ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ರಾಧಿಕಾ ಪಂಡಿತ್​ ಹಾಗೂ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಮುಂಬೈನಲ್ಲಿ ಜಾಲಿಯಾಗಿ ಕಾಲ ಕಳೆದಿದ್ದಾರೆ. ಡಿನ್ನರ್​ಗೆ ಜೊತೆಯಾಗಿ ತೆರಳಿದ ಅವರನ್ನು ಕಂಡು ಪಾಪರಾಜಿಗಳು ಮುಗಿಬಿದ್ದಿದ್ದಾರೆ. ತಮಗಾಗಿ ಕಾದಿದ್ದ ಪಾಪರಾಜಿಗಳ ಕಡೆಗೆ ಯಶ್​ ಕೈ ಬೀಸಿದ್ದಾರೆ. ಕೆಲವು ಕ್ಷಣಗಳ ಕಾಲ ನಿಂತು ಪೋಸ್​ ನೀಡಿ ನಂತರ ಮುಂದೆ ಸಾಗಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು
ಯಶ್​, ರಾಧಿಕಾ ಪಂಡಿತ್
Follow us
|

Updated on: Sep 26, 2024 | 8:46 PM

ನಟ ಯಶ್​ ಅವರು ‘ಟಾಕ್ಸಿಕ್​’ ಸಿನಿಮಾದ ಕೆಲಸಗಳತ್ತ ಗಮನ ಹರಿಸಿದ್ದಾರೆ. ಶೂಟಿಂಗ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ. ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಕುಟುಂಬಕ್ಕೆ ಖಂಡಿತಾ ಸಮಯ ನೀಡುತ್ತಾರೆ. ಇತ್ತೀಚೆಗೆ ಅವರು ಮುಂಬೈನಲ್ಲಿ ಕಾಣಿಸಿಕೊಂಡರು. ಪತ್ನಿ ರಾಧಿಕಾ ಪಂಡಿತ್ ಜೊತೆ ಮುಂಬೈನ ಒಂದು ರೆಸ್ಟೋರೆಂಟ್​ನಲ್ಲಿ ಅವರು ರಾತ್ರಿ ಊಟ ಸವಿದರು. ರೆಸ್ಟೋರೆಂಟ್​ನಿಂದ ಹೊರ ಬರುವಾಗ ಅವರ ಫೋಟೋ ಮತ್ತು ವಿಡಿಯೋ ತೆಗೆಯುವ ಸಲುವಾಗಿ ಪಾಪರಾಜಿಗಳು ಮುಗಿಬಿದ್ದರು. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ಯಶಸ್ಸಿನ ಬಳಿಕ ಯಶ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸ್ಟಾರ್​ ಆದರು. ಮುಂಬೈ ಮಂದಿಗೂ ಅವರು ಫೇವರಿಟ್​ ಆಗಿದ್ದಾರೆ. ಯಶ್​ ಎಲ್ಲಿಯೇ ಕಂಡರೂ ಕೂಡ ಅಭಿಮಾನಿಗಳು ರಾಕಿ ಭಾಯ್ ಎಂದು ಕೂಗುತ್ತಾರೆ. ಮುಂಬೈನಲ್ಲಿ ಪಾಪರಾಜಿಗಳು ಕೂಡ ರಾಕಿ ಭಾಯ್​, ಅಣ್ಣ ಎಂದು ಕರೆದಿದ್ದಾರೆ.

View this post on Instagram

A post shared by yogen shah (@yogenshah_s)

ರಾಧಿಕಾ ಪಂಡಿತ್ ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಪತಿಯ ವೃತ್ತಿ ಜೀವನಕ್ಕೆ ಅವರು ಬೆಂಬಲವಾಗಿ ನಿಂತಿದ್ದಾರೆ. ‘ಟಾಕ್ಸಿಕ್​’ ಸಿನಿಮಾದ ಕೆಲಸಗಳ ಬಿಡುವಿನಲ್ಲಿ ರಾಧಿಕಾ ಮತ್ತು ಯಶ್​ ಅವರು ಮುಂಬೈನಲ್ಲಿ ಸುತ್ತಾಟ ನಡೆಸಿದ್ದಾರೆ. ಕೈ-ಕೈ ಹಿಡಿದು ಬಂದ ಈ ದಂಪತಿಯನ್ನು ಕಂಡು ಅಭಿಮಾನಿಗಳಿಗೆ ಖುಷಿಯಾಗಿದೆ. ವೈರಲ್​ ಆಗಿರುವ ವಿಡಿಯೋಗೆ ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಶೂಟಿಂಗ್​ ಸೆಟ್​ನಲ್ಲಿ ಶಿವಣ್ಣ-ಯಶ್​ ಭೇಟಿ; ಗೆಟಪ್​​ ನೋಡಿ ಫ್ಯಾನ್ಸ್​ ಫಿದಾ

‘ಟಾಕ್ಸಿಕ್’ ಸಿನಿಮಾದ ಮೇಲೆ ಜನರಿಗೆ ಇರುವ ನಿರೀಕ್ಷೆ ತುಂಬ ದೊಡ್ಡದು. ಇದರಲ್ಲಿ ಬಾಲಿವುಡ್​ ಕಲಾವಿದರು ಕೂಡ ನಟಿಸುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಯಶ್​ ಒಪ್ಪಿಕೊಂಡ ಸಿನಿಮಾ ಎಂಬ ಕಾರಣದಿಂದ ‘ಟಾಕ್ಸಿಕ್​’ ಚಿತ್ರ ಹೈಪ್​ ಸೃಷ್ಟಿ ಮಾಡಿದೆ. ಈ ಸಿನಿಮಾಗೆ ಗೀತು ಮೋಹನ್​ದಾಸ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್​’ ಸಂಸ್ಥೆಯು ಬಂಡವಾಳ ಹೂಡುತ್ತಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕೆಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರಾಯಭಾರಿಯಾಗಿಯೂ ಯಶ್​ ಅವರು ಬ್ಯುಸಿ ಆಗಿದ್ದಾರೆ. ಆ ಮೂಲಕವೂ ಅವರು ಕೈ ತುಂಬ ಸಂಪಾದನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?