AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

'ಟಾಕ್ಸಿಕ್' ಚಿತ್ರದ ಬಿಡುಗಡೆ ಇರಾನ್-ಇಸ್ರೇಲ್ ಯುದ್ಧದ ಕಾರಣದಿಂದ ಮುಂದೂಡಲ್ಪಟ್ಟಿತು, ಇದರಿಂದ 'ಧುರಂಧರ್ 2' ಜೊತೆಗಿನ ಕ್ಲ್ಯಾಶ್ ತಪ್ಪಿತು. ಆದರೆ, ಈಗ ಯಶ್‌ ಅವರ 'ಟಾಕ್ಸಿಕ್' ಸಿನಿಮಾ ಜೂನ್-ಜುಲೈ ತಿಂಗಳಲ್ಲಿ ಬರೋಬ್ಬರಿ 12 ಚಿತ್ರಗಳ ಕಠಿಣ ಸ್ಪರ್ಧೆ ಎದುರಿಸುತ್ತಿದೆ. ದೊಡ್ಡ ಬಜೆಟ್‌ನ ಈ ಚಿತ್ರಕ್ಕೆ ಕನಿಷ್ಠ ಎರಡು ತಿಂಗಳ ಪ್ರದರ್ಶನ ಅಗತ್ಯವಿದ್ದು, ಈ ಸ್ಪರ್ಧೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು
ಯಶ್
ರಾಜೇಶ್ ದುಗ್ಗುಮನೆ
|

Updated on: Mar 14, 2026 | 10:48 AM

Share

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ.

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು. ಯಾವುದಾದರೂ ಒಂದು ಸಿನಿಮಾ ಮುಂದಕ್ಕೆ ಹೋಗಲೇಬೇಕಾದ ಅನಿವಾರ್ಯತೆ ಸೃಷ್ಟಿ ಆಗಿತ್ತು. ಕೊನೆಗೆ, ‘ಟಾಕ್ಸಿಕ್’ ತಂಡದವರು ಚಿತ್ರವನ್ನು ಜೂನ್ 4ಕ್ಕೆ ಮುಂದಕ್ಕೆ ಹಾಕಿಕೊಂಡರು. ಯಶ್ ಈಗ 11 ಸಿನಿಮಾಗಳಿಂದ ಸ್ಪರ್ಧೆ ಎದುರಿಸಬೇಕಿದೆ.

‘ಟಾಕ್ಸಿಕ್’ ಸಿನಿಮಾದ ಬಜೆಟ್ ದೊಡ್ಡದಿದೆ. ಹೀಗಾಗಿ, ಈ ಸಿನಿಮಾ ಕನಿಷ್ಠ ಎರಡು ತಿಂಗಳು ಚಿತ್ರಮಂದಿರದಲ್ಲಿ ಪ್ರದರ್ಶನ ಕಾಣಬೇಕಾದ ಅನಿವಾರ್ಯತೆ ಇದೆ. ಆದರೆ, ಈ ಎರಡು ತಿಂಗಳಲ್ಲಿ ಬರೋಬ್ಬರಿ 12 ಚಿತ್ರಗಳು ಬರುತ್ತಿವೆ.

ಜೂನ್ 5ಕ್ಕೆ ಹಾಲಿವುಡ್​​ನ ‘ಮಾಸ್ಟರ್ ಆಫ್ ದಿ ಯೂನಿವರ್ಸ್’ ಬರುತ್ತಿದೆ. ಜೂನ್ 12ರಂದು ‘ಹೇ ಜವಾನಿ ತೋ ಇಷ್ಕ್ ಹೋನಾ ಹೇ’, ‘ಮೇ ವಾಪ್ಸ್ ಆವುಂಗಾ’ ತೆರೆಗೆ ಬರುತ್ತಿದೆ. ಜೂನ್ 19ರಂದು ‘ಕಾಕ್​​ಟೇಲ್ 2’ ಹಾಗೂ ‘ಟಾಯ್ ಸ್ಟೋರಿ 5’ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಕೆಲಸದ ಮಧ್ಯೆ ಶೀಘ್ರವೇ ಹೊಸ ಸಿನಿಮಾ ಸೆಟ್ ಸೇರಿಕೊಳ್ಳಲಿದ್ದಾರೆ ಯಶ್

ಜೂನ್ 26ಕ್ಕೆ ‘ಕ್ಯಾರಿ ಆನ್ ಜಟ್ಟಾ 4’ ತೆರೆಗೆ ಬರಲಿದೆ. ಜುಲೈ 1ರಂದು ‘ಮಿನೀಯನ್ 2’, ಜುಲೈ 3ರಂದು ‘ಧಮಾಲ್ 4’, ಜುಲೈ 9ರಂದು ‘ಮೋನಾ’, ಜುಲೈ 10ರಂದು ‘ಆಲ್ಫಾ’, ಜುಲೈ 17ರಂದು ‘ದಿ ಒಡಿಸ್ಸಿ’, ಜುಲೈ 31ರಂದು ‘ಸ್ಪೈಡರ್ ಮ್ಯಾನ್, ‘ಬ್ರ್ಯಾಂಡ್ ನ್ಯೂ ಡೇ’ ತೆರೆಗೆ ಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್