ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ

Toxic Team: ಯಶ್ ನಟನೆಯ ‘ಟಾಕ್ಸಿಕ್’ ಚಿತ್ರತಂಡ ಬೆಂಗಳೂರಿನಲ್ಲಿ ಬಹುತೇಕ ಶೂಟಿಂಗ್ ಮುಗಿಸಿದ್ದು ಇದೀಗ ಮುಂಬೈಗೆ ಸ್ಥಳಾಂತರಗೊಳ್ಳುತ್ತಿದೆ. ಮುಂಬೈನಲ್ಲಿ 45 ದಿನಗಳ ಶೂಟಿಂಗ್​ನಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ
Follow us
|

Updated on:Oct 08, 2024 | 11:46 AM

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಭಾರತದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಯಶ್, ದೊಡ್ಡದೊಂದು ಪ್ರತಿಭಾವಂತ ತಂಡ ಕಟ್ಟಿಕೊಂಡು ಕೆಲ ವಾರಗಳ ಹಿಂದೆ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಸೆಟ್ ಹಾಕಿ ಸುಮಾರು 30 ದಿನಗಳ ಚಿತ್ರೀಕರಣವನ್ನು ಚಿತ್ರತಂಡ ಮುಗಿಸಿದೆ. ನಯನತಾರಾ, ಬಾಲಿವುಡ್​ ನಟ, ಹಾಲಿವುಡ್​ ನಟರುಗಳು ಬೆಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಯಶ್ ಜೊತೆಯಾಗಿ ಇಡೀ ತಂಡ ಮುಂಬೈಗೆ ಶಿಫ್ಟ್ ಆಗುತ್ತಿದೆ.

ನಟ ಯಶ್ ಹಾಗೂ ‘ಟಾಕ್ಸಿಕ್’ ಚಿತ್ರತಂಡ ಬೆಂಗಳೂರಿನಲ್ಲಿ ಚಿತ್ರೀಕರಣ ಮುಗಿಸಿದ್ದು, ಇದೀಗ ಇಡೀ ಚಿತ್ರತಂಡ ಮುಂಬೈಗೆ ಶಿಫ್ಟ್ ಆಗುತ್ತಿದ್ದು, ಮುಂಬೈನಲ್ಲಿ 45 ದಿನಗಳ ಕಾಲ ಸತತವಾಗಿ ಚಿತ್ರೀಕರಣ ನಡೆಸಲಿದೆ. ಕೆಲವು ವಿಎಫ್​ಎಕ್ಸ್ ಭಾಗದ ಚಿತ್ರೀಕರಣ ಸೇರಿದಂತೆ ಆನ್ ಲೊಕೇಶನ್ ಚಿತ್ರೀಕರಣವೂ ಸಹ ಮುಂಬೈ ನಲ್ಲಿ ನಡೆಯಲಿದೆ. ಹೀಗಾಗಿ ಇಡೀ ಚಿತ್ರತಂಡ ಮುಂಬೈಗೆ ಶಿಫ್ಟ್ ಆಗುತ್ತಿದೆ.

ಇದನ್ನೂ ಓದಿ:ಬೆಂಗಳೂರಿನಿಂದ ಮುಂಬೈಗೆ ಹೊರಟ ಯಶ್ ಆಂಡ್ ಟೀಂ, ಜತೆ ಸೇರಲಿರುವ ಬಾಲಿವುಡ್ ಬೆಡಗಿ

ಮುಂಬೈನಲ್ಲಿ ಕೆಲವು ನಟ-ನಟಿಯರು ‘ಟಾಕ್ಸಿಕ್’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಅದರಲ್ಲೂ ವಿಶೇಷವಾಗಿ ಸಿನಿಮಾದ ನಾಯಕಿ ಕಿಯಾರಾ ಅಡ್ವಾಣಿ, ‘ಟಾಕ್ಸಿಕ್’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದು, ಕಿಯಾರಾ ಅವರು 45 ದಿನವೂ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಿಯಾರಾ ನಟಿಸಲಿರುವ ಎಲ್ಲ ದೃಶ್ಯಗಳ ಚಿತ್ರೀಕರಣವನ್ನು ಈ 45 ದಿನಗಳಲ್ಲಿಯೇ ಪೂರ್ಣಗೊಳಿಸಲಿದೆ ಚಿತ್ರತಂಡ. ಯಶ್ ಸಹ ಲುಕ್ ಬದಲಾಯಿಸಿಕೊಂಡು ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ.

‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಿ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾಕ್ಕೆ ಕೆವಿಎನ್ ಪ್ರೊಡಕ್ಷನ್ಸ್​ನವರು ಬಂಡವಾಳ ತೊಡಗಿಸಿದ್ದಾರೆ. ಸುಮಾರು 300 ಕೋಟಿಗೂ ಹೆಚ್ಚು ಬಜೆಟ್​ನಲ್ಲಿ ಸಿನಿಮಾ ಚಿತ್ರೀಕರಣಗೊಳ್ಳುತ್ತಿದೆ. ಸಿನಿಮಾದಲ್ಲಿ ಯಶ್, ಕಿಯಾರಾ, ನಯನತಾರಾ, ಅಕ್ಷಯ್ ಒಬೆರಾಯ್, ವಿದೇಶಿ ನಟರಾದ ಬೆನಡಿಕ್ಟ್, ಕೈಲಿ ಪೌಲ್ ಇನ್ನಿತರರು ನಟಿಸುತ್ತಿದ್ದಾರೆ. ಕೆಲವು ವಿದೇಶಿ ತಂತ್ರಜ್ಞರು ಸಹ ಈ ಸಿನಿಮಾಕ್ಕೆ ಜೊತೆಯಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Tue, 8 October 24

ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್