AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..

ಗೀತು ಮೋಹನ್​ದಾಸ್​ ಅವರು ಈಗಾಗಲೇ ಭರವಸೆಯ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದಾರೆ. ಅವರ ಜೊತೆ ಈಗ ಯಶ್​ ಕೈ ಜೋಡಿಸಿರುವುದರಿಂದ ನಿರೀಕ್ಷೆ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಕನ್ನಡದ ಸಿನಿಮಾಗೆ ಗೌರವ ಮತ್ತು ಮನ್ನಣೆ ದೊರಕಿಸಿ ಕೊಡುವ ಗುರಿಯನ್ನು ಯಶ್​ ಇಟ್ಟುಕೊಂಡಿದ್ದಾರೆ.

Toxic: ಆಸ್ಕರ್​ ಪ್ರಶಸ್ತಿ ಮೇಲೆ ಯಶ್​ ಕಣ್ಣು? ‘ಟಾಕ್ಸಿಕ್​’ ಸಿನಿಮಾ ಹಿಂದಿನ ಲೆಕ್ಕಾಚಾರ ಹೀಗಿದೆ..
ಯಶ್​
ಮದನ್​ ಕುಮಾರ್​
|

Updated on: Dec 08, 2023 | 11:59 AM

Share

ಯಶ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಹೆಸರು ಮಾಡಿದ್ದಾರೆ. ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ಅವರ ಹವಾ ಹೆಚ್ಚುತ್ತಲೇ ಇದೆ. ಈಗ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ‘ಟಾಕ್ಸಿಕ್​’ (Toxic) ಎಂದು ಶೀರ್ಷಿಕೆ ಇಡಲಾಗಿದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ದಾಸ್​ (Geetu Mohandas) ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಕಾಂಬಿನೇಷನ್​ನ ಹಿಂದೆ ‘ಆಸ್ಕರ್​ ಪ್ರಶಸ್ತಿ’ (Oscar Awards) ಪಡೆಯುವ ಗುರಿ ಇದೆಯಾ ಎಂಬ ಪ್ರಶ್ನೆ ಮೂಡಿದೆ. ಬಾಕ್ಸ್​ ಆಫೀಸ್​ ಗಳಿಕೆಯ ಬಗ್ಗೆ ಭರವಸೆ ಹೊಂದಿರುವ ಯಶ್​ ಅವರು ಈಗ ಪ್ರತಿಷ್ಠಿತ ಪ್ರಶಸ್ತಿಗಳ ಮೇಲೆ ಕಣ್ಣು ಇಟ್ಟಿದ್ದಾರೆ ಎಂಬುದು ಸಿನಿಪ್ರಿಯರ ಅಭಿಪ್ರಾಯ.

ಗೀತು ಮೋಹನ್​ದಾಸ್​ ಅವರು ಈಗಾಗಲೇ ಭರವಸೆಯ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದಾರೆ. ಅವರು ನಿರ್ದೇಶಿಸಿದ ‘ಲೈಯರ್ಸ್​ ಡೈಸ್​’ ಸಿನಿಮಾ 87ನೇ ಆಸ್ಕರ್​ ಪ್ರಶಸ್ತಿಯ ಸ್ಪರ್ಧೆಗೆ ಭಾರತದಿಂದ ಅಧಿಕೃತವಾಗಿ ಕಳಿಸಲ್ಪಟ್ಟಿತ್ತು. ಅಲ್ಲದೇ ಅದೇ ಸಿನಿಮಾಗೆ ಎರಡು ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಹಾಗಾಗಿ ಪ್ರಶಸ್ತಿ ಗಳಿಸುವಂತಹ ಸಿನಿಮಾಗಳನ್ನು ಹೇಗೆ ಮಾಡಬೇಕು ಎಂಬುದು ಗೀತು ಮೋಹನ್​ದಾಸ್​ ಅವರಿಗೆ ಚೆನ್ನಾಗಿ ತಿಳಿದಿದೆ. ಇದೇ ಕಾರಣದಿಂದ ಅವರ ಜೊತೆ ಯಶ್​ ಕೈ ಜೋಡಿಸಿರಬಹುದು ಎಂಬ ಅನಿಸಿಕೆ ಹಲವರದ್ದು.

Toxic: ಯಶ್​ ಹೊಸ ಚಿತ್ರದ ನಿರ್ದೇಶಕಿ ಗೀತು ಮೋಹನ್​ದಾಸ್​ ಯಾರು? ಇಲ್ಲಿದೆ ಪರಿಚಯ

‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಯಶ್ ಅವರು ಸಾಕಷ್ಟು ಖ್ಯಾತಿ ಗಳಿಸಿದ್ದಾರೆ. ಆ ಸಿನಿಮಾಗಳು ಸೂಪರ್​ ಹಿಟ್​ ಆದ ಬಳಿಕ ಅವರು ಜಾಗತಿಕ ಮಟ್ಟದ ಕೆಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುವ ಸಾಮರ್ಥ್ಯ ಅವರಿಗೆ ಇದೆ. ಹಾಗಾಗಿ ಹಣಕ್ಕಿಂತಲೂ ಹೆಚ್ಚಾಗಿ ಜಾಗತಿಕ ಮಟ್ಟದಲ್ಲಿ ಕನ್ನಡದ ಸಿನಿಮಾಗೆ ಗೌರವ ಮತ್ತು ಮನ್ನಣೆ ದೊರಕಿಸಿ ಕೊಡುವ ಗುರಿಯನ್ನು ಅವರು ಇಟ್ಟುಕೊಂಡಿದ್ದಾರೆ.

ಕಳೆದ ಸಾಲಿನ ಆಸ್ಕರ್​ ಪ್ರಶಸ್ತಿಯಲ್ಲಿ ‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡಿಗೆ ಪ್ರಶಸ್ತಿ ಬಂತು. ತೆಲುಗು ಚಿತ್ರಕ್ಕೆ ಇದು ಸಾಧ್ಯವಾಗುತ್ತದೆ ಎಂದಾದರೆ ಕನ್ನಡಕ್ಕೂ ಸಾಧ್ಯವಾಗುತ್ತದೆ ಎಂಬುದನ್ನು ‘ಟಾಕ್ಸಿಕ್​’ ಸಿನಿಮಾ ಸಾಬೀತು ಮಾಡಲಿದೆಯಾ ಎಂಬುದನ್ನು ಕಾದು ನೋಡಬೇಕು. ಈ ಸಿನಿಮಾದಲ್ಲಿ ಹಾಲಿವುಡ್​ನ ಅನೇಕ ತಂತ್ರಜರು ಕೆಲಸ ಮಾಡುವ ಸಾಧ್ಯತೆ ಇದೆ. ಈ ಎಲ್ಲ ವಿಚಾರಗಳ ಬಗ್ಗೆ ಹಂತ ಹಂತವಾಗಿ ಮಾಹಿತಿ ಬಹಿರಂಗ ಆಗಲಿದೆ. ಈ ಸಿನಿಮಾಗೆ ‘ಕೆವಿಎನ್​ ಪ್ರೊಡಕ್ಷನ್ಸ್​’ ಬಂಡವಾಳ ಹೂಡುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?