ಯಶ್ ಸಿನಿಮಾ ನಿರ್ದೇಶನ ಮಾಡ್ತಿರೋ ಗೀತು ಮೋಹನ್​ದಾಸ್ ಸ್ಪೆಷಾಲಿಟಿ ಏನು?

‘ಟಾಕ್ಸಿಕ್’ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ವೆಂಕಟ್ ಕೆ. ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರವನ್ನು ಗೀತು ಮೋಹನ್​​ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ.

ಯಶ್ ಸಿನಿಮಾ ನಿರ್ದೇಶನ ಮಾಡ್ತಿರೋ ಗೀತು ಮೋಹನ್​ದಾಸ್ ಸ್ಪೆಷಾಲಿಟಿ ಏನು?
ಗೀತು ಮೋಹನ್​ದಾಸ್
Follow us
|

Updated on:Aug 08, 2024 | 12:23 PM

ಗೀತು ಮೋಹನ್​ದಾಸ್ ಅವರು ಯಶ್ ನಟನೆಯ ‘ಟಾಕ್ಸಿಕ್’ ಚಿತ್ರಕ್ಕೆ ನಿರ್ದೇಶನ ಮಾಡುವ ಅವಕಾಶ ಪಡೆದಿದ್ದಾರೆ. ಈ ಸಿನಿಮಾದ ಮುಹೂರ್ತ ಇಂದು (ಆಗಸ್ಟ್ 8) ನಡೆದಿದೆ. ಶೂಟಿಂಗ್ ಕೂಡ ಇಂದಿನಿಂದ ಆರಂಭ ಆಗಲಿದೆ. ಈ ಚಿತ್ರಕ್ಕಾಗಿ ಕಾದು ಕೂತಿದ್ದ ಅಭಿಮಾನಿಗಳಿಗೆ ಈ ವಿಚಾರ ಥ್ರಿಲ್ ನೀಡಿದೆ. ಈ ಮಧ್ಯೆ ಕೆಲವರು ಗೀತು ಮೋಹನ್​ದಾಸ್ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಅವರ ಬಗ್ಗೆ ಇಲ್ಲಿದೆ ಮಾಹಿತಿ.

ಗೀತು ಮೋಹನ್​ದಾಸ್ ಅವರು ಜನಿಸಿದ್ದು ಕೇರಳದ ಕೊಚ್ಚಿಯಲ್ಲಿ. ಅವರು ಹುಟ್ಟಿದ್ದು 1981ರಲ್ಲಿ. ಅವರಿಗೆ ಈಗ 43 ವರ್ಷ ವಯಸ್ಸು. ಗೀತು ಮೋಹನ್​ದಾಸ್ ಅವರು 1986ರಲ್ಲಿ ಬಾಲ ಕಲಾವಿದರಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಚಿತ್ರಕ್ಕೆ ‘ಅತ್ಯುತ್ತಮ ಬಾಲನಟಿ’ ವಿಭಾಗದಲ್ಲಿ ಅವರಿಗೆ ಕೇರಳ ಸರ್ಕಾರದ ರಾಜ್ಯ ಪ್ರಶಸ್ತಿ ಸಿಕ್ಕಿತು. ನಂತರ ಅವರು ಹಲವು ಸಿನಿಮಾಗಳಲ್ಲಿ ಬಾಲ ನಟಿಯಾಗಿ ಅಭಿನಯಿಸಿದರು. 2000ನೇ ಇಸ್ವಿಯಲ್ಲಿ ಗೀತಾ ಅವರು ‘ಬಾಲ’ ಚಿತ್ರದ ಮೂಲಕ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು.

2004ರ ‘ಅಕಲೆ’ ಚಿತ್ರಕ್ಕೆ ಅವರಿಗೆ ಕೇರಳ ರಾಜ್ಯ ಪ್ರಶಸ್ತಿ ಸಿಕ್ಕಿದೆ. 2009ರ ಬಳಿಕ ಅವರು ನಟನೆ ತೊರೆದು ನಿರ್ದೇಶನದತ್ತ ಗಮನಹರಿಸಿದರು. 2014ರಲ್ಲಿ ‘ಲೈಯರ್ಸ್​ ಡೈಸ್’ ಸಿನಿಮಾ ರಿಲೀಸ್ ಆಯಿತು. ಈ ಸಿನಿಮಾಗೆ ಎರಡು ರಾಷ್ಟ್ರ ಪಶಸ್ತಿಗಳು ಸಿಕ್ಕಿವೆ. 87ನೇ ಆಸ್ಕರ್​ ಪ್ರಶಸ್ತಿಗೆ ಭಾರತದಿಂದ ‘ಲೈಯರ್ಸ್​ ಡೈಸ್​’ ಸಿನಿಮಾವನ್ನು ಸ್ಪರ್ಧೆಗೆ ಕಳಿಸಲಾಗಿತ್ತು. ಆದರೆ ನಾಮಿನೇಟ್​ ಆಗಿರಲಿಲ್ಲ. 2019ರಲ್ಲಿ ಅವರು ‘ಮೂತೊನ್’ ಸಿನಿಮಾ ಮಾಡಿದರು. ಈ ಚಿತ್ರ ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಸಿದ್ಧವಾಯಿತು. ಇದು ಕೂಡ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಪ್ರಶಸ್ತಿ ಪಡೆಯುವಂಥ ಸಿನಿಮಾ ಮಾಡೋದು ಅವರ ಸ್ಪೆಷಾಲಿಟಿ.

ಈಗ ಗೀತು ಮೋಹನ್​ದಾಸ್ ಅವರು ಐದು ವರ್ಷಗಳ ಗ್ಯಾಪ್ ಬಳಿಕ ‘ಟಾಕ್ಸಿಕ್’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕಾಗಿ ಗೀತು ಅವರು ಸಾಕಷ್ಟು ಸ್ಕ್ರಿಪ್ಟ್ ಕೆಲಸ ಮಾಡಿದ್ದಾರೆ. ಈ ಸಿನಿಮಾದಲ್ಲಿ ಯಶ್ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ ಅನ್ನೋದು ವಿಶೇಷ. ಯಶ್ ಅವರು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸಿಕೊಂಡಿದ್ದಾರೆ.

ಇದನ್ನೂ ಓದಿ: ಯಶ್ ಇಷ್ಟ ಆಗೋದೆ ಇದಕ್ಕೆ; ಲೈಟ್ ಬಾಯ್ ಕೈಯಲ್ಲಿ ‘ಟಾಕ್ಸಿಕ್’ ಸಿನಿಮಾಗೆ ಕ್ಲ್ಯಾಪ್

ದೊಡ್ಡ ಬಜೆಟ್​ನಲ್ಲಿ ‘ಟಾಕ್ಸಿಕ್​’ ಸಿನಿಮಾ ಮೂಡಿಬರಲಿದೆ. ಮಹಿಳಾ ಡೈರೆಕ್ಟರ್​ ಜೊತೆ ಯಶ್​ ಅವರು ಕೈ ಜೋಡಿಸಿರುವುದು ವಿಶೇಷ. ಈ ಸಿನಿಮಾ ಮಾಸ್​ ಆಗಿ ಮೂಡಿಬರಲಿದೆ ಎನ್ನಲಾಗಿದೆ. 2025ರ ಏಪ್ರಿಲ್​ 10ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಆದರೆ, ಸಿನಿಮಾ ಕೆಲಸ ಆರಂಭ ಆಗಿರೋದು ವಿಳಂಬ ಆಗಿರುವುದರಿಂದ ಸಿನಿಮಾ ರಿಲೀಸ್ ವಿಳಂಬ ಆಗಲಿದೆ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:15 pm, Thu, 8 August 24

ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್