AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ರಿಲೀಸ್​​ಗೆ ಮುನ್ನ ಯಶ್ ಟೆಂಪನ್ ರನ್

Yash Temple run: ‘ಟಾಕ್ಸಿಕ್’ ಸಿನಿಮಾ ನಾಳೆ (ಆಗಸ್ಟ್ 26) ರಿಲೀಸ್ ಆಗುತ್ತಿದೆ. ಯಶ್ ಅವರ ಸಿನಿಮಾ ಒಂದು ರಿಲೀಸ್ ಆಗಿ ನಾಲ್ಕು ವರ್ಷಗಳಾಗಿವೆ. ಇದೀಗ ನಾಲ್ಕು ವರ್ಷದ ಬಳಿಕ ತಮ್ಮ ಸಿನಿಮಾ ಬಿಡುಗಡೆ ಆಗುತ್ತಿರುವ ಕಾರಣ, ಯಶ್ ಸಹ ಉತ್ಸುಕರಾಗಿದ್ದು, ಸಿನಿಮಾಕ್ಕೆ ಒಳಿತಾಗಲಿ ಎಂದು ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಾಹಿತಿ ಇಲ್ಲಿದೆ ನೋಡಿ....

‘ಟಾಕ್ಸಿಕ್’ ರಿಲೀಸ್​​ಗೆ ಮುನ್ನ ಯಶ್ ಟೆಂಪನ್ ರನ್
Yash Temple Run
ಮಂಜುನಾಥ ಸಿ.
|

Updated on: Aug 25, 2026 | 5:15 PM

Share

ಮುಖ್ಯಾಂಶಗಳು

  • ಟಾಕ್ಸಿಕ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ.
  • ಸಿನಿಮಾ ರಿಲೀಸ್​​ಗೆ ಮುಂಚೆ ಯಶ್ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.
  • ಧರ್ಮಸ್ಥಳ ಸೇರಿದಂತೆ ಇನ್ನೂ ಕೆಲ ದೇವಾಲಯಗಳಲ್ಲಿ ಯಶ್ ಭೇಟಿ ನೀಡಿದ್ದಾರೆ.

‘ಕೆಜಿಎಫ್ 2’ (KGF 2) ಸಿನಿಮಾ 2022 ರಲ್ಲಿ ಬಿಡುಗಡೆ ಆಗಿತ್ತು. ನಾಲ್ಕು ವರ್ಷಗಳ ಬಳಿಕ ಯಶ್ (Yash) ಅವರ ಸಿನಿಮಾ ಒಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆ ಆಗುವ ಮುಂಚೆ ನಟ ಯಶ್ ಟೆಂಪಲ್ ರನ್ ಮಾಡುತ್ತಿದ್ದಾರೆ. ಇಂದು (ಆಗಸ್ಟ್ 25) ನಟ ಯಶ್, ನಿರ್ಮಾಪಕ ವೆಂಕಟ್ ಅವರ ಜೊತೆ ಕರಾವಳಿ ಭಾಗದ ಕೆಲ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ. ಮೊದಲಿಗೆ ಧರ್ಮಸ್ಥಳಕ್ಕೆ ಬಂದ ಯಶ್ ಹಾಗೂ ವೆಂಕಟ್ ಆ ಬಳಿಕ ಉಜಿರೆಯ ದೇವಾಲಯಕ್ಕೆ ಸಹ ಭೇಟಿ ನೀಡಿದ್ದಾರೆ.

ಮೊದಲು ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟ ಯಶ್ ಮತ್ತು ನಿರ್ಮಾಪಕ ವೆಂಕಟ್ ಅವರು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಗರ್ಭಗುಡಿಯ ಮುಂದೆ ಕೆಲ ಸಮಯ ನಿಂತು ಪ್ರಾರ್ಥನೆ ಮಾಡಿದರು. ಅದಾದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದ ನಟ ಯಶ್ ಮತ್ತು ನಿರ್ಮಾಪಕ ವೆಂಕಟ್ ಅವರು ಹೆಗ್ಗಡೆಯವರ ಆಶೀರ್ವಾದವನ್ನು ಸಹ ಪಡೆದರು. ಕೆಲ ಸಮಯ ಮಾತುಕತೆ ಸಹ ನಡೆಸಿದ್ದಾರೆ.

ಧರ್ಮಸ್ಥಳ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಯಶ್ ಹಾಗೂ ವೆಂಕಟ್ ಅವರು ಉಜಿರೆಯು ಸುರಿಯ ಸದಾಶಿವರುದ್ರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿರುವ ದೇವಾಲಯ ಇದಾಗಿದೆ. ಈ ಹಿಂದೆ ‘ಕೆಜಿಎಫ್ 2’ ಸಿನಿಮಾದ ಬಿಡುಗಡೆ ಸಮಯದಲ್ಲಿಯೂ ಸಹ ಯಶ್ ಅವರು ಈ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಈ ದೇವರಲ್ಲಿ ವಿಶೇಷ ಭಕ್ತಿಯುಳ್ಳ ಯಶ್, 2024ರ ಆಗಸ್ಟ್ 6 ರಂದು ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡಿದ್ದರು. ಆಗ ಸಿನಿಮಾ ರೀಲ್​​ ಮಾದರಿ ಮಣ್ಣಿನ ಆಕೃತಿ ಹರಕೆಯನ್ನು ಯಶ್ ಸಲ್ಲಿಸಿದ್ದರು.

ಇದನ್ನೂ ಓದಿ:‘ಟಾಕ್ಸಿಕ್’ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್

ಯಶ್, ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಸಮಯಕ್ಕೆ ಕೆಲವು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಾರೆ. ಅದರಂತೆ ಅವರ ಮಹಾತ್ವಾಕಾಂಕ್ಷೆಯ ಸಿನಿಮಾ ‘ಟಾಕ್ಸಿಕ್’ ರಿಲೀಸ್ ಆಗುವ ವೇಳೆಯೂ ಕೆಲವು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದಾರೆ. ‘ಕೆಜಿಎಫ್’ ಸಿನಿಮಾ ಬಿಡುಗಡೆ ವೇಳೆ ಅಂಬರೀಶ್ ಅವರ ಮನೆಗೆ ಹೋಗಿ ಫೋಟೊಕ್ಕೆ ನಮಸ್ಕರಿಸಿ ಆಶೀರ್ವಾದ ಸಹ ಪಡೆದಿದ್ದರು. ಈ ಬಾರಿಯೂ ಅಂಬರೀಶ್ ಅವರ ನಿವಾಸಕ್ಕೆ ಹೋಗುತ್ತಾರೋ ಇಲ್ಲವೋ ನೋಡಬೇಕಿದೆ.

‘ಟಾಕ್ಸಿಕ್’ ಸಿನಿಮಾ ನಾಳೆ (ಆಗಸ್ಟ್ 26) ರಿಲೀಸ್ ಆಗುತ್ತಿದೆ. ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸುವ ಜೊತೆಗೆ ಸಹ ನಿರ್ಮಾಪಕರೂ ಆಗಿದ್ದಾರೆ. ಕೆವಿಎನ್ ಜೊತೆಗೆ ತಮ್ಮ ಮಾನ್​​​ಸ್ಟರ್ ಮೈಂಡ್ ಕ್ರಿಯೇಷನ್ಸ್ ಮೂಲಕ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾ ಅನ್ನು ಗೀತೂ ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ರುಕ್ಮಿಣಿ ವಸಂತ್ ಇನ್ನೂ ಹಲವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ