಿಸಿದೆ. ಈ ಚಿತ್ರದ ಗ್ಲಿಂಪ್ಸ್​ನ ರಿಲೀಸ್ ಮಾಡಲಾಗಿದೆ.

Toxic Movie: ಟಾಕ್ಸಿಕ್ ಗ್ಲಿಂಪ್ಸ್ ರಿಲೀಸ್; ಮಸ್ತ್ ಆಗಿ ಕ್ಲಬ್​ಗೆ ಎಂಟ್ರಿ ಕೊಟ್ಟ ಯಶ್
Yash
ರಾಜೇಶ್ ದುಗ್ಗುಮನೆ
|

Updated on:Jan 08, 2025 | 11:23 AM

Share

ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ. ಯಶ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

ಯಶ್ ಅವರು ರೆಟ್ರೋ ಕಾರಲ್ಲಿ ಸ್ಟೈಲಿಶ್ ಆಗಿ ಕ್ಲಬ್ ಒಂದಕ್ಕೆ ಎಂಟ್ರಿ ಕೊಡುತ್ತಾರೆ. ಅವರು ಒಳಗೆ ಬರುತ್ತಿರುವಾಗ ಅಲ್ಲಿ ಎಲ್ಲರೂ ಮೋಜಿನಲ್ಲಿ ತೇಲುತ್ತಾ ಇರುತ್ತಾರೆ. ಆಗ ಯಶ್ ಅವರು ಹೆಂಡದ ಬಾಟಲಿ ತೆಗೆದುಕೊಂಡು ಅಲ್ಲಿದ್ದ ಮಹಿಳೆಯ ಮೇಲೆ ಸುರಿಯುತ್ತಾರೆ. ಮೇಕಿಂಗ್ ನೋಡಿದರೆ ಇದು ರೆಟ್ರೋ ಕಥೆಯ ರೀತಿ ಕಾಣುತ್ತದೆ.

ಸದ್ಯ ರಿಲೀಸ್ ಆಗಿರೋದು ಒಂದು ಗ್ಲಿಂಪ್ಸ್ ಮಾತ್ರ. ಯಶ್ ಜನ್ಮದಿನದ ಪ್ರಯುಕ್ತ ಇದನ್ನು ರಿಲೀಸ್ ಮಾಡಲಾಗಿದೆ ಅಷ್ಟೇ. ಇದು ಸಿನಿಮಾದಲ್ಲಿ ಬರುವ ಒಂದು ಕ್ಲಿಪ್ ಎನ್ನಲಾಗಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಡ್ರಗ್ಸ್ ಬಗ್ಗೆ ಹೇಳಲಾಗುತ್ತಿದೆ ಎಂದು ಈ ಮೊದಲು ವರದಿ ಆಗಿದೆ.

ಇದನ್ನೂ ಓದಿ:  ಯಶ್ ಜನ್ಮದಿನಕ್ಕೆ ಸೂಪರ್ ಸರ್​ಪ್ರೈಸ್; ಪೋಸ್ಟರ್ ಮೂಲಕ ಅಪ್​ಡೇಟ್ ಕೊಟ್ಟ ‘ಟಾಕ್ಸಿಕ್’ ಟೀಂ

‘ಟಾಕ್ಸಿಕ್’ ಚಿತ್ರಕ್ಕೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮೂಲಕ ವೆಂಕಟ್ ನಾರಾಯಣ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಬಿಗ್ ಬಜೆಟ್​ನಲ್ಲಿ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಹಿಂದಿಯ ಕಿಯಾರಾ ಅಡ್ವಾಣಿ, ತಮಿಳಿನ ನಯನತಾರಾ ನಟಿಸುತ್ತಿದ್ದಾರೆ. ಈ ಸಿನಿಮಾ ವರ್ಷಾಂತ್ಯಕ್ಕೆ ರಿಲೀಸ್ ಆಗಲಿದೆ. ಇದನ್ನು, ಪ್ಯಾನ್​ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡಲು ಆಲೋಚನೆ ನಡೆದಿದೆ. ಈ ಚಿತ್ರದಲ್ಲಿ ಹಾಲಿವುಡ್ ತಂತ್ರಜ್ಞರು ಕೂಡ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:31 am, Wed, 8 January 25

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್