AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾದಿಂದ ಮರ ಕಡಿದ ಆರೋಪ; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಎಚ್​​ಎಂಟಿ

ಯಶ್ ನಟನೆಯ ‘ಟಾಕ್ಸಿಕ್’ ತಂಡದವರು ಎಚ್​ಎಂಟಿ ಜಾಗದಲ್ಲಿ ಸೆಟ್​ ಹಾಕಿದ್ದರು ಎಂದು ಹೇಳಲಾಗಿತ್ತು. ಆದರೆ, ಇದು ತಮ್ಮ ಜಾಗ ಅಲ್ಲ ಎಂದು ಎಚ್​​ಎಂಟಿ ಹೇಳಿದೆ. ‘ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಶೂಟಿಂಗ್​ಗಾಗಿ ಮರ ಕಡಿಯಲಾಗಿದೆ ಎಂದು ಹೇಳಲಾದ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ’ ಎಂದು ಎಚ್​​ಎಂಟಿ ಹೇಳಿದೆ.

‘ಟಾಕ್ಸಿಕ್’ ಸಿನಿಮಾದಿಂದ ಮರ ಕಡಿದ ಆರೋಪ; ಮೊದಲ ಬಾರಿಗೆ ಸ್ಪಷ್ಟನೆ ಕೊಟ್ಟ ಎಚ್​​ಎಂಟಿ
ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Oct 31, 2024 | 10:31 AM

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಸೆಟ್ ಹಾಕಿತ್ತು. ಸೆಟ್​​ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಬಂದಿದೆ. HMTಗೆ ಸಂಬಂಧಿಸಿದ ಜಾಗದಲ್ಲಿ ಸೆಟ್​ ಹಾಕಲಾಗಿತ್ತು ಎನ್ನಲಾಗಿತ್ತು. ಇದಕ್ಕೆ ಸಂಬಂಧಿಸಿ ಎಚ್​ಎಂಟಿ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಅವರು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಈ ಜಾಗಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಯಶ್ ನಟನೆಯ ‘ಟಾಕ್ಸಿಕ್’ ತಂಡದವರು ಎಚ್​ಎಂಟಿ ಜಾಗದಲ್ಲಿ ಸೆಟ್​ ಹಾಕಿದ್ದರು ಎಂದು ಹೇಳಲಾಗಿತ್ತು. ಆದರೆ, ಇದು ತಮ್ಮ ಜಾಗ ಅಲ್ಲ ಎಂದು ಎಚ್​​ಎಂಟಿ ಹೇಳಿದೆ. ‘ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಶೂಟಿಂಗ್​ಗಾಗಿ ಮರ ಕಡಿಯಲಾಗಿದೆ ಎಂದು ಹೇಳಲಾದ ಜಾಗವು ಕೆನರಾ ಬ್ಯಾಂಕ್ ಒಡೆತನದಲ್ಲಿದೆ’ ಎಂದು ಎಚ್​​ಎಂಟಿ ಹೇಳಿದೆ.

ಮುಂದುವರಿದು, ‘ಯಾವುದೇ ಸಿನಿಮಾ ತಂಡದವರಿಗೆ ಕೆನರಾ ಬ್ಯಾಂಕ್ ಆಸ್ತಿಯನ್ನು ಬಳಕೆ ಕೊಟ್ಟರೆ ಅದಕ್ಕೂ ಎಚ್​​ಎಂಟಿಗೂ ಸಂಬಂಧ ಇಲ್ಲ. ಈ ಪ್ರದೇಶದಲ್ಲಿರುವ ಎಚ್​​ಎಂಟಿ ಮಾಲೀಕತ್ವದ ಭೂಮಿಯಲ್ಲಿ ಯಾವುದೇ ಮರಗಳನ್ನು ಕತ್ತರಿಸಲಾಗಿಲ್ಲ’ ಎಂದಿದ್ದಾರೆ ಅವರು.

ಈ ಮೊದಲು ಮಾತನಾಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ‘ಹೆಚ್​ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ. ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟು, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಯಾವುದೇ ಅಧಿಕಾರ ಇಲ್ಲ’ ಎಂದು ಈಶ್ವರ ಖಂಡ್ರೆ ಅವರು ಹೇಳಿದ್ದರು.

ಇದನ್ನೂ ಓದಿ: ‘ಇದು ರಾಕಿಯ ಕೆಜಿಎಫ್’; ದಳಪತಿ ವಿಜಯ್ ರ‍್ಯಾಲಿಯನ್ನು ಯಶ್ ಚಿತ್ರಕ್ಕೆ ಹೋಲಿಸಿದ ಫ್ಯಾನ್ಸ್

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ದೊಡ್ಡ ಬಜೆಟ್​ನಲ್ಲಿ ರೆಡಿ ಆಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಒಂದು ತಿಂಗಳ ಶೂಟಿಂಗ್ ನಡೆದಿದೆ. ಈ ಸಿನಿಮಾನ 2025ರ ಏಪ್ರಿಲ್​ನಲ್ಲಿ ರಿಲೀಸ್ ಮಾಡಲು ಸಾಧ್ಯವಿಲ್ಲ ಎಂದು ಯಶ್ ಅವರು ಇತ್ತೀಚಿಗಿನ ಸಂದರ್ಶನದಲ್ಲಿ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ